ಕಾಗೋಡು ಮಾಲಿಕತ್ವದ ಕಂಪೆನಿಯಲ್ಲಿ 17 ಲಕ್ಷ ರೂ. ಮೌಲ್ಯದ ಸಿಗರೇಟ್ ಕಳ್ಳತನ!
Team Udayavani, May 15, 2023, 7:46 PM IST
ಸಾಗರ: ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರ ಕುಟುಂಬಕ್ಕೆ ಸೇರಿದ ಯುನೈಟೆಡ್ ಟ್ರೇಡಿಂಗ್ ಕಂಪೆನಿಯ ಕಟ್ಟಡದ ಹಿಂಬಾಗಿಲ ಬೀಗ ಒಡೆದು ಒಳ ಪ್ರವೇಶಿಸಿದ ಕಳ್ಳರು ಸುಮಾರು ೧೭ ಲಕ್ಷ ರೂ. ಮೌಲ್ಯದ ಸಿಗರೇಟ್ ಗಳನ್ನು ದೋಚಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಕೃತ್ಯದ ವೇಳೆ ಕಳ್ಳರು ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ಗಳನ್ನು ಕೂಡ ಕದ್ದೊಯ್ದಿದ್ದಾರೆ.
ನಗರದ ಮಾರ್ಕೆಟ್ ರಸ್ತೆಯ ಸೊರಬ ವೃತ್ತದಲ್ಲಿರುವ ಕಂಪೆನಿಯ ಕಚೇರಿಯಲ್ಲಿ ಭಾನುವಾರ ಮಧ್ಯ ರಾತ್ರಿ ವೇಳೆಗೆ ಘಟನೆ ನಡೆದಿದ್ದು, ಸೋಮವಾರ ಬೆಳಗ್ಗೆ ಕಚೇರಿ ಬಾಗಿಲು ತೆರೆಯುತ್ತಿದ್ದಂತೆ ಕಳ್ಳತನ ನಡೆದಿರುವುದು ಸಿಬ್ಬಂದಿಯ ಅರಿವಿಗೆ ಬಂದಿದೆ. ನಗರ ಠಾಣೆಯ ಇನ್ಸ್ಪೆಕ್ಟರ್ ಸೀತಾರಾಮ್ ನೇತೃತ್ವದ ತಂಡ ಕೂಲಂಕಷವಾಗಿ ತಪಾಸಣೆ ನಡೆಸಿದ್ದಾರೆ. ಶಿವಮೊಗ್ಗದಿಂದ ಶ್ವಾನದಳ, ಬೆರಳಚ್ಚು ತಜ್ಞರು ಇಲ್ಲಿಗೆ ಬಂದು ತಪಾಸಣೆಯಲ್ಲಿ ತೊಡಗಿಕೊಂಡಿದ್ದರು.
ಯುನೈಟೆಡ್ ಟ್ರೇಡಿಂಗ್ ಕಂಪೆನಿ ಹಾಗೂ ಸುತ್ತಲಿನ ಕಟ್ಟಡಗಳ ಸಿಸಿಟಿವಿ ಕ್ಯಾಮೆರಾಗಳನ್ನು ತಪಾಸಣೆ ನಡೆಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಘಟನೆ ಸಂಬಂಧ ಸಂಸ್ಥೆ ಮುಖ್ಯಸ್ಥೆ ಅನುರಾಧಾ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ :ವಾಟ್ಸಪ್ನಲ್ಲಿ ಪಾಕಿಸ್ತಾನ ಪರ ಬರಹ: ನಾಲತವಾಡದ ವ್ಯಕ್ತಿ ಜೈಲಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ