ಕರಾವಳಿಯಲ್ಲಿ ಗರಿಗೆದರಿದ ಕಲಾ ಚಟುವಟಿಕೆ; ಕೋವಿಡ್‌ ವಿಧಿಸಲಾಗಿದ್ದ ನಿರ್ಬಂಧಗಳೆಲ್ಲ ತೆರವು


Team Udayavani, Jan 31, 2022, 7:10 AM IST

ಕರಾವಳಿಯಲ್ಲಿ ಗರಿಗೆದರಿದ ಕಲಾ ಚಟುವಟಿಕೆ; ಕೋವಿಡ್‌ ವಿಧಿಸಲಾಗಿದ್ದ ನಿರ್ಬಂಧಗಳೆಲ್ಲ ತೆರವು

ಉಡುಪಿ: ರಾಜ್ಯ ಸರಕಾರ ರಾತ್ರಿ ಕರ್ಫ್ಯೂ ಸೇರಿದಂತೆ ವಿವಿಧ ನಿರ್ಬಂಧಗಳನ್ನು ಸಡಿಲಿಸಿದ ಕಾರಣ ಕರಾವಳಿ ಜಿಲ್ಲೆಗಳ ಬಹುತೇಕ ಮಂದಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ವರ್ಷಾರಂಭ, ವಿವಿಧ ಸೀಸನ್‌ಗಳು ಇರುವ ಈ ಸಂದರ್ಭದಲ್ಲಿ ಕರ್ಫ್ಯೂ, ಲಾಕ್‌ಡೌನ್‌ ವಿಧಿಸಿದರೆ ಜನಸಾಮಾನ್ಯರ ಆದಾಯಕ್ಕೆ ಬಹುದೊಡ್ಡ ಹೊಡೆತ ಬೀಳುತ್ತದೆ. ಈ ಬಗ್ಗೆ ಸರಕಾರಕ್ಕೂ ಹಲವಾರು ಬಾರಿ ಮನವಿ ಸಲ್ಲಿಸಲಾಗಿತ್ತು.
ಕರಾವಳಿಯಲ್ಲಿ ಈ ಸಮಯದಲ್ಲಿ ಮುಖ್ಯವಾಗಿ ನೇಮ, ಯಕ್ಷಗಾನ, ದೈವಾ ರಾಧನೆ, ನಾಟಕ, ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆಯುವುದು ವಾಡಿಕೆ. ಕಳೆದ 2 ವರ್ಷಗಳಿಂದ ಸರಿಯಾಗಿ ಯಾವುದನ್ನೂ ನೆರವೇರಿಸಲಾಗದೆ ಜನರು ಆತಂಕದಲ್ಲಿದ್ದರು. ಈಗ ಎಲ್ಲ ಆಚರಣೆ ನಡೆಸಲು ಸರಕಾರ ಅಧಿಕೃತ ಅನುಮತಿ ನೀಡಿರುವು ದರಿಂದ ಸಂತಸಗೊಂಡಿದ್ದಾರೆ.

ಸಾಮಾನ್ಯ ದಿನಗಳಲ್ಲಿ ರಾತ್ರಿವೇಳೆ ಪ್ರಾರಂಭವಾಗುತ್ತಿದ್ದ ಯಕ್ಷಗಾನ ರಾತ್ರಿ ಕರ್ಫ್ಯೂ ಸಂದರ್ಭ ಅಪರಾಹ್ನದ ಬಳಿಕ ಆರಂಭಗೊಳ್ಳುತ್ತಿತ್ತು. ಇದರಿಂದ ಪ್ರೇಕ್ಷಕರ ಸಂಖ್ಯೆಯೂ ವಿಪರೀತ ಇಳಿಕೆ ಕಂಡಿತ್ತು. ರಾತ್ರಿ 10ರ ಮೊದಲು ಮುಗಿಸಬೇಕಾದ ಒತ್ತಡ ದಿಂದ ಈಗ ಮುಕ್ತಿ ಸಿಕ್ಕಿದೆ ಎಂದಿದ್ದಾರೆ ಮಂದಾರ್ತಿ ದೇವಸ್ಥಾನದ ಮೊಕ್ತೇಸರ ಧನಂಜಯ ಶೆಟ್ಟಿ.

ಸೀಸನ್‌ ಅವಧಿಯಲ್ಲಿಯೇ ದುಡಿ ಯುವ ವರ್ಗ ಕಲಾವಿದರದ್ದು. ನಾಟಕಗಳ ಲ್ಲಿಯೂ ಹಲವಾರು ಕಲಾವಿದರು ತಮ್ಮ ಇಡೀ ವರ್ಷದ ಆದಾಯವನ್ನು ಕೆಲವೇ ತಿಂಗಳುಗಳಲ್ಲಿ ಸಂಪಾದಿಸುವ ತುಡಿತದಲ್ಲಿರುತ್ತಾರೆ. ಕೆಲವು ವರ್ಷಗಳಿಂದ ಸರಿಯಾದ ದುಡಿಮೆ ಇಲ್ಲದೆ ಇವರ ಜೀವನ ಕಷ್ಟಕರವಾಗಿತ್ತು. ಈಗ ಸರಕಾರ ನಿರ್ಧಾರ ಬದಲಾಯಿಸಿರುವುದು ಉತ್ತಮ ಬೆಳವಣಿಗೆ ಎನ್ನುತ್ತಾರೆ ಉಡುಪಿ ರಂಗಭೂಮಿಯ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ.

ಶಾಮಿಯಾನದವರಿಗೂ ಸಂತಸ
ಸೀಮಿತ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರುತ್ತಿದ್ದುದರಿಂದ ಕುರ್ಚಿ, ಶಾಮಿಯಾನಗಳು ಕಡಿಮೆ ಸಂಖ್ಯೆಯಲ್ಲಿ ಬಾಡಿಗೆಗೆ ಹೋಗುತ್ತಿದ್ದವು. ಮುಂದಿನ ದಿನಗಳಲ್ಲಿಯಾದರೂ ಈ ಹಿಂದಿನಂತೆ ಬೇಡಿಕೆ ಬಂದರೆ ಇದನ್ನು ನಂಬಿ ಜೀವನ ನಡೆಸುವವರಿಗೆ ನೆಮ್ಮದಿ ಸಿಗಲಿದೆ. ಸೀಮಿತ ಸಂಖ್ಯೆಯಲ್ಲಿ ಜನರು ಸೇರಿ ಸರಳವಾಗಿ ಸಮಾರಂಭ ಆಯೋಜಿಸುತ್ತಿದ್ದುದರಿಂದ ಸಬಾಭವನಗಳಿಗೆ ನಷ್ಟ ಉಂಟಾಗಿತ್ತು ಎನ್ನುತ್ತಾರೆ ಉಡುಪಿ ಜಿಲ್ಲಾ ಸಭಾಭವನಗಳ ಒಕ್ಕೂಟದ ಅಧ್ಯಕ್ಷ ಶೇಡಿಕೊಡ್ಲು ವಿಠಲ ಶೆಟ್ಟಿ.

ದೈವಾರಾಧಕರಿಗೂ ನೆಮ್ಮದಿ
ನಮಗೆ ಡಿಸೆಂಬರ್‌ನಿಂದ ಮೇ ತನಕ ಸೀಸನ್‌. ಇದುವರೆಗೆ ಸೀಮಿತ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು ಎನ್ನುವ ನಿಯಮ ಇದ್ದುದರಿಂದ ಕೆಲವರು ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದರು. ಇದರಿಂದ ದೈವಾರಾಧಕರಿಗೆ ತೊಂದರೆ ಉಂಟಾಗಿತ್ತು. ಈಗ ಸರಕಾರ ಅನುಮತಿ ಕೊಟ್ಟಿರುವುದರಿಂದ ಈ ಹಿಂದಿನಂತೆ ಸಂಪ್ರ ದಾಯವನ್ನು ಮುಂದುವರಿಸಿಕೊಂಡು ಹೋಗಬಹುದಾಗಿದೆ ಎಂದು ಅಖೀಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದ ಕಾರ್ಯದರ್ಶಿ ವಿನೋದ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.