ಕೊಲೆ ಬೆದರಿಕೆ ಕರೆ : ಯಶ್ಪಾಲ್ ಸುವರ್ಣರಿಗೆ ಪೊಲೀಸ್ ಇಲಾಖೆಯಿಂದ ಗನ್ಮ್ಯಾನ್
Team Udayavani, Jun 9, 2022, 9:36 PM IST
ಉಡುಪಿ : ಹಿಂದೂ ಮುಖಂಡ ಹಾಗೂ ಉಡುಪಿಯ ಸರಕಾರಿ ಮಹಿಳಾ ಪಿಯು ಕಾಲೇಜು ಉಪಾಧ್ಯಕ್ಷ ಯಶ್ಪಾಲ್ ಎ. ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಕೊಲೆ ಬೆದರಿಕೆ ಕರೆಗಳು ಬರುತ್ತಿರುವುದರಿಂದ ಗನ್ಮ್ಯಾನ್ ಪಡೆದುಕೊಳ್ಳುವಂತೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು ಸಲಹೆ ನೀಡಿದ್ದು, ಅದರಂತೆ ಬುಧವಾರ ಯಶಪಾಲ್ ಅವರಿಗೆ ಪೊಲೀಸ್ ಗನ್ಮ್ಯಾನ್ ನೀಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಯಶ್ಪಾಲ್ ಸುವರ್ಣ, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆ ಗನ್ಮ್ಯಾನ್ ನೀಡಿರುವುದು ಸ್ವಾಗತಾರ್ಹ. ಗನ್ಮ್ಯಾನ್ ಅನ್ನು ಮುಂದುವರಿಸುವ ಬಗ್ಗೆ ಪಕ್ಷದ ಹಿರಿಯರ ಅಭಿಪ್ರಾಯ ಪಡೆಯುತ್ತೇನೆ ಎಂದಿದ್ದಾರೆ. ಈಗಾಗಲೇ ಯಶ್ಪಾಲ್ ಅವರಿಗೆ ಮೂರಕ್ಕೂ ಅಧಿಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆಗಳನ್ನು ಹಾಕಲಾಗಿತ್ತು. ಈ ವಿಚಾರದ ಬಗ್ಗೆ ಭದ್ರತೆ ಒದಗಿಸುವಂತೆ ಹಿಂದೂ ಮುಖಂಡರು, ಯುವಮೋರ್ಚಾದವರು ಇಲಾಖೆಗೆ ಮನವಿಯನ್ನೂ ಸಲ್ಲಿಸಿದ್ದರು.
ಇದೇ ರೀತಿ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ಈಗಾಗಲೇ ಪೊಲೀಸ್ ಇಲಾಖೆಯಿಂದ ಗನ್ಮ್ಯಾನ್ ಒದಗಿಸಲಾಗಿದೆ.
ಇದನ್ನೂ ಓದಿ : ಪ್ರಧಾನಿ ರಾಜ್ಯ ಪ್ರವಾಸ : ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ