“ಯುವಜನರಲ್ಲಿ ಯಕ್ಷಗಾನ ಅಭಿರುಚಿ ಹೆಚ್ಚಳ ಶ್ಲಾಘನೀಯ’


Team Udayavani, Jul 3, 2017, 3:45 AM IST

020717SGE11.jpg

ಉಡುಪಿ: ಪ್ರಸ್ತುತ ಯುವಜನತೆ ಮೊಬೈಲ್‌, ಇಂಟರ್‌ನೆಟ್‌, ಫೇಸ್‌ಬುಕ್‌ನಂತಹ ಆಧುನಿಕ ಮಾಧ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಪರಿಣಾಮ ದೈಹಿಕ ಪರಿಶ್ರಮಕ್ಕೆ ಸಂಬಂಧಿಸಿದ ಆಟೋಟಗಳು, ಕ್ರೀಡೆಗಳು, ಸಾಂಸ್ಕೃತಿಕ ಕಲಾ ಪ್ರಕಾರಗಳ ಬಗ್ಗೆ ಹೆಚ್ಚು ಗಮನಹರಿಸುತ್ತಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಅಲ್ಲಲ್ಲಿ ಯುವಜನರು ಯಕ್ಷಗಾನ ಕಲೆಯತ್ತ ಆಕರ್ಷಿತರಾಗುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಉಡುಪಿ ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜೀ ಅವರು ನುಡಿದರು.

ಶಿರ್ವ ಮಂಚಕಲ್ಲಿನ ಕುಶಲ ಶೇಖರ ಸಭಾಭವನದ ಪದ್ದಕ್ಕ ಸುಬ್ಬಣ್ಣ ಶೆಟ್ಟಿ ವೇದಿಕೆಯಲ್ಲಿ ಪಂಜಿಮಾರಿನ ಹರೀಶ್‌ ಬಂಗೇರ ಮತ್ತು ಮನೆಯವರ ಆಶ್ರಯದಲ್ಲಿ ನಡೆದ ಕಲಾ ಸಾಧಕರಿಗೆ ಸಮ್ಮಾನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಯಕ್ಷಗಾನ ಕಲೆಯನ್ನು ಉಳಿಸಿ
ಜಾನಪದ ಕಲೆಗಳಲ್ಲಿ ಒಂದಾದ “ಕರಾವಳಿಯ ಗಂಡುಕಲೆ’ ಎನಿಸಿಕೊಂಡ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಬೇಕಾದರೆ ಕಲಾವಿದರನ್ನು ಗೌರವಿಸುವುದರೊಂದಿಗೆ ಕಲೆಯ ಬಗ್ಗೆ ಯುವಜನತೆ ಆಕರ್ಷಿತರಾಗುವಂತೆ ಮಾಡಬೇಕಾಗಿದೆ. ತನ್ಮೂಲಕ ಯಕ್ಷಗಾನ ಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವನ್ನು ಮಾಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಪ್ರಯತ್ನಶೀಲರಾಗಬೇಕೆಂದು ಕರೆ ನೀಡಿದರು.

ಸಮ್ಮಾನ
ಕಲಾ ಸಾಧಕರಾದ ಸ್ತ್ರೀ ಪಾತ್ರಧಾರಿ ರಕ್ಷಿತ್‌ ಪೂಜಾರಿ ಹಾಗೂ ಶ್ಯಾಮ ರಾವ್‌ ಅವರನ್ನು ಶ್ರೀ ರಮಾನಂದ ಗುರೂಜೀ ಮತ್ತು ಆಗಮ ವಿದ್ವಾಂಸ ಕೇಂಜ ಶ್ರೀಧರ ತಂತ್ರಿ ಅವರು ಸಮ್ಮಾನಿಸಿದರು.

ಉಪಸ್ಥಿತಿ
ಕುತ್ಯಾರು ನವೀನ್‌ ಶೆಟ್ಟಿ, ಮುಲ್ಕಾಡಿ ರೋಹಿತ್‌ ಭಟ್‌, ಪಂಜಿಮಾರು ದೊಡ್ಡಮನೆ ವೀರೇಂದ್ರ ಶೆಟ್ಟಿ, ಕಳತ್ತೂರು ಕುಶಲ ಶೆಟ್ಟಿ, ಯಕ್ಷಗಾನ ಕಲಾವಿದ ದಾಸಪ್ಪ ರೈ, ಪಂಜಿಮಾರು ತುಕ್ರ ಬಂಗೇರ ಉಪಸ್ಥಿತರಿದ್ದರು. “ಗೆಜ್ಜೆ ಪೂಜೆ’ ಯಕ್ಷಗಾನ ಪ್ರದರ್ಶಿಸಲ್ಪಟ್ಟಿತು.

ಗೌರವಾರ್ಪಣೆ
ಇದೇ ಸಂದರ್ಭ “ಧಾರ್ಮಿಕ ಕ್ಷೇತ್ರದ ಕ್ಷಿಪ್ರ ಕ್ರಾಂತಿಯ ಹರಿಕಾರ’, ನೊಂದು ಬಂದ ಜನತೆಗೆ ಸದ್ದಿಲ್ಲದೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ, ಜನರಿಂದಲೇ ಗುರುಪಟ್ಟಕ್ಕೇರಿದ ಧರ್ಮದರ್ಶಿ ಶ್ರೀ ರಮಾನಂದ ಗುರೂಜೀ ಅವರನ್ನು ಸಾರ್ವಜನಿಕವಾಗಿ ಗೌರವಿಸಲಾಯಿತು. 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.