ಜಿಲ್ಲಾಡಳಿತ ವಿರುದ್ಧ ಜಿ.ಪಂ. ಸದಸ್ಯರ ಅಸಮಾಧಾನ


Team Udayavani, Dec 1, 2018, 1:40 AM IST

zp-udupi-30-11.jpg

ಉಡುಪಿ: ‘ಮರಳು ಕೊರತೆ, ಸ್ಥಳೀಯರಿಂದ ಟೋಲ್‌ ಸಂಗ್ರಹ ಸೇರಿದಂತೆ ಪ್ರಮುಖ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಉಡುಪಿ ಜಿ.ಪಂ.ನ ಆಡಳಿತರೂಢ ಬಿಜೆಪಿ ಸದಸ್ಯರು ಶುಕ್ರವಾರದಂದು ನಿಗದಿಯಾದ ಜಿ.ಪಂ. ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ್ದಾರೆ. ನಿಗದಿತ ಸದಸ್ಯರ ಸಂಖ್ಯೆ ಕೊರತೆಯಿಂದ ಅರ್ಧ ತಾಸು ವಿಳಂಬವಾಗಿ ಸಭೆ ಆರಂಭವಾಯಿತು. ಈ ವೇಳೆ ಕಾಂಗ್ರೆಸ್‌ ಸದಸ್ಯರು ‘ಸಾಸ್ತಾನ ಮತ್ತು ಪಡುಬಿದ್ರಿಯ ಟೋಲ್‌ಗೇಟ್‌ಗಳಲ್ಲಿ ಸ್ಥಳೀಯರಿಗೆ ಟೋಲ್‌ ವಿನಾಯಿತಿ ನೀಡಬೇಕೆಂದು ನಡೆಯುತ್ತಿರುವ ಪ್ರತಿಭಟನೆಯನ್ನು ಉಲ್ಲೇಖೀಸಿದರು. ಅಂತಿಮ ನಿರ್ಧಾರವೇನಾಗಿದೆ?’ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನವಯುಗ ಸಂಸ್ಥೆಯ ಅಧಿಕಾರಿ ‘ಸ್ಥಳೀಯರಿಗೆ ವಿನಾಯಿತಿ ಬಗ್ಗೆ ನಿರ್ಧಾರ ಆಗಿಲ್ಲ’ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ರೇಶ್ಮಾ ಶೆಟ್ಟಿ ಅವರು ‘ಈ ಹಿಂದಿನ ಸಭೆಯಲ್ಲಿ ಸ್ಥಳೀಯರಿಂದ ಟೋಲ್‌ ಸಂಗ್ರಹಿಸುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ಈಗ ಸಂಗ್ರಹಿಸುತ್ತಿದ್ದಾರೆ’ ಎಂದರು. ಇದಕ್ಕೆ ಗೀತಾಂಜಲಿ ಸುವರ್ಣ, ಪ್ರತಾಪ್‌ ಹೆಗ್ಡೆ ಮಾರಾಳಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ ಮೊದಲಾದವರು ದನಿಗೂಡಿಸಿದರು. ‘ಟೋಲ್‌ ಸಂಗ್ರಹ ಕುರಿತಾಗಿ ಕಂಪೆನಿ ಮತ್ತು ಸರಕಾರದ ನಡುವೆ ನಡೆದಿರುವ ಒಪ್ಪಂದವೇನು?’ ಎಂಬುದನ್ನು ತಿಳಿದುಕೊಳ್ಳಬೇಕಾಗಿದೆ ಎಂದು ವಿಪಕ್ಷದ ವಿಲ್ಸನ್‌ ರೋಡ್ರಿಗಸ್‌ ಹೇಳಿದರು.

ಟೋಲ್‌ ಹೆಚ್ಚಳ?
‘ಪಡುಬಿದ್ರಿ ಸೇರಿದಂತೆ ಕೆಲವು ಕಡೆ ಹೆದ್ದಾರಿಯ ಸೇತುವೆ ಹಾಗೂ ಇತರ ಕಾಮಗಾರಿಗಳು ಪೂರ್ಣಗೊಂಡಿಲ್ಲ’ ಎಂದು ಸದಸ್ಯರು ದೂರಿದರು. ಸದಸ್ಯರ ಪ್ರಶ್ನೆಗೆ ಪ್ರತಿಕ್ರಿಯಿಸಿದ ನವಯುಗ ಕಂಪೆನಿಯ ಅಧಿಕಾರಿಗಳು ‘ಕಾಮಗಾರಿ ಬಾಕಿ ಇರುವುದರಿಂದ ಈಗ ಟೋಲನ್ನು ನಿಗದಿತ ಮೊತ್ತಕ್ಕಿಂತ ಕಡಿಮೆ ಪ್ರಮಾಣದಲ್ಲಿ ವಸೂಲಿ ಮಾಡಲಾಗುತ್ತಿದೆ’ ಎಂದು ಹೇಳಿದರು. ಆಡಳಿತ ಪಕ್ಷದ ಪ್ರತಾಪ್‌ ಹೆಗ್ಡೆ ಮಾರಾಳಿ ಅವರು ‘ಜಿಲ್ಲೆಯಲ್ಲಿ ಮರಳಿನಿಂದಾಗಿ ಜನಸಾಮಾನ್ಯರಿಗೆ ತೀವ್ರ ತೊದರೆಯಾಗಿದೆ. ಟೋಲ್‌ ಸಮಸ್ಯೆಯನ್ನು ಕೂಡ ಪರಿಹರಿಸಿಲ್ಲ. ಇವೆರಡೂ ಕೂಡ ಇತ್ಯರ್ಥ ಆಗುವವರೆಗೆ ಜಿ.ಪಂ.ಸಭೆಯ ಅವಶ್ಯಕತೆ ಇದೆಯೇ?’ ಎಂದು ಪ್ರಶ್ನಿಸಿದರು.

ಈ ಸಂದರ್ಭ ಮಾತನಾಡಿದ ಕೆಲವು ಸದಸ್ಯರು ‘ಜಿಲ್ಲಾಧಿಕಾರಿಯವರು ಮರಳು ಸಮಸ್ಯೆ ಬಗೆಹರಿಸಲು ಕಾನೂನಿನ ನೆಪ ಹೇಳುತ್ತಾರೆ, ನೂರಾರು ಪೊಲೀಸರನ್ನು ನಿಯೋಜಿಸಿ ಟೋಲ್‌ ಸಂಗ್ರಹಿಸಲು ಅನುವು ಮಾಡಿಕೊಡುತ್ತಾರೆ. ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ನಮಗೂ ಗೌರವ ಕೊಡುತ್ತಿಲ್ಲ. ಜಿಲ್ಲಾಧಿಕಾರಿಯವರ ಅಸಹಕಾರದಿಂದ ಬೇಸತ್ತು ಸಭೆಯನ್ನು ಬಹಿಷ್ಕರಿಸುತ್ತಿದ್ದೇವೆ’ ಎಂದು ಹೇಳಿ ಒಬ್ಬೊಬ್ಬರೇ ಸಭೆಯಿಂದ ನಿರ್ಗಮಿಸಿದರು.


ಸುರೇಶ್‌ ಬಟವಾಡೆ, ರೋಹಿತ್‌, ರಾಘವೇಂದ್ರ ಕಾಂಚನ್‌ ಅವರು ಕೂಡ ಜಿಲ್ಲಾಧಿಕಾರಿಯವರನ್ನು ತರಾಟೆಗೆ ತೆಗೆದುಕೊಂಡು ಸಭೆಯಿಂದ ಹೊರನಡೆದರು. ಈ ಸಂದರ್ಭದಲ್ಲಿ ವಿಪಕ್ಷದ ಜನಾರ್ದನ ತೋನ್ಸೆ ಅವರು ‘ಮರಳು ಸಿಗಬೇಕು. ಸ್ಥಳೀಯರಿಂದ ಟೋಲ್‌ ಕೂಡ ಸಂಗ್ರಹ ಮಾಡಬಾರದು ಎಂಬುದು ನಮ್ಮ ನಿಲುವು ಕೂಡ ಆಗಿದೆ. ಆದರೆ ಜಿಲ್ಲಾಧಿಕಾರಿಯವರು ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿಲ್ಲ. ಅವರು ಅನುಷ್ಠಾನ ಮಾಡುವ ಅಧಿಕಾರ ಮಾತ್ರ ಹೊಂದಿದ್ದಾರೆ. ನಾವು ಕೇಂದ್ರ/ ರಾಜ್ಯ ಸರಕಾರ ಮಟ್ಟದಲ್ಲಿ ಒತ್ತಾಯಿಸಿ ದರೆ ಮಾತ್ರ ಪ್ರಯೋಜನವಾದೀತು. ಸಭೆ ಬಹಿಷ್ಕಾರದಿಂದ ಪ್ರಯೋಜನವಿಲ್ಲ’ ಎಂದರು. 

ಮನವೊಲಿಕೆ ವಿಫ‌ಲ
ಸಭೆಯಿಂದ ನಿರ್ಗಮಿಸಿದ ಸದಸ್ಯರನ್ನು ವಾಪಸ್ಸು ಕರೆತರಲು ಅಧ್ಯಕ್ಷ ದಿನಕರ ಬಾಬು ಅವರು ಸಭೆಯಿಂದ ಹೊರಬಂದು ಸದಸ್ಯರ ಜತೆ ಮಾತುಕತೆ ನಡೆಸಿದರಾದರೂ ಸದಸ್ಯರು ಒಪ್ಪಲಿಲ್ಲ. ಅನಂತರ ಸಭೆಯನ್ನು ಮುಂದೂಡಲಾಯಿತು. ‘ಸಚಿವರ ಸ್ಥಾನಮಾನ ಹೊಂದಿರುವ ಜಿಲ್ಲಾ ಪಂಚಾಯತ್‌ ಅಧ್ಯಕ್ಷರು ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆಹ್ವಾನಿತರು. ಆದರೆ ಜಿ.ಪಂ. ಸಭೆಯ ಅವಧಿಯಲ್ಲಿಯೇ ಸಮಾರಂಭ ಇಟ್ಟುಕೊಂಡು ಜಿ.ಪಂ. ಅಧ್ಯಕ್ಷರನ್ನು ಕಡೆಗಣಿಲಾಗಿದೆ’ ಎಂದು ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಹೇಳಿದರು. ಕೃಷಿ ಮತ್ತು ಕೈಗಾರಿಕೆ ಸ್ಥಾಯೀ ಸಮಿತಿ ಅಧ್ಯಕ್ಷ ಉದಯ ಎಸ್‌. ಕೋಟ್ಯಾನ್‌, ಜಿ.ಪಂ. ಸಿಇಒ ಸಿಂಧು ರೂಪೇಶ್‌, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌, ಮುಖ್ಯ ಲೆಕ್ಕಾಧಿಕಾರಿ ನಾಗೇಶ್‌ ರಾಯ್ಕರ್‌ ಉಪಸ್ಥಿತರಿದ್ದರು.

ಏಕಕಾಲದಲ್ಲಿ ಸಭೆ-ಸಮಾರಂಭ !
ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅವರು ಮಾತನಾಡಿ ‘ಜಿ.ಪಂ. ಸಾಮಾನ್ಯಸಭೆ ಇರುವ ದಿನದಂದೆ ಇದೇ ಕಟ್ಟಡದ ಇನ್ನೊಂದು ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಿಗದಿ ಮಾಡಲಾಗಿದೆ. ಅಧ್ಯಕ್ಷರು, ಸದಸ್ಯರು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಮಾಡಲಾಗಿದೆ. ಇದು ಜಿ.ಪಂ.ಗೆ ಮಾಡಿರುವ ಅವಮಾನ’ ಎಂದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.