ಕಡಿಮೆ ಖರ್ಚಿನಲ್ಲಿ ಬಾವಿಗೆ ನೀರಿಂಗಿಸುವ ಕೆಲಸ !
ಜಲ ಸಂಪನ್ಮೂಲ: ಮನೆ ಮನೆಗೆ ಮಳೆಕೊಯ್ಲು ಉದಯವಾಣಿ ಅಭಿಯಾನ
Team Udayavani, Sep 19, 2019, 5:47 AM IST
ಪಳ್ಳಿ: ಉದಯವಾಣಿಯ ಜಲಸಾಕ್ಷರ ಅಭಿಯಾನದಿಂದ ಪ್ರೇರಣೆ ಗೊಂಡು ಕಲ್ಯಾ ಗ್ರಾಮದ ಕುಂಟಾಡಿ ಅಶೋಕ್ ನಗರ ನಿವಾಸಿ ಹೇಮಾವತಿ ಅವರು ತಮ್ಮ ಮನೆಗೆ ಮಳೆಕೊಯ್ಲು ಪದ್ಧತಿ ಅನುಷ್ಠಾನ ಮಾಡಿದ್ದಾರೆ. ಈ ಮೂಲಕ ಸಂಗ್ರಹಿಸಿದ ಮಳೆ ನೀರನ್ನು ಶುದ್ಧೀಕರಿಸಿ ಬಾವಿಗೆ ಹಾಯಿಸುತ್ತಿದ್ದಾರೆ. ಕಳೆದ ಬೇಸಗೆಯಲ್ಲಿ ನೀರಲ್ಲದೆ ಬಾವಿ ಬರಿದಾಗಿತ್ತು. ಬಾವಿಯ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಅತೀ ಕಡಿಮೆ ಖರ್ಚಿನಲ್ಲಿ ಮಳೆಕೊಯ್ಲು ಘಟಕ ನಿರ್ಮಿಸುವ ಮೂಲಕ ಇವರು ಇದೀಗ ಮಾದರಿಯಾಗಿದ್ದಾರೆ.
500 ಲೀ. ಸಾಮಾರ್ಥ್ಯವುಳ್ಳ ಟ್ಯಾಂಕ್ನಲ್ಲಿ ಮಳೆ ನೀರು ಸಂಗ್ರಹಿಸಿ ಬಳಿಕ ಅದನ್ನು ಶುದ್ಧೀಕರಿಸಿ ಬಾವಿಗೆ ಹಾಯಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಬಾವಿಯ ನೀರಿನ ಮಟ್ಟದಲ್ಲೂ ಏರಿಕೆ ಕಂಡುಬಂದಿದ್ದು, ಬೇಸಗೆಯಲ್ಲಿ ಈ ಬಾರಿ ನೀರನ ಅಭಾವವಾಗದು ಎಂಬ ಆಶಾಭಾವದಲ್ಲಿ ಹೇಮಾವತಿ ಅವರಿದ್ದಾರೆ.
ಕಡಿಮೆ ಖರ್ಚು
ಕಡಿಮೆ ಖರ್ಚಿನಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಬೇಸಗೆಯಲ್ಲಿ ಉಂಟಾಗುವ ನೀರಿನ ಅಭಾವವನ್ನು ತಪ್ಪಿಸಬುದು. ಈ ನಿಟ್ಟಿನಲ್ಲಿ ಯೋಜನೆ ಅಳವಡಿಸಿಕೊಂಡಿದ್ದೇವೆ.
– ಹೇಮಾವತಿ, ಅಶೋಕ್ ನಗರ
ನೀವೂ ಅಳವಡಿಸಿ, ವಾಟ್ಸಪ್ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿರುವುದು ಗಮನಕ್ಕೆ ಬಂದಿದೆ. ಇನ್ನಷ್ಟು ಮಂದಿಯನ್ನು ಜಲ ಸಂರಕ್ಷಣೆ ಯತ್ತ ತೊಡಗಿಸಲು, ನಿಮ್ಮ ಮನೆಯಲ್ಲಿ ಕೈಗೊಂಡ ಮಳೆ ಕೊಯ್ಲು ವ್ಯವಸ್ಥೆಯ ಕುರಿತು ವಿವರಿಸಿ, ಫೋಟೋ ವಾಟ್ಸಪ್ನಲ್ಲಿ ಕಳುಹಿಸಿ. ಅವುಗಳನ್ನು ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ.
-7618774529
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ