ಸೆ. 1-15: ಶಾಲೆಯೆಡೆಗೆ ಗೊಂಬೆ ನಡಿಗೆ


Team Udayavani, Aug 31, 2017, 6:40 AM IST

2908kde5.jpg

ಕುಂದಾಪುರ: ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್‌ ಮೆಮೋರಿಯಲ್‌ ಯಕ್ಷಗಾನ ಗೊಂಬೆ ಯಾಟ ಟ್ರಸ್ಟ್‌ (ರಿ.), ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಹಾಗೂ ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯು ನಾಗರಾಜ್‌ ಭಟ್‌ ಮಲ್ಪೆ ಇವರ ಪ್ರಾಯೋಜಕತ್ವದಲ್ಲಿ ಉಪ್ಪಿನಕುದ್ರು ಗೊಂಬೆಯಾಟ ರಂಗದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಗಡಿನಾಡ ತಿರುಗಾಟ ಶಾಲೆಯೆಡೆಗೆ ಗೊಂಬೆ ನಡಿಗೆ ವಿಶಿಷ್ಟ  ಪ್ರಯತ್ನಕ್ಕೆ ಮುಂದಾಗಿದೆ. ಗೊಂಬೆಯಾಟ ಟ್ರಸ್ಟ್‌ ಅಸ್ತಿತ್ವ  ಕಂಡು 22 ವರ್ಷಗಳ ಸವಿನೆನಪಲ್ಲಿ ಸೆ. 1ರಿಂದ 15ರ ವರೆಗೆ ಕುಮಟಾ, ಹೊನ್ನಾವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮಂಗಳೂರು, ಕಾಸರಗೋಡು ತಾ|ನ ಗೊಂಬೆಯಾಟ ಪ್ರಾತ್ಯಕ್ಷಿಕೆ ನಡೆಯಲಿದೆ.

ಪರಂಪರೆ ಉಳಿವಿಗೆ ಹೋರಾಟ
ಸುಮಾರು 350 ವರ್ಷಗಳ 6 ನೇ ತಲಾಂತರದ ವಿಶಿಷ್ಟ, ವಿಶೇಷ ಕಲಾ ಪರಂಪರೆಯ ಉಳಿವಿಗಾಗಿ ಹಗಲಿರುಳೆನ್ನದೆ ಹೋರಾಟ ಮಾಡುತ್ತಾ  ಬಂದಿರುವ ಸಂಸ್ಥೆಯು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡದಲ್ಲಿ  ಕಳೆದ 3 ವರ್ಷಗಳಿಂದ ನಿರಂತರ ತಿಂಗಳ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ತರಬೇತಿ ನಡೆಸಿಕೊಂಡು ಬರುತ್ತಿದೆ. ಸರಕಾರದ ಯಾವುದೇ ಧನ ಸಹಾಯ ಪಡೆಯದೆ ಹೋರಾಡುತ್ತಿರುವುದು ಈ ತಂಡದ ವಿಶೇಷವೆನ್ನಬಹುದು.

22 ಶಾಲೆಗಳಲ್ಲಿ  ಪ್ರಾತ್ಯಕ್ಷಿಕೆ  
ಸೆ. 1ರಂದು ಶ್ರೀ ಮೂಕಾಂಬಿಕಾ ಪ್ರೌಢ ಶಾಲೆ, ಮಾವಿನಕಟ್ಟೆಯಲ್ಲಿ ಶಾಲೆಯೆಡೆಗೆ ಗೊಂಬೆ ನಡಿಗೆ ಉದ್ಘಾಟನೆಗೊಳ್ಳಲಿದೆ. ಅನಂತರ ಸೆ. 4ರಿಂದ 15ರ ವರೆಗೆ ಸರಸ್ವತಿ ಪದವಿ ಪೂರ್ವ ಕಾಲೇಜು ಕುಮಟಾ, ಶ್ರೀ ಮಾರುತಿ ರೆಸಿಡೆನ್ಶಿಯಲ್‌ ಸ್ಕೂಲ್‌, ಗೇರುಸೊಪ್ಪೆ, ಎಸ್‌.ಡಿ.ಎಂ. ಕಾಲೇಜು ಹೊನ್ನಾವರ, ದ ನ್ಯೂ ಇಂಗ್ಲಿಷ್‌ ಪ.ಪೂ. ಕಾಲೇಜು, ಅಯೋಧ್ಯಾನಗರ, ಭಟ್ಕಳ, ಎಸ್‌.ಎಂ.ಎಸ್‌. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್‌.ಇ) ಬ್ರಹ್ಮಾವರ, ಮಿಲಾಗ್ರಿಸ್‌ ಆಂಗ್ಲ ಮಾಧ್ಯಮ ಶಾಲೆ, ಕಲ್ಯಾಣಪುರ,  ಮುಕುಂದ ಕೃಪಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಉಡುಪಿ, ಮಾಧವ ಕೃಪ ಇಂಗ್ಲಿಷ್‌ ನರ್ಸರಿ ಮತ್ತು ಹೈಯರ್‌ ಪ್ರೈಮರಿ ಸ್ಕೂಲ್‌, ಮಣಿಪಾಲ, ಗುರುಕುಲ ಪಬ್ಲಿಕ್‌ ಸ್ಕೂಲ್‌ ವಕ್ವಾಡಿ, ಸ. ಪ.ಪೂ. ಕಾಲೇಜು, (ಪ್ರೌಢ ಶಾಲಾ ವಿಭಾಗ) ಕುಂದಾಪುರ, ಶಾರದಾ ಕಾಲೇಜ್‌ ಬಸೂÅರು, ಶ್ರೀ ಸಿದ್ಧಿ ವಿನಾಯಕ ರೆಸಿಡೆನ್ಶಿಯಲ್‌ ಸ್ಕೂಲ್‌,  ಹಟ್ಟಿಯಂಗಡಿ, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗ ವಂಡ್ಸೆ, ಶ್ರೀ ಮೂಕಾಂಬಿಕಾ ಪ.ಪೂ. ಕಾಲೇಜು ಕೊಲ್ಲೂರು,  ಗ್ರೆಗರಿ ಪ್ರೌಢ ಶಾಲೆ ನಾಡ- ಪಡುಕೋಣೆ, ಸರಕಾರಿ ಪ್ರೌಢ ಶಾಲೆ ಹಕ್ಲಾಡಿ, ಶ್ರೀ ಸರಸ್ವತಿ ವಿದ್ಯಾಲಯ ಗಂಗೊಳ್ಳಿ, ಸಂದೀಪನ್‌ ಆಂಗ್ಲ ಮಾಧ್ಯಮ ಶಾಲೆ ಖಂಬದಕೋಣೆ, ಗೋವಿಂದದಾಸ್‌ ಕಾಲೇಜು ಸುರತ್ಕಲ್‌, ಕೆನರಾ ಹೈಸ್ಕೂಲ್‌ ಮಂಗಳೂರು, ಎಚ್‌.ಎಚ್‌. ಎಸ್‌. ಐ. ಬಿ. ಸ್ವಾಮೀಜಿಸ್‌ ಹೈಯರ್‌ ಸೆಕೆಂಡರಿ ಸ್ಕೂಲ್‌ ಎಡನೀರು ಕಾಸರಗೋಡಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. 

ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಕಲೆಗಳ ಬಗ್ಗೆ  ಶಿಕ್ಷಣ ಇಲಾಖೆ ಯಾವುದೇ ಮಾಹಿತಿ ನೀಡುವ ಯಾವುದೇ ಅವಕಾಶ ಕಲ್ಪಿಸದೇ ಇರುವುದರಿಂದ  ಮಕ್ಕಳಿಗೆ  ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿ ಅವರಲ್ಲಿ ಈ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ  ಉಪ್ಪಿನಕುದ್ರು ಬೊಂಬೆಯಾಟ ತಂಡ ಶಾಲೆಯಡೆಗೆ ಬೊಂಬೆ ನಡಿಗೆ ಎನ್ನುವ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಮ್ಮ  ತಂಡ ಈಗಾಗಲೇ ವಿದೇಶಗಳ ನೆಲದಲ್ಲಿ ಈ ರೀತಿಯ ಪ್ರಯೋಗಳನ್ನು  ಮಾಡಿ ಯಶಸ್ವಿಯಾಗಿದ್ದು ಶಿಕ್ಷಣದ ಜೊತೆಗೆ ಕನ್ನಡ ಸಂಸ್ಕೃತಿಯನ್ನು ಬೆಳೆಸುವ ಕೈಂಕರ್ಯದಲ್ಲಿ ತೊಡಗಿಕೊಂಡಿದೆ.
-ಭಾಸ್ಕರ ಕೊಗ್ಗ ಕಾಮತ್‌, ಸಂಚಾಲಕರು, ಉಪ್ಪಿನಕುದ್ರು ಗೊಂಬೆಯಾಟ ಸಂಸ್ಥೆ

– ಉದಯ ಆಚಾರ್‌ ಸಾಸ್ತಾನ

ಟಾಪ್ ನ್ಯೂಸ್

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.