1,036 ಕೋಟಿ ರೂ. ಬಜೆಟ್‌ ಮಂಡನೆ


Team Udayavani, May 30, 2020, 5:39 PM IST

1,036 ಕೋಟಿ ರೂ. ಬಜೆಟ್‌ ಮಂಡನೆ

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ 2020-21ನೇ ಸಾಲಿನ 1036 ಕೋಟಿ ರೂ. ಆಯವ್ಯಯವನ್ನು ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಶುಕ್ರವಾರ ಮಂಡಿಸಿದರು.

ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಬಜೆಟ್‌ ಮಂಡಿಸಿದ ಅಧ್ಯಕ್ಷೆ, ಈ ಕರಡು ಯೋಜನೆಗೆ ರಾಜ್ಯ ಸರ್ಕಾರವು ಈಗಾಗಲೇ ಒಪ್ಪಿಗೆ ನೀಡಿದೆ. ಈ ವರ್ಷ ಯೋಜನೆ ಲೆಕ್ಕ ಶೀರ್ಷಿಕೆ ಮತ್ತು ಯೋಜನೇತರ ಲೆಕ್ಕ ಶೀರ್ಷಿಕ ಎಂಬ ಪ್ರತ್ಯೇಕ ವಿಂಗಡಣೆ ಇಲ್ಲ ಎಂದು ತಿಳಿಸಿದರು.

ಜಿಪಂ ಕಾರ್ಯಕ್ರಮಗಳಿಗೆ 315.44 ಕೋಟಿ, ತಾಪಂ ಕಾರ್ಯಕ್ರಮಗಳಿಗೆ 720.31 ಕೋಟಿ ಹಾಗೂ ಗ್ರಾಪಂ ಕಾರ್ಯಕ್ರಮಗಳಿಗೆ 66 ಲಕ್ಷ ಒದಗಿಸಲಾಗಿದೆ. ತಾ.ಪಂ.ಗಳಿಗೆ 2019-20ನೇ ಸಾಲಿಗಿಂತ 2020-21 ರಲ್ಲಿ 6475.42 ಲಕ್ಷ ಹೆಚ್ಚಿನ ಅನುದಾನ ನೀಡಲಾಗಿದೆ. 2020-21ನೇ ಸಾಲಿಗೆ ವಿವಿಧ ಲೆಕ್ಕ ಶೀರ್ಷಿಕೆ ಅಡಿ ವಿವಿಧ ಇಲಾಖೆಗಳು, ತಾಪಂ ಹಾಗೂ ಗ್ರಾಪಂ ಅನುದಾನ ನಿಗದಿ ಮಾಡಲಾದ ಮೊತ್ತವನ್ನು ಅಧ್ಯಕ್ಷರು ವಿವರಿಸಿದರು.

ಜಿಪಂ ಹಾಗೂ ಅಧಿಧೀನ ಇಲಾಖೆಗಳ ಸಿಬ್ಬಂದಿ ವೇತನಕ್ಕೆ 101.17 ಕೋಟಿ, ಹೊರ ಗುತ್ತಿಗೆ ನೌಕರರ ವೇತನಕ್ಕೆ 80.8 ಕೋಟಿ, ದಿನಗೂಲಿ ನೌಕರರ ವೇತನಕ್ಕೆ 77.04 ಲಕ್ಷ ಹಾಗೂ ಕಚೇರಿ ವೆಚ್ಚ, ಅಭಿವೃದ್ಧಿ ಕಾರ್ಯಗಳಿಗೆ 205.40 ಕೋಟಿ ವಿಂಗಡಿಸಲಾಗಿದೆ ಎಂದು ಜಯಶ್ರೀ ಮೊಗೇರ ವಿವರಿಸಿದರು. ಪ್ರಾಥಮಿಕ, ಮಾಧ್ಯಮಿಕ ಶಿಕ್ಷಣಕ್ಕೆ 14739.06 ಲಕ್ಷ ಒದಗಿಸಲಾಗಿದೆ. ಅಕ್ಷರ ದಾಸೋಹ, ಪೌಷ್ಟಿಕ ಆಹಾರಕ್ಕೆ ಎರಡೂ ಶೈಕ್ಷಣಿಕ ಜಿಲ್ಲೆಗಳಿಗೆ 5763.03 ಲಕ್ಷ ಅನುದಾನ ನಿಗದಿಪಡಿಸಲಾಗಿದೆ. 2020-21 ಆಯವ್ಯಯಕ್ಕೆ ಅನುಮೋದನೆ ನೀಡಲು ಸದಸ್ಯರಲ್ಲಿ ವಿನಂತಿಸಿದರು. ಸುದೀರ್ಘ‌ ಚರ್ಚೆ ನಂತರ ಸದಸ್ಯರು ಬಜೆಟ್‌ಗೆ ಅನುಮೋದನೆ ನೀಡಿದರು.

ಟೀಕೆ-ಪ್ರಶಂಸೆ: ಕೋವಿಡ್ ವಿರುದ್ಧ ಹೋರಾಡುತ್ತಿರುವವರ ಕುರಿತು ಜಿಪಂ ಸದಸ್ಯರಿಂದ ಶ್ಲಾಘನೆ ವ್ಯಕ್ತವಾಯಿತು. ಅಧಿಕಾರಿಗಳು, ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ವೈದ್ಯರು, ವೈದ್ಯಕೀಯ ಸಿಬ್ಬಂದಿ ಜೀವದ ಹಂಗು ತೊರೆದು ಕೋವಿಡ್ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಕೆಲ ಸದಸ್ಯರು ಒಕ್ಕೊರಲಿನ ಅಭಿಪ್ರಾಯ ವ್ಯಕ್ತಪಡಿಸಿದರೆ, ಕೆಲ ಸದಸ್ಯರು ಅಧಿಕಾರಿಗಳ ವರ್ತನೆ ಟೀಕಿಸಿದರು. ಜಿಪಂ ಸಿಇಒ ಎಂ. ರೋಶನ್‌ ಭಟ್ಕಳ ಆಸ್ಪತ್ರೆಗೆ ಭೇಟಿ ನೀಡಿ ಬಂದ ಬಗ್ಗೆ ಸದಸ್ಯರು ಪ್ರಶಂಸೆ ವ್ಯಕ್ತಪಡಿಸಿದರು.

ಸದಸ್ಯ ಅಲ್ಬರ್ಟ್‌ ಡಿಕೋಸ್ಟಾ ಮಾತನಾಡಿ ಭಟ್ಕಳದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಿರಲಿಲ್ಲ. ಆಗಿದ್ದರೆ ಇಷ್ಟು ದಿನ ಲಾಕ್‌ಡೌನ್‌ ಮಾಡುವ ಅವಶ್ಯಕತೆ ಬರುತ್ತಿರಲಿಲ್ಲ. ಅಲ್ಲಿ ಜಿಪಂ ಸದಸ್ಯರಿಗೆ ಪ್ರವೇಶ ಇರಲಿಲ್ಲ ಎಂದು ಆರೋಪಿಸಿದರು. ಸದಸ್ಯ ಜಿ.ಎನ್‌. ಹೆಗಡೆ ಮುರೇಗಾರ ಮಾತನಾಡಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ನೀಡಿದೆ. ಇದರಲ್ಲಿ ನಮ್ಮ ಜಿಲ್ಲೆಗೆ ಏನು ಲಾಭವಿದೆ ಎಂದು ನೋಡಲು ನಾನು ಕಾಯುತ್ತಿದ್ದೇನೆ. ಲಾಕ್‌ಡೌನ್‌ ಸಡಿಲವಾಗದಿದ್ದರೆ ಮುಂದಿನ ದಿನಗಳಲ್ಲಿ ಜನರ ಬದುಕು ಅಸ್ತವ್ಯಸ್ತವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸ್ವಚ್ಛ ಭಾರತ ಅಭಿಯಾನದ ಎರಡನೇ ಹಂತದ ಕಾರ್ಯಕ್ರಮಗಳ ಬಗ್ಗೆ ಅಭಿಯಾನದ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕ ಸೂರ್ಯನಾರಾಯಣ ಭಟ್‌ ಮಾಹಿತಿ ನೀಡಿದರು. ಉಪಾಧ್ಯಕ್ಷ ಸಂತೋಷ ರೇಣಕೆ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಚೈತ್ರಾ ಕೊಠಾಕರ್‌, ಬಸವರಾಜ ದೊಡ್ಮನಿ, ಎಲ್‌.ಟಿ. ಪಾಟೀಲ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.