ಸಾರಥಿ ಇಲ್ಲದೆ ಸೊರಗಿದ ಯಕ್ಷಗಾನ ಅಕಾಡೆಮಿ

ಮಹತ್ವಾಕಾಂಕ್ಷಿ ಯೋಜನೆ ನನೆಗುದಿಗೆ; ಪ್ರಶಸ್ತಿ ಪ್ರದಾನವೂ ನಡೆದಿಲ್ಲ

Team Udayavani, Oct 7, 2019, 5:30 AM IST

yakshagana-kirita

ಸಾಂದರ್ಭಿಕ ಚಿತ್ರ.

ಕೋಟ: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಹೊಸ ಸರಕಾರ ರಚನೆಯಾದಾಗ ಎಲ್ಲ ಅಕಾಡೆಮಿಗಳ ಪದಾಧಿಕಾರಿಗಳನ್ನು ವಜಾಗೊಳಿಸಿದ್ದು, ಯಕ್ಷಗಾನ ಅಕಾಡೆಮಿಯೂ ಸೇರಿದೆ. ತೆರವಾದ ಈ ಸ್ಥಾನಗಳಿಗೆ ಪುನರ್‌ ನೇಮಕ ಆಗದಿರುವುದ
ರಿಂದ ಹಲವಾರು ಮಹತ್ವಾಕಾಂಕ್ಷಿ ಕಾರ್ಯ ಕ್ರಮಗಳು ಸ್ಥಗಿತಗೊಂಡಿವೆ.

ಯಕ್ಷಗಾನ ಅಕಾಡೆಮಿಯಿಂದ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ,ಯಕ್ಷ ಸಿರಿ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನನೀಡಲಾಗುತ್ತದೆ. ಚುನಾವಣೆ, ಅರ್ಥಿಕ ಕೊರತೆ ಮುಂತಾದ ಕಾರಣಗಳಿಂದಾಗಿ 2018ನೇ ಸಾಲಿನಲ್ಲಿ ಈ ಕಾರ್ಯಕ್ರಮ ನಡೆದಿ ರಲಿಲ್ಲ. ಅನಂತರ 2018ರ ಪ್ರಶಸ್ತಿಗೆ 2019ರ ಜುಲೈಯಲ್ಲಿ 18 ಮಂದಿಯನ್ನು ಆಯ್ಕೆ ಮಾಡ ಲಾಗಿತ್ತು. ಆಗಸ್ಟ್‌ ಕೊನೆ ವಾರದಲ್ಲಿ ಶಿರಸಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ತಯಾರಿಯೂ ನಡೆದಿತ್ತು. ಅಷ್ಟರಲ್ಲೇ ಆಡಳಿತ ಮಂಡಳಿ ವಜಾ ಆಗಿ ಸ್ಥಗಿತಗೊಂಡಿದೆ.

ಪ್ರಸಂಗ ಡಿಜಿಟಲೀಕರಣ ಸ್ಥಗಿತ
ನೂರಾರು ಯಕ್ಷಗಾನ ಕೃತಿಗಳ ಡಿಜಿಟಲೀಕರಣ ಅಕಾಡೆಮಿಯ ಮಹತ್ವಾ ಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿತ್ತು. ಸೆಪ್ಟಂಬರ್‌ ಮೊದಲ ವಾರದಲ್ಲಿ ವೆಬ್‌ಸೈಟ್‌ ಲೋಕಾರ್ಪಣೆಗೆ ತಯಾರಿ ನಡೆಸಲಾಗಿತ್ತು. ಇದೂ ಸ್ಥಗಿತಗೊಂಡಿದೆ.

ಇತರ ಅಕಾಡೆಮಿಗಳಲ್ಲೂ ಇತರ ಹಲವು ಅಕಾಡೆಮಿಗಳಿಗೂ ಪದಾ ಧಿಕಾರಿ ನೇಮಕವಾಗದೆ ಇದೇ ಸ್ಥಿತಿ ಇದೆ.

ತರಬೇತಿ ಶಿಬಿರಗಳಿಗೆ ಹಿನ್ನಡೆ
ಯಕ್ಷಗಾನ ತರಬೇತಿ ಶಿಬಿರಗಳನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾ ಗಿತ್ತು ಮತ್ತು ನೂರಕ್ಕೂ ಮಿಕ್ಕಿ ಅರ್ಜಿಗಳು ಬಂದಿದ್ದವು. ಆದರೆ ಆಯ್ಕೆ ಹಂತದಲ್ಲಿ ಅಧಿಕಾರ ಇಲ್ಲವಾಯಿತು.

ಕೀರ್ತಿಶೇಷ ಕಲಾವಿದರನ್ನು ಸ್ಮರಿಸುವ “ಹಿರಿಯರ ನೆನಪು’ ಎನ್ನುವ ಅಪರೂಪದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಶ್ರೇಷ್ಠ ಕಲಾವಿದರು ಮತ್ತು ಯಕ್ಷಗಾನಕ್ಕೆ ಸಂಬಂಧಿಸಿದ ಪುಸ್ತಕ ರಚನೆ ಜಾರಿ ಯಲ್ಲಿತ್ತು. ಇವೆಲ್ಲ ಸ್ಥಗಿತಗೊಂಡಿವೆ.

ಅಕಾಡೆಮಿಯ ಅಧ್ಯಕ್ಷನಾಗಿ ಒಂದೇ ವರ್ಷದಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತಂದ ತೃಪ್ತಿ ಇದೆ. ಸರಕಾರ ಬದಲಾಯಿತೆಂದು ಅಕಾಡೆಮಿಯ ಪದಾಧಿಕಾರಿಗಳನ್ನು ಬರ್ಖಾಸ್ತುಗೊಳಿಸುವುದು ಕೆಟ್ಟ ಸಂಪ್ರದಾಯ. ನನಗೆ ಅಧಿಕಾರ ಹೋಗಿದೆ ಎನ್ನುವ ನೋವಿಲ್ಲ. ಕೈಗೆತ್ತಿಕೊಂಡ ಕೆಲಸಗಳು ಪೂರ್ಣಗೊಳ್ಳಲಿಲ್ಲವಲ್ಲ ಎನ್ನುವ ಬೇಸರವಿದೆ. ಆದಷ್ಟು ಶೀಘ್ರ ಅಕಾಡೆಮಿಗೆ ಆಡಳಿತ ಮಂಡಳಿ ರಚನೆಯಾಗಲಿ. ಅವರು ನಮ್ಮ ಉತ್ತಮ ಕೆಲಸಗಳನ್ನು ಮುಂದುವರಿಸಲಿ ಎನ್ನುವುದೇ ಕೋರಿಕೆಯಾಗಿದೆ.
– ಎಂ.ಎ. ಹೆಗಡೆ
ನಿಕಟಪೂರ್ವ ಅಧ್ಯಕ್ಷರು, ಯಕ್ಷಗಾನ ಅಕಾಡೆಮಿ

ಮಂಜೂರಾಗಿ ಅರ್ಧಕ್ಕೆ ಸ್ಥಗಿತಗೊಂಡ ಕೆಲಸಗಳ ಬಗ್ಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ. ಹೊಸ ಆಡಳಿತ ಮಂಡಳಿ ನೇಮಕವಾದ ಮೇಲೆ ಅನುಮೋದನೆಗೊಂಡ ಕೆಲಸಗಳು ಮುಂದುವರಿಯಲಿವೆ ಮತ್ತು ಪ್ರಸ್ತಾವನೆ ಹಂತದಲ್ಲಿರುವುದರ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ.
-ಶಿವರುದ್ರಪ್ಪ
ರಿಜಿಸ್ಟ್ರಾರ್‌, ಯಕ್ಷಗಾನ ಅಕಾಡೆಮಿ

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.