“ಮಹಿಳಾ ಮೀಸಲಾತಿ: ಎಲ್ಲ ಪಕ್ಷಗಳ ಒಮ್ಮತದ ನಿರ್ಧಾರ ಅಗತ್ಯ’
Team Udayavani, Mar 9, 2017, 3:40 PM IST
ಉಡುಪಿ: ಮಹಿಳೆಯರಿಗೆ ಶೇ. 50 ಮೀಸಲಾತಿ ತರುವ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಒಮ್ಮತದ ನಿರ್ಧಾರ ಅತೀ ಅಗತ್ಯವೆಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯರಾದ ರೇಶ್ಮಾ ಉದಯ ಕುಮಾರ ಶೆಟ್ಟಿ ಹೇಳಿದರು.
ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮಮತೆಯ ಸಾಕಾರ ಮೂರ್ತಿ ಮಹಿಳೆಯಾಗಿದ್ದಾಳೆ. ಸಂಸ್ಕಾರ ನೀಡುವ ಜವಾಬ್ದಾರಿಯೊಂದಿಗೆ ಕುಟುಂಬವನ್ನು ನಿರ್ವಹಿಸುವ ವಿಶೇಷ ಶಕ್ತಿಯೂ ಆಕೆಯಲ್ಲಿದೆ. ಈ ನಿಟ್ಟಿನಲ್ಲಿ ಮಹಿಳೆಯರ ಭಾವನೆಗಳನ್ನು ಗೌರವಿಸುವ ಪರಿಸ್ಥಿತಿ ಮತ್ತಷ್ಟು ತೀವ್ರವಾಗಬೇಕು ಹಾಗೂ ಮಹಿಳೆ ತನಗೆ ಸಿಕ್ಕ ಸ್ವಾತಂತ್ರ್ಯ ಸ್ವೇಚ್ಛಾಚಾರಕ್ಕೆ ತಿರುಗದಂತೆ ಎಚ್ಚರಿಕೆ ವಹಿಸಬೇಕೆಂದೂ ಅವರು ಹೇಳಿದರು.
ಮಾಧ್ಯಮ ಪ್ರಕೋಷ್ಠದ ಸಂಚಾಲಕರಾದ ಪೂರ್ಣಿಮಾ ಸುರೇಶ್, ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ನಗರ ವಿಭಾಗದ ಅಧ್ಯಕ್ಷರಾದ ರಜನಿ ಹೆಬ್ಟಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ರಮೇಶ್, ರಕ್ತ ನಿಧಿಯ ಅಧಿಕಾರಿ ಡಾ| ವೀಣಾ ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನಯನ ಗಣೇಶ್ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ವೀಣಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ