ಚೆಕ್ ಡ್ಯಾಂಗೆ 5 ಲಕ್ಷ ರೂ. ಬಿಡುಗಡೆ: ಶಾಸಕ ದಿನಕರ ಶೆಟ್ಟಿ
Team Udayavani, Jan 17, 2020, 5:19 PM IST
ಹೊನ್ನಾವರ: ಭಾಸ್ಕೇರಿ ಹೊಳೆ ಸೇರುವ ದೊಡ್ಡಹಿತ್ತಲ್ ಸೇತುವೆ ಬಳಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಪರಿಶೀಲಿಸಿದರು. ಈಗಾಗಲೇ ಸಾಲ್ಕೋಡ್ ಚೆಕ್ ನಿರ್ಮಾಣ ಮುಗಿದಿದ್ದು ಅದೇ ಮಾದರಿಯಲ್ಲಿ ಈ ಸ್ತಳದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲು ಈಗಾಗಲೇ ಪಂಚಾಯತ ವತಿಯಿಂದ ಚಾಲನೆ ನೀಡಲಾಗಿತ್ತು.
ಶಾಸಕ ದಿನಕರ ಶೆಟ್ಟಿ ಮಾತನಾಡಿ, ಹೊಸಾಕುಳಿ ಗ್ರಾಮದಲ್ಲಿ ನನ್ನ ಅವಧಿಯಲ್ಲಿ ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಪಂಚಾಯತ ವತಿಯಿಂದನಿರ್ಮಾಣವಾಗುತ್ತಿರುವ ಚೆಕ್ ಡ್ಯಾಂನಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಕುಡಿಯುವನೀರು ಹಾಗೂ ಬೆಳೆಗೆ ನೀರಿನ ಅಭಾವಬೇಸಿಗೆಯಲ್ಲಿ ತಪ್ಪುವುದರಿಂದ 5 ಲಕ್ಷ ರೂ. ನೀಡಲು ಭರವಸೆ ನೀಡಿದ್ದೇನೆ. ಮುಂದಿನ ದಿನದಲ್ಲಿ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚಿಸಿದ್ದು ಗ್ರಾಮಸ್ಥರಿಗೆ ಅನೂಕೂಲವಾಗಲಿದೆ. ಅಲ್ಲದೆ ಗ್ರಾಮದ ರಸ್ತೆ ಸ್ಥಿತಿಗತಿ ಬಗ್ಗೆ ಬೇಡಿಕೆ ನೀಡಿದ್ದು ಅದನ್ನು ಮುಂದಿನ ದಿನದಲ್ಲಿ ಬಗೆಹರಿಸುವುದಾಗಿ ಭರವಸೆ ನೀಡಿದರು.
ಪಂಚಾಯತ ಅಧ್ಯಕ್ಷ ಸುರೇಶ ಶೆಟ್ಟಿ, ಟಿ.ಎಸ್. ಹೆಗಡೆ, ಜಿಪಂ ಮಾಜಿ ಸದಸ್ಯ ಸುಬ್ರಹ್ಮಣ್ಯ ಶಾಸ್ತ್ರಿ, ಗ್ರಾಪಂ ಸದಸ್ಯ ಶ್ರೀಧರ ಹೆಗಡೆ, ಬಿಜೆಪಿ ಮುಖಂಡರಾದ ಎಂ.ಎಸ್.ಹೆಗಡೆ, ರಮೇಶ ನಾಯ್ಕ, ಉಮೇಶ ನಾಯ್ಕ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!