“ಯಕ್ಷಗಾನ ಸಂಪ್ರದಾಯದ ಸಂರಕ್ಷಣೆಗೆ ಅಕಾಡೆಮಿ ಬದ್ಧ ‘
Team Udayavani, Feb 23, 2017, 4:57 PM IST
ಉಡುಪಿ: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಪ್ರಾದೇಶಿಕ ರಂಗಕಲೆಗಳ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಿರುವ ಯಕ್ಷಗಾನ ಭಾಗವತಿಕೆ ಮತ್ತು ಹೆಜ್ಜೆಗಾರಿಕೆ ವಿಷಯಗಳ ಐದು ದಿನಗಳ ದೃಶ್ಯ-ಶ್ರವಣ ದಾಖಲಾತಿಯ ಎರಡನೆಯ ದಿನ ತೆಂಕುತಿಟ್ಟಿನ ಹಿರಿಯ ಭಾಗವತರ ಸಾಂಪ್ರದಾಯಿಕ ಶೈಲಿಯ ಭಾಗವತಿಕೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
ಮಣಿಪಾಲ ಎಸ್ಒಸಿ ಚಿತ್ರೀಕರಣ ಕೊಠಡಿಯಲ್ಲಿ ಜರಗಿದ ದಾಖಲೀಕರಣ ಕಾರ್ಯಕ್ರಮದ ಆರಂಭದಲ್ಲಿ ಅಕಾಡೆಮಿ ಸದಸ್ಯ ಸಂಚಾಲಕ ಪಿ. ಕಿಶನ್ ಹೆಗ್ಡೆಯವರು, ಯಕ್ಷಗಾನದ ದಾಖಲೀಕರಣದ ಔಚಿತ್ಯವನ್ನು ವಿವರಿಸಿ ಮರೆಯಾಗುತ್ತಿರುವ ಸಾಂಪ್ರದಾಯಿಕ ಶೈಲಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಕಾಡೆಮಿ ಪ್ರಸ್ತುತ ಯೋಜನೆಯನ್ನು ಹಾಕಿಕೊಂಡಿದೆ ಎಂದರು.
ಬಲಿಪ ನಾರಾಯಣ ಭಾಗವತ, ಅಗರಿ ರಘುರಾಮ ಭಾಗವತ, ತೆಂಕಬೈಲು ತಿರುಮಲೇಶ್ವರ ಶಾಸಿŒ, ಕುರಿಯ ಗಣಪತಿ ಶಾಸಿŒ, ಕುಬಣೂರು ಶ್ರೀಧರ ರಾವ್, ಲೀಲಾವತಿ ಬೈಪಾಡಿತ್ತಾಯ ಮತ್ತು ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರ ಭಾಗವತಿಕೆಗೆ ಪದ್ಯಾಣ ಶಂಕರನಾರಾಯಣ ಭಟ್, ಹರಿನಾರಾಯಣ ಬೈಪಾಡಿತ್ತಾಯ, ದೇಲಂತಮಜಲು ಸುಬ್ರಹ್ಮಣ್ಯ ಭಟ್ ಚಂಡೆ-ಮದ್ದಲೆ ಸಾಥಿ ನೀಡಿದರು. ಗಣೇಶ ಕೊಲೆಕಾಡಿ ಮತ್ತು ನಿತ್ಯಾನಂದ ರಾವ್ ಸುರತ್ಕಲ್ ಅನುಕ್ರಮವಾಗಿ ಛಂದಸ್ಸು ಮತ್ತು ಸಂಗೀತಶಾಸ್ತ್ರಗಳ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಎಂ.ಎಲ್. ಸಾಮಗ ದಾಖಲಾತಿಯ ಸಂಯೋಜನೆಯಲ್ಲಿ ಸಹಕರಿಸಿದರು.
ಕೇಂದ್ರದ ಸಂಯೋಜನಾಧಿಕಾರಿ ಪ್ರೊ| ವರದೇಶ ಹಿರೇಗಂಗೆ ಪ್ರಸ್ತಾವನೆಗೈದರು. ಸಹಸಂಯೋ ಜನಾಧಿಕಾರಿ ಡಾ| ಅಶೋಕ ಆಳ್ವ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ