ಯಡಮೊಗೆ; ಕಾಲು ಸಂಕದಿಂದ ಆಯತಪ್ಪಿ ನದಿಗೆ ಬಿದ್ದು ವೃದ್ಧ ಮೃತ್ಯು
Team Udayavani, Jul 5, 2023, 4:27 PM IST
ಸಿದ್ದಾಪುರ(ಕುಂದಾಪುರ) : ಇಲ್ಲಿನ ಯಡಮೊಗೆ ಗ್ರಾಮದಲ್ಲಿ ಮಂಗಳವಾರ ಸಂಜೆ ಕುಬ್ಜಾ ನದಿಗೆ ಅಡ್ಡಲಾಗಿ ಹಾಕಿದ್ದ ಖಾಯಂ ಸಣ್ಣ ಸೇತುವೆಗೆ ಅಡ್ಡಲಾಗಿದ್ದ ಮರದಿಂದ ಮಾಡಿದ್ದ ತಾತ್ಕಾಲಿಕ ಕಾಲು ಸಂಕದಿಂದ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ವೃದ್ಧರೊಬ್ಬರು ನೀರು ಪಾಲಾದ ಘಟನೆ ನಡೆದಿದೆ.
ಮೃತ ದುರ್ದೈವಿ ಶೇಷಾದ್ರಿ ಐತಾಳ್ (73) ಎನ್ನುವವರಾಗಿದ್ದು,ಇವರು ಕಮಲಶಿಲೆ ದೇವಾಲಯದಲ್ಲಿ ಹಿರಿಯ ಅರ್ಚಕರಾಗಿ ಪೂಜಾ ವಿಧಿಗಳನ್ನು ನಡೆಸುತ್ತಿದ್ದರು. ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಅವರ ಮನೆಯ ಬಳಿ ಘಟನೆ ನಡೆದಿದೆ. ಮೃತ ದೇಹ ಬುಧವಾರ ಬೆಳಗ್ಗೆ 10. 45ರ ಸುಮಾರಿಗೆ ಬಿದ್ದ ಸ್ಥಳದ 50 ಮೀಟರ್ ದೂರದಲ್ಲಿ ಪತ್ತೆಯಾಗಿದೆ.ಮೃತದೇಹವನ್ನು ಅಂಪಾರು ವಲಯದ ಶೌರ್ಯ ವಿಪತ್ತು ತಂಡದ ಮಂಜುನಾಥ್ ನಾಯ್ಕ್ ಮತ್ತು ತಂಡದವರು ಮೇಲಕೆತ್ತುವಲ್ಲಿ ಸಹಕರಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಪೊಲೀಸರು ಸ್ಥಳದಲ್ಲೇ ಹಾಜರಿದ್ದು ಸ್ಥಳ ತನಿಖೆ ವರದಿ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್