“ಸಂಡೆ’ ಜೀವನಕ್ಕೆ ಬಾಬಾ ರಾಮದೇವ್‌ ಸಲಹೆ

ಉಡುಪಿ ಜನತೆಯಲ್ಲಿ ಹೆಚ್ಚಿದ ಯೋಗೋತ್ಸಾಹ

Team Udayavani, Nov 18, 2019, 5:41 AM IST

171119ASTRO-BABAYOGA11

ಉಡುಪಿ: ಪರ್ಯಾಯಶ್ರೀ ಪಲಿಮಾರು ಮಠಾಧೀಶರ ಆಸ್ಥೆಯಿಂದ ಆಯೋಜನೆಗೊಂಡಿರುವ ಪ್ರಸಿದ್ಧ ಯೋಗಪಟು ಬಾಬಾ ರಾಮದೇವ್‌ ಅವರ ಯೋಗ ಶಿಬಿರದಲ್ಲಿ ರವಿವಾರ ಎರಡನೇ ದಿನ ಜನರು ಹೆಚ್ಚಿನ ಆಸಕ್ತಿಯಿಂದ ಪಾಲ್ಗೊಂಡರು.

ಸಾಮಾನ್ಯವಾಗಿ ಸಮಾಜದಲ್ಲಿ ಕಂಡು ಬರುತ್ತಿರುವ ರವಿವಾರದ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುವಂತೆ ರಾಮದೇವ್‌ ಕರೆ ನೀಡಿದರು.

ರವಿವಾರ ಇತರ ದಿನಗಳಿಗಿಂತ ಹೆಚ್ಚಿನ ಸಮಯವನ್ನು ಯೋಗಾಸನ, ಪ್ರಾಣಾಯಾಮ ಅಭ್ಯಾಸಗಳಿಗೆ ಕೊಡಬೇಕು ಎಂದರು.

ಸೂರ್ಯಾರ್ಘ್ಯ ಮಹತ್ವ
ಮುಖ್ಯಮಂತ್ರಿಯಾಗಿದ್ದ ಖಂಡೂರಿ ಸೂರ್ಯನಿಗೆ ಅರ್ಘ್ಯ ಕೊಟ್ಟದ್ದರಿಂದ ಅವರ ದೃಷ್ಟಿ ಸಮಸ್ಯೆ ನಿವಾರಣೆಯಾ ಯಿತು. ಸೂರ್ಯದೇವನಿಗೆ ನೀರಿನಲ್ಲಿ ಅರ್ಘ್ಯಕೊಡುವುದೂ ಮುಖ್ಯ. ರೇಡಿಯೇಶನ್‌ ತಡೆ ಶಕ್ತಿಯ ತುಳಸಿ ಗಿಡಕ್ಕೆ ಬೆಳಗ್ಗೆದ್ದು ನೀರೆರೆದು ಸೂರ್ಯನಿಗೆ ಅರ್ಘ್ಯ ಕೊಡುವುದೂ ವಿಜ್ಞಾನವಾಗಿದೆ. ಬಾಲ ಸೂರ್ಯನ ಬಿಸಿಲಿನಲ್ಲಿ ಒಂದು ಗಂಟೆ ಓಡಾಡಿದರೆ ವಿಟಮಿನ್‌ ಡಿ ಕೊರತೆಯಾಗುವುದಿಲ್ಲ ಎಂದರು.

ಪುಸ್ತಕ ಬಿಡುಗಡೆ
ಆಚಾರ್ಯ ಬಾಲಕೃಷ್ಣರು ಬರೆದ “ಆಯುರ್ವೇದ ಸಿದ್ಧಾಂತದ ರಹಸ್ಯ’ ಪುಸ್ತಕದ ಅನುವಾದವನ್ನು ಕರ್ಣಾಟಕ ಬ್ಯಾಂಕ್‌ ಎಂಡಿ ಮಹಾಬಲೇಶ್ವರ ಅವರ ಪತ್ನಿ ಅನ್ನಪೂರ್ಣ ಅವರು ಮಾಡಿದ್ದು ಈ ಕೃತಿಯನ್ನು ರಾಮದೇವ್‌ ಮತ್ತು ಪೇಜಾವರ ಶ್ರೀಗಳು ಬಿಡುಗಡೆಗೊಳಿಸಿದರು. ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಕರ್ಣಾಟಕ ಬ್ಯಾಂಕ್‌ ಎಜಿಎಂಗಳಾದ ಶ್ರೀನಿವಾಸ ದೇಶಪಾಂಡೆ, ಗೋಪಾಲಕೃಷ್ಣ ಸಾಮಗ, ಪತಂಜಲಿ ಸಮಿತಿಯ ಜ್ಞಾನೇಶ್ವರ ನಾಯಕ್‌, ಕರಂಬಳ್ಳಿ ಶಿವರಾಮ ಶೆಟ್ಟಿ, ಶಂಕರ ಶೆಟ್ಟಿ ಉಪಸ್ಥಿತರಿದ್ದರು. ಎರಡನೆಯ ದಿನದ ಕಾರ್ಯಕ್ರಮವನ್ನು ಪೇಜಾವರ ಶ್ರೀಗಳು ಉದ್ಘಾಟಿಸಿದರು. ಪರ್ಯಾಯ ಶ್ರೀ ಪಲಿಮಾರು ಮಠಾಧೀಶರು, ಪೇಜಾ
ವರ ಕಿರಿಯ, ಪಲಿಮಾರು ಕಿರಿಯ ಶ್ರೀಗಳು ಉಪಸ್ಥಿತರಿದ್ದರು. ಸುಜಾತಾ ಮಾರ್ಲ ಸ್ವಾಗತಿಸಿದರು.

ಬೊಜ್ಜು ಕರಗಿಸಿದ ಮಹಿಳೆಯರು
ಎಂಜಿನಿಯರಿಂಗ್‌ ಪದವೀಧರೆ ಗ್ರೀಷ್ಮಾ 30 ಕೆಜಿ ತೂಕ ಕಡಿಮೆ ಮಾಡಿ ರುವುದಾಗಿ ಹೇಳಿದಾಗ ಅವರನ್ನು ವೇದಿಕೆಗೆ ಕರೆದು ರಾಮದೇವ್‌ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರೀಷ್ಮಾ ಸಾಧನೆ ಅನುಕರಣೀಯ ಎಂದರು. ಅದೇ ರೀತಿ ವಿವಿಧ ಮಹಿಳೆಯರು 15, 16, 11 ಕೆ.ಜಿ. ಬೊಜ್ಜು ಇಳಿಸಿಕೊಂಡ ಅನುಭವವನ್ನು ಹೇಳಿಕೊಂಡರು. ಬೊಜ್ಜು ಕರಗಲು ಅಶ್ವಗಂಧ ಸಹಕಾರಿ ಎಂದು ರಾಮದೇವ್‌ ಹೇಳಿದರು.

ವಾಯುಮಾಲಿನ್ಯ ಪರಿಹಾರಕ್ಕೆ
ರಾತ್ರಿ 7 ಗಂಟೆಯೊಳಗೆ ಉಂಡರೆ ಉತ್ತಮ, 8 ಗಂಟೆ ಬಳಿಕ ಏನನ್ನೂ ತಿನ್ನಬಾರದು. ಅಕ್ಕಿ, ಗೋಧಿ ಪ್ರಮಾಣ ಕಡಿಮೆ ಮಾಡಿ ತರಹೇವಾರಿ ತರಕಾರಿಗಳ ಸೇವನೆ ಹೆಚ್ಚಿಸಬೇಕು. ದಿನಕ್ಕೆ ಮೂರು ಲೀ. ನೀರು ಕುಡಿಯಬೇಕು. ಮನೆ ಆವರಣದಲ್ಲಿ ತುಳಸಿ, ಅಲೊವೇರಾ, ಅಮೃತಬಳ್ಳಿಗಳನ್ನು ಬೆಳೆಸಿ. ಇವುಗಳಲ್ಲಿ ಅಗಾಧವಾದ ಔಷಧೀಯ ಗುಣವಿದೆ. ವಾತಾವರಣವೂ ಸರಿಯಾಗುತ್ತದೆ. ದಿಲ್ಲಿಯ ವಾತಾವರಣ ಕಲುಷಿತ ಎನ್ನುತ್ತೇವೆ. ಅಲ್ಲಿ ಇಂತಹ ಔಷಧೀಯ ಗಿಡಗಳಿಗೆ ಮಹತ್ವ ನೀಡದಿರುವುದೂ ಇದಕ್ಕೆ ಕಾರಣ. ಡೆಂಗ್ಯೂ, ಚಿಕೂನ್‌ಗುನ್ಯದಂತಹ ಜ್ವರಗಳಿಗೂ ಇವುಗಳು ಪರಿಣಾಮಕಾರಿ ಎಂದು ರಾಮದೇವ್‌ ಕಿವಿಮಾತು ನುಡಿದರು.

ಯೋಗಮಯ ಕರ್ನಾಟಕ
ಕರ್ನಾಟಕವನ್ನು ರೋಗಮುಕ್ತ ಮಾಡಲು “ಯೋಗಮಯ ಕರ್ನಾಟಕ’ ಯೋಜನೆಯನ್ನು ಆರಂಭಿಸಲಾಗುತ್ತಿದೆ. ಇದಕ್ಕೆ ನುರಿತ ಯೋಗ ಶಿಕ್ಷಕರು ಬೇಕು. ಆಸಕ್ತರಿಗೆ ತರಬೇತಿ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.