1,036 ಕೋಟಿ ರೂ. ಬಜೆಟ್‌ ಮಂಡನೆ


Team Udayavani, May 30, 2020, 5:39 PM IST

1,036 ಕೋಟಿ ರೂ. ಬಜೆಟ್‌ ಮಂಡನೆ

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ 2020-21ನೇ ಸಾಲಿನ 1036 ಕೋಟಿ ರೂ. ಆಯವ್ಯಯವನ್ನು ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಶುಕ್ರವಾರ ಮಂಡಿಸಿದರು.

ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಬಜೆಟ್‌ ಮಂಡಿಸಿದ ಅಧ್ಯಕ್ಷೆ, ಈ ಕರಡು ಯೋಜನೆಗೆ ರಾಜ್ಯ ಸರ್ಕಾರವು ಈಗಾಗಲೇ ಒಪ್ಪಿಗೆ ನೀಡಿದೆ. ಈ ವರ್ಷ ಯೋಜನೆ ಲೆಕ್ಕ ಶೀರ್ಷಿಕೆ ಮತ್ತು ಯೋಜನೇತರ ಲೆಕ್ಕ ಶೀರ್ಷಿಕ ಎಂಬ ಪ್ರತ್ಯೇಕ ವಿಂಗಡಣೆ ಇಲ್ಲ ಎಂದು ತಿಳಿಸಿದರು.

ಜಿಪಂ ಕಾರ್ಯಕ್ರಮಗಳಿಗೆ 315.44 ಕೋಟಿ, ತಾಪಂ ಕಾರ್ಯಕ್ರಮಗಳಿಗೆ 720.31 ಕೋಟಿ ಹಾಗೂ ಗ್ರಾಪಂ ಕಾರ್ಯಕ್ರಮಗಳಿಗೆ 66 ಲಕ್ಷ ಒದಗಿಸಲಾಗಿದೆ. ತಾ.ಪಂ.ಗಳಿಗೆ 2019-20ನೇ ಸಾಲಿಗಿಂತ 2020-21 ರಲ್ಲಿ 6475.42 ಲಕ್ಷ ಹೆಚ್ಚಿನ ಅನುದಾನ ನೀಡಲಾಗಿದೆ. 2020-21ನೇ ಸಾಲಿಗೆ ವಿವಿಧ ಲೆಕ್ಕ ಶೀರ್ಷಿಕೆ ಅಡಿ ವಿವಿಧ ಇಲಾಖೆಗಳು, ತಾಪಂ ಹಾಗೂ ಗ್ರಾಪಂ ಅನುದಾನ ನಿಗದಿ ಮಾಡಲಾದ ಮೊತ್ತವನ್ನು ಅಧ್ಯಕ್ಷರು ವಿವರಿಸಿದರು.

ಜಿಪಂ ಹಾಗೂ ಅಧಿಧೀನ ಇಲಾಖೆಗಳ ಸಿಬ್ಬಂದಿ ವೇತನಕ್ಕೆ 101.17 ಕೋಟಿ, ಹೊರ ಗುತ್ತಿಗೆ ನೌಕರರ ವೇತನಕ್ಕೆ 80.8 ಕೋಟಿ, ದಿನಗೂಲಿ ನೌಕರರ ವೇತನಕ್ಕೆ 77.04 ಲಕ್ಷ ಹಾಗೂ ಕಚೇರಿ ವೆಚ್ಚ, ಅಭಿವೃದ್ಧಿ ಕಾರ್ಯಗಳಿಗೆ 205.40 ಕೋಟಿ ವಿಂಗಡಿಸಲಾಗಿದೆ ಎಂದು ಜಯಶ್ರೀ ಮೊಗೇರ ವಿವರಿಸಿದರು. ಪ್ರಾಥಮಿಕ, ಮಾಧ್ಯಮಿಕ ಶಿಕ್ಷಣಕ್ಕೆ 14739.06 ಲಕ್ಷ ಒದಗಿಸಲಾಗಿದೆ. ಅಕ್ಷರ ದಾಸೋಹ, ಪೌಷ್ಟಿಕ ಆಹಾರಕ್ಕೆ ಎರಡೂ ಶೈಕ್ಷಣಿಕ ಜಿಲ್ಲೆಗಳಿಗೆ 5763.03 ಲಕ್ಷ ಅನುದಾನ ನಿಗದಿಪಡಿಸಲಾಗಿದೆ. 2020-21 ಆಯವ್ಯಯಕ್ಕೆ ಅನುಮೋದನೆ ನೀಡಲು ಸದಸ್ಯರಲ್ಲಿ ವಿನಂತಿಸಿದರು. ಸುದೀರ್ಘ‌ ಚರ್ಚೆ ನಂತರ ಸದಸ್ಯರು ಬಜೆಟ್‌ಗೆ ಅನುಮೋದನೆ ನೀಡಿದರು.

ಟೀಕೆ-ಪ್ರಶಂಸೆ: ಕೋವಿಡ್ ವಿರುದ್ಧ ಹೋರಾಡುತ್ತಿರುವವರ ಕುರಿತು ಜಿಪಂ ಸದಸ್ಯರಿಂದ ಶ್ಲಾಘನೆ ವ್ಯಕ್ತವಾಯಿತು. ಅಧಿಕಾರಿಗಳು, ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ವೈದ್ಯರು, ವೈದ್ಯಕೀಯ ಸಿಬ್ಬಂದಿ ಜೀವದ ಹಂಗು ತೊರೆದು ಕೋವಿಡ್ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಕೆಲ ಸದಸ್ಯರು ಒಕ್ಕೊರಲಿನ ಅಭಿಪ್ರಾಯ ವ್ಯಕ್ತಪಡಿಸಿದರೆ, ಕೆಲ ಸದಸ್ಯರು ಅಧಿಕಾರಿಗಳ ವರ್ತನೆ ಟೀಕಿಸಿದರು. ಜಿಪಂ ಸಿಇಒ ಎಂ. ರೋಶನ್‌ ಭಟ್ಕಳ ಆಸ್ಪತ್ರೆಗೆ ಭೇಟಿ ನೀಡಿ ಬಂದ ಬಗ್ಗೆ ಸದಸ್ಯರು ಪ್ರಶಂಸೆ ವ್ಯಕ್ತಪಡಿಸಿದರು.

ಸದಸ್ಯ ಅಲ್ಬರ್ಟ್‌ ಡಿಕೋಸ್ಟಾ ಮಾತನಾಡಿ ಭಟ್ಕಳದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಿರಲಿಲ್ಲ. ಆಗಿದ್ದರೆ ಇಷ್ಟು ದಿನ ಲಾಕ್‌ಡೌನ್‌ ಮಾಡುವ ಅವಶ್ಯಕತೆ ಬರುತ್ತಿರಲಿಲ್ಲ. ಅಲ್ಲಿ ಜಿಪಂ ಸದಸ್ಯರಿಗೆ ಪ್ರವೇಶ ಇರಲಿಲ್ಲ ಎಂದು ಆರೋಪಿಸಿದರು. ಸದಸ್ಯ ಜಿ.ಎನ್‌. ಹೆಗಡೆ ಮುರೇಗಾರ ಮಾತನಾಡಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ನೀಡಿದೆ. ಇದರಲ್ಲಿ ನಮ್ಮ ಜಿಲ್ಲೆಗೆ ಏನು ಲಾಭವಿದೆ ಎಂದು ನೋಡಲು ನಾನು ಕಾಯುತ್ತಿದ್ದೇನೆ. ಲಾಕ್‌ಡೌನ್‌ ಸಡಿಲವಾಗದಿದ್ದರೆ ಮುಂದಿನ ದಿನಗಳಲ್ಲಿ ಜನರ ಬದುಕು ಅಸ್ತವ್ಯಸ್ತವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸ್ವಚ್ಛ ಭಾರತ ಅಭಿಯಾನದ ಎರಡನೇ ಹಂತದ ಕಾರ್ಯಕ್ರಮಗಳ ಬಗ್ಗೆ ಅಭಿಯಾನದ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕ ಸೂರ್ಯನಾರಾಯಣ ಭಟ್‌ ಮಾಹಿತಿ ನೀಡಿದರು. ಉಪಾಧ್ಯಕ್ಷ ಸಂತೋಷ ರೇಣಕೆ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಚೈತ್ರಾ ಕೊಠಾಕರ್‌, ಬಸವರಾಜ ದೊಡ್ಮನಿ, ಎಲ್‌.ಟಿ. ಪಾಟೀಲ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shirur landslide; Green signal for National highway traffic in three or four days?

Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

1-ccc-aa

Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್‌ ಬೇಸರ

1–eewr-aa-aa

Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.