21 ಜನರಿಗೆ ಕೋವಿಡ್‌ ಪಾಸಿಟಿವ್‌


Team Udayavani, Jul 6, 2020, 5:32 PM IST

21 ಜನರಿಗೆ ಕೋವಿಡ್‌ ಪಾಸಿಟಿವ್‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ರವಿವಾರ 21 ಜನರಲ್ಲಿ ಕೋವಿಡ್‌ ಪಾಸಿಟಿವ್‌ ಕಾಣಿಸಿಕೊಂಡಿದೆ. ಇದರ ಜೊತೆಗೆ ಜನತೆ ರವಿವಾರದ ಲಾಕ್‌ಡೌನ್‌ನನ್ನು ಶ್ರದ್ಧೆಯಿಂದ ಸ್ವಾಗತಿಸಿದ್ದಾರೆ. ಎಲ್ಲೆಡೆ ಬಂದ್‌ ವಾತಾವರಣವಿದ್ದು, ಜನರು ಮನೆಯಿಂದ ಹೊರಬರಲಿಲ್ಲ.

ವಾಹನ ಸಂಚಾರ ಸಂಪೂರ್ಣ ಸ್ತಬ್ಧವಾಗಿತ್ತು, ಇನ್ನು ರವಿವಾರ ಸಹ ಕೋವಿಡ್‌ ಹಾವಳಿ ಮುಂದುವರಿದಿದ್ದು, 21 ಜನರಲ್ಲಿ ಕೋವಿಡ್‌ ಕಂಡು ಬಂದಿದೆ. 6ಜನಗುಣಮುಖರಾಗಿದ್ದಾರೆ. ಜಿಲ್ಲಾಡಳಿತ 21 ಜನರಿಗೆ ಕೋವಿಡ್‌ ವೈರಾಣು ಪತ್ತೆಯಾಗಿರುವುದನ್ನು ರವಿವಾರ ಸಂಜೆ ದೃಢಪಡಿಸಿದೆ. ಭಟ್ಕಳದ 9 ಜನರಿಗೆ, ಕುಮಟಾ, ಹಳಿಯಾಳ, ಮುಂಡಗೋಡ ತಾಲೂಕಿನಲ್ಲಿ ತಲಾ ಮೂವರಂತೆ 9 ಜನರಿಗೆ, ಕಾರವಾರ, ಕದ್ರಾದಲ್ಲಿ ಒಬ್ಬೊಬ್ಬರಿಗೆ ಕೋವಿಡ್‌ ಪಾಸಿಟಿವ್‌ ಬಂದಿದ್ದು, ಅವರನ್ನು ಆಯಾ ತಾಲೂಕುಗಳಲ್ಲಿರುವ ಕೋವಿಡ್‌ ಚಿಕಿತ್ಸಾ ಕೇಂದ್ರಕ್ಕೆ ಸೇರಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈತನಕ 354 ಜನರಿಗೆ ಕೋವಿಡ್‌ ಪಾಜಿಟಿವ್‌ ಬಂದಿದೆ. ಕೋವಿಡ್‌ ಕಾಣಿಸಿಕೊಂಡವರಲ್ಲಿ ಭಟ್ಕಳದವರೇ ಅಧಿಕ ಸಂಖ್ಯೆಯಲ್ಲಿದ್ದಾರೆ. 132 ಜನ ಭಟ್ಕಳದಲ್ಲಿ ಕೋವಿಡ್‌ನಿಂದ ಬಳಲಿದ್ದರೆ, ಜೋಯಿಡಾದಿಂದ 5, ಅಂಕೋಲಾದಿಂದ 21, ಹಳಿಯಾಳದಿಂದ 31, ಹೊನ್ನಾವರದಿಂದ 34, ಶಿರಸಿಯಿಂದ 25, ಕಾರವಾರದಿಂದ 17, ಕುಮಟಾದಿಂದ 28, ಮುಂಡಗೋಡದಿಂದ 21, ಸಿದ್ದಾಪುರದಿಂದ 6, ಯಲ್ಲಾಪುರದಿಂದ 34 ಜನ ಕೋವಿಡ್‌ ಪಾಸಿಟಿವ್‌ ಹೊಂದಿದ್ದರು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಇವರಲ್ಲಿ 159 ಜನ ಗುಣಮುಖರಾಗಿ ಮನೆ ಸೇರಿದ್ದಾರೆ. 194 ಜನ ಕಾರವಾರದ ಕ್ರಿಮ್ಸ್‌ ಸೇರಿದಂತೆ ವಿವಿಧ ತಾಲೂಕಾ ಆಸ್ಪತ್ರೆಯ ಕೋವಿಡ್‌ ಚಿಕಿತ್ಸಾ ಘಟಕಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವೃದ್ಧೆ ಮಾತ್ರ ಮೃತಪಟ್ಟ ಘಟನೆ ನಡೆದಿದೆ. ಉಳಿದಂತೆ ಬಹುತೇಕರು ಗುಣಮುಖರಾಗಿದ್ದಾರೆ. ಕಾರವಾರದ ಕ್ರಿಮ್ಸ್‌ನಲ್ಲಿ 49 ಜನ ಚಿಕಿತ್ಸೆ ಪಡೆಯುತ್ತಿದ್ದು, ಇದರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದೆ. 48 ಜನರ ಆರೋಗ್ಯ ಸ್ಥಿರವಾಗಿದ್ದು ಅವರು ಸುಧಾರಿಸಿಕೊಳ್ಳುತ್ತಿದ್ದಾರೆಂದು ವೈದ್ಯಕೀಯ ಕಾಲೇಜಿನ ಮೂಲಗಳು ಹೇಳಿವೆ.

ಹೊರ ಜಿಲ್ಲೆಯಿಂದ ಬಂದವರಿಗೆ ಜ್ವರ ತಪಾಸಣೆ ಕಡ್ಡಾಯ: ಹೊರ ಜಿಲ್ಲೆಯಿಂದ ಉತ್ತರ ಕನ್ನಡಕ್ಕೆ ಬರುವವರು 3 ದಿನ ಅಥವಾ ಅದಕ್ಕಿಂತ ಹೆಚ್ಚು ದಿನ ಜಿಲ್ಲೆಯಲ್ಲಿ ಉಳಿದರೆ ಜ್ವರ ತಪಾಸಣೆ ಕಡ್ಡಾಯ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜ್ವರ ತಪಾಸಣೆಯಿಂದ ತಪ್ಪಿಸಿಕೊಂಡರೆ, 14 ದಿನ ಕಡ್ಡಾಯ ಕ್ವಾರಂಟೈನ್‌ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ. ಈ ಸಂಬಂಧ ಎಲ್ಲಾ ತಹಶೀಲ್ದಾರ್‌ಗೆ ಸೂಚನೆ ನೀಡಿದ್ದು, ಹೊರ ಜಿಲ್ಲೆಯಿಂದ ಬರುವವರ ಬಗ್ಗೆ ನಿಗಾ ವಹಿಸಲಾಗಿದೆ. ಹೊರ ಜಿಲ್ಲೆಯಿಂದ ಬರುವವರು ಜ್ವರ ತಪಾಸಣಾ ಕೇಂದ್ರಕ್ಕೆ ಸ್ವಯಂ ಪ್ರೇರಿತರಾಗಿ ಬರುವಂತೆ ವಿನಂತಿಸಲಾಗಿದೆ. ನಿಯಮ ಮೀರಿದರೆ, ಪ್ರಾಕೃತಿಕ ವಿಪತ್ತು ನಿಯಮದಡಿ ಕಾನೂನು ಕ್ರಮ ಖಚಿತ ಎಂದು ಜಿಲ್ಲಾಡಳಿತ ಹೇಳಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.