ಪಾಚಿ ನಿಗ್ರಹಿಸಲು ಸಿದ್ಧಗೊಂಡಿದೆ ಸಸ್ಯನಾಶಕ

ಭತ್ತದ ಗದ್ದೆಯ ಹಳದಿ-ಹಸಿರು ಪಾಚಿಗಳಿಗೆ ಸಿಗಲಿದೆ ಮುಕ್ತಿ

Team Udayavani, Oct 20, 2019, 5:39 AM IST

42201810UDPS1

ಉಡುಪಿ: ಕರಾವಳಿ ಭಾಗದ ಭತ್ತ ಕೃಷಿಗೆ ಅಂಟಿಕೊಳ್ಳುತ್ತಿದ್ದ ಹಸಿರು-ಹಳದಿ ಮುಕ್ತ ಪಾಚಿ ಸಮಸ್ಯೆಗೆ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ  ಕೃಷಿ ವಿಜ್ಞಾನಿಗಳು ಶಾಶ್ವತ ಪರಿಹಾರ ಕಂಡುಕೊಂಡಿದ್ದಾರೆ.

ಅವಿಭಜಿತ ದ.ಕ.ಜಿಲ್ಲೆಯಲ್ಲಿ ಸುಮಾರು 5 ಸಾವಿರ ಎಕರೆ ಭತ್ತದ ಗದ್ದೆಗಳಲ್ಲಿ ಈ ಬಾರಿ ಹಳದಿ ಹಸಿರು ಪಾಚಿಗಳು ಮುತ್ತಿಕೊಂಡಿದ್ದು ರೈತರಿಗೆ ತಲೆನೋವಾಗಿ ಪರಿಣಮಿಸಿದೆ. ಪ್ರತೀವರ್ಷ ಈ ಸಮಸ್ಯೆ ಕಂಡುಬರುತ್ತಿದ್ದು, ಹಳದಿ ಹಸಿರು ಪಾಚಿಗಳಿಂದ ಪಾರ್ಶ್ವವಾಯುವಿಗೆ ಒಳಗಾದ ಭತ್ತದ ಗದ್ದೆಗಳಿಂದ ರೈತರು ಅವುಗಳನ್ನು ಕೈಯಾರೆ ತೆಗೆದುಹಾಕಲು ಪ್ರಯತ್ನಿಸಿದರೂ, ಅದು ಪಕ್ಕದ ಭತ್ತದ ಗದ್ದೆಗಳಿಗೆ ಹರಡಿಕೊಳ್ಳುತ್ತಿರುವುದರಿಂದ ರೈತರು ಹಲವಾರು ರೀತಿಯ ತೊಂದರೆ ಅನುಭವಿಸುತ್ತಿದ್ದರು. ಅಲ್ಲದೆ ಇದರಿಂದ ಭತ್ತದ ಪೈರುಗಳ ಬೆಳವಣಿಗೆಯೂ ಕುಂಠಿತಗೊಳ್ಳುತ್ತಿತ್ತು. ಈ ಕಾರಣಕ್ಕಾಗಿ ಇದೀಗ ಭತ್ತದ ಗದ್ದೆಗಳಲ್ಲಿ ಕಂಡುಬರುವ ‘ಹಳದಿ ಹಸಿರು ಪಾಚಿ’ಗಳ ಬೆಳವಣಿಗೆಯನ್ನು ನಿಯಂತ್ರಿಸಲು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಕೃಷಿ ವಿಜ್ಞಾನಿಗಳು ಸಸ್ಯನಾಶಕವನ್ನು ಪ್ರಯೋಗಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಭತ್ತ ಬೆಳೆಗಾರರಿಗೆ ಉಂಟಾಗುತ್ತಿದ್ದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದ್ದಾರೆ.

ಪೆಂಡಿಮೆಥಾಲಿನ್‌ ಸಸ್ಯನಾಶಕ
“ಪೆಂಡಿಮೆಥಾಲಿನ್‌’ ಎಂಬ ಸಸ್ಯನಾಶಕದೊಂದಿಗೆ ಪಾಚಿಗಳನ್ನು ನಿಯಂತ್ರಿಸಲು ತಂತ್ರವನ್ನು ರೂಪಿಸಿದೆ. ಕಸಿ ಮಾಡಿದ ಮೂರು ದಿನಗಳಲ್ಲಿ ಇದನ್ನು ಸಿಂಪಡಿಸಬೇಕು. ಒಂದು ಎಕರೆ ಭತ್ತದ ಗದ್ದೆಯಲ್ಲಿ ಸಿಂಪಡಿಸಲು 330 ಮಿ.ಲೀ. ಸಸ್ಯನಾಶಕವನ್ನು 120 ಲೀಟರ್‌ ನೀರಿನಲ್ಲಿ ಬೆರೆಸಬೇಕು. ಇದರಲ್ಲಿ ಸಸ್ಯನಾಶಕವನ್ನು ಬಳಸುವ ಸಮಯ ಮತ್ತು ಪ್ರಮಾಣ ಮುಖ್ಯವಾಗಿದೆ.

ಎರಡು ವರ್ಷಗಳ ಕಾಲ ಪ್ರಯೋಗ
ಹಲವಾರು ವರ್ಷಗಳಿಂದ ಕರಾವಳಿ ಭಾಗಗಳಲ್ಲಿ ಭತ್ತದ ರೈತರಿಗೆ ಹಳದಿ ಹಸಿರು ಪಾಚಿಗಳು ತೀವ್ರ ತೊಂದರೆ ಉಂಟುಮಾಡುತ್ತಿತ್ತು. ಈ ಬಗ್ಗೆ ವಿವಿಧ ರೀತಿಯ ಸಸ್ಯನಾಶಕಗಳನ್ನು ಹೊಂದಿರುವ ಪ್ರಯೋಗಾ ಲಯದಲ್ಲಿ ಎರಡು ವರ್ಷಗಳ ಕಾಲ ಮಾಡಿದ ಪ್ರಯೋಗಗಳ ಅನಂತರ, ‘ಹಳದಿ ಹಸಿರು ಪಾಚಿ’ಗಳ ಹರಡುವಿಕೆಯನ್ನು ತಡೆಯಲು ಪೆಂಡಿಮೆಥಾಲಿನ್‌ ಎಂಬ ಸಸ್ಯನಾಶಕ ಕೆಲಸ ಮಾಡುತ್ತದೆ ಎಂಬ ವಿಚಾರ ವಿಜ್ಞಾನಿಗಳಿಗೆ ತಿಳಿಯಿತು. ಇದರಿಂದ ರೈತರಿಗೆ ಮತ್ತಷ್ಟು ಅನುಕೂಲಕರವಾಗಲಿದೆ.

ಸಸಿಗಳಿಗೆ ಸಿಗಲಿದೆ ಶಕ್ತಿ
ಈ “ಪೆಂಡಿಮೆಥಾಲಿನ್‌’ ಜತೆಗೆ 15 ದಿನಗಳ ಅಂತರದ ಅನಂತರ ಹೊರಹೊಮ್ಮುವ ಸಸ್ಯನಾಶಕ “ಪೆನಾಕ್ಯುಲಮ…’ ಅನ್ನು ಬಳಸಬೇಕು. ಒಂದು ಎಕರೆ ಭತ್ತದ ಗದ್ದೆಯಲ್ಲಿ ಸಿಂಪಡಿಸಲು 25 ಮಿ.ಲೀ. ‘ಪೆನಾಕ್ಯುಲಮ…’ ಅನ್ನು 120 ಲೀಟರ್‌ ನೀರಿನಲ್ಲಿ ಬೆರೆಸಬೇಕು. ಭತ್ತದ ಸಸಿಗಳು ಸುಮಾರು 20 ದಿನಗಳವರೆಗೆ ಬೆಳೆದಂತೆ, ಅವುಗಳು ತಾವಾಗಿಯೇ ಉಳಿಸಿಕೊಳ್ಳುವ ಶಕ್ತಿಯನ್ನು ಪಡೆಯುತ್ತವೆ ಎಂದು ತಿಳಿಸುತ್ತಾರೆ ಬ್ರಹ್ಮಾವರದ ಕೃಷಿ ವಿಜ್ಞಾನಿ ಡಾ| ನವೀನ್‌.

ಶೀಘ್ರ ರೈತರಿಗೆ ಶಿಫಾರಸು
ವಿಜ್ಞಾನಿಗಳು ಈಗಾಗಲೇ ಈ ಸಸ್ಯನಾಶಕದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಪ್ರಾಯೋಗಿಕವಾಗಿ ಕೆಲವೆಡೆ ಇದನ್ನು ಸಿಂಪಡಿಸಲಾಗಿದೆ. ಉತ್ತಮ ಪ್ರಯೋಜನಕಾರಿ ಎಂಬ ಅಂಶ ತಿಳಿದುಬಂದಿದೆ. ವಿಜ್ಞಾನಿಗಳ ವಲಯ ಸಭೆಯಲ್ಲಿ ಇದಕ್ಕೆ ಅನುಮೋದನೆಯೂ ದೊರಕಿದೆ. ಶೀಘ್ರದಲ್ಲೇ ಸಸ್ಯನಾಶಕವನ್ನು ಅಧಿಕೃತವಾಗಿ ಬಳಸುವಂತೆ ಇಲಾಖೆ ರೈತರಿಗೆ ಶಿಫಾರಸು ಮಾಡಬಹುದು.
-ಸತೀಶ್‌ ಬಿ.,
ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ

ಅನುಕೂಲ ಸಾಧ್ಯತೆ
ಭತ್ತದ ಗದ್ದೆಯಲ್ಲಿ ವ್ಯಾಪಕವಾಗಿ ಬೆಳೆಯುತ್ತಿರುವ ಪಾಚಿಗಳನ್ನು ತಡೆಯುವುದು ನಮಗೆ ಸಾಕಷ್ಟು ಸಮಸ್ಯೆಯಾಗುತ್ತಿತ್ತು. ಇದರ ನಿರ್ವಹಣೆ ಹಾಗೂ ಬೆಳೆಗಳ ನಿರ್ವಹಣೆಯನ್ನು ನೋಡುವುದು ಸವಾಲಿನ ಕೆಲಸವಾಗುತ್ತಿದೆ. ವಿಜ್ಞಾನಿಗಳು “ಪೆಂಡಿಮೆಥಾಲಿನ್‌’ ಬಳಸಲು ಸೂಚಿಸಿದ್ದಾರೆ. ಇದರಿಂದ ಅನುಕೂಲವಾಗುವ ಸಾಧ್ಯತೆ ಇದೆ.
-ಹರೀಶ್‌ ಶೆಟ್ಟಿ, ರೈತರು

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.