ರಜತ ಸಂಘಗಳಿಗೆ 50 ಸಾವಿರ ರೂ. ಕೊಡುಗೆ


Team Udayavani, Jun 24, 2019, 10:43 AM IST

uk-tdy-2..

ಶಿರಸಿ: ತಾಲೂಕಿನ ಅಗಸಾಲ ಬೊಮ್ಮನಳ್ಳಿ ಹಾಲು ಉತ್ಪಾದಕರ ಸಂಘದ ಬೆಳ್ಳಿ ಹಬ್ಬ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು.

ಶಿರಸಿ: ಸುಮಾರು 45 ಸಾವಿರ ಸದಸ್ಯರು ನಿತ್ಯ ಎರಡು ಹೊತ್ತು ಧಾರವಾಡ ಹಾಲು ಒಕ್ಕೂಟಕ್ಕೆ ಹಾಲು ನೀಡುತ್ತಿದ್ದು, ಸ್ಥಳೀಯವಾಗಿ ಗುಣಮಟ್ಟದ ಹಾಲು ಸಂಗ್ರಹಿಸುತ್ತಿರುವ ಹಾಲು ಉತ್ಪಾದಕ ಸಂಘಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಒಕ್ಕೂಟದ ವ್ಯಾಪ್ತಿಯ 25 ವರ್ಷ ಕಳೆದ ಹಾಲು ಸಂಘಗಳಿಗೆ ಪ್ರತ್ಯೇಕ ಸ್ವತ್ತಾಗಿ 50 ಸಾವಿರ ರೂ. ಶೇರು ಹಣವನ್ನು ಉಡುಗೊರೆ ರೂಪದಲ್ಲಿ ನೀಡುವ ಉದ್ದೇಶವಿದೆ ಎಂದು ಧಾರವಾಡ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ ಹೇಳಿದರು.

ಅವರು ಭಾನುವಾರ ತಾಲೂಕಿನ ಅಗಸಾಲ ಬೊಮ್ಮನಳ್ಳಿ ಹಾಲು ಉತ್ಪಾದಕರ ಸಂಘದ ‘ಬೆಳ್ಳಿ ಹಬ್ಬ’ವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಸುಮಾರು 28 ಕಂಪನಿಗಳು ಕಮರ್ಷಿಯಲ್ ಉದ್ದೇಶದಿಂದ ಹಾಲಿನ ಉತ್ಪನ್ನಗಳ ವ್ಯಾಪಾರದಲ್ಲಿ ತೊಡಗಿ ಲಾಭ ಮಾಡಿಕೊಳ್ಳುತ್ತಿವೆ. ಆದರೆ, ಕೆಎಂಎಫ್‌ ನಂತಹ ಸಹಕಾರಿ ಹಾಲು ಒಕ್ಕೂಟಗಳು ಸಹಕಾರಿ ತತ್ವದಲ್ಲಿ ಮುನ್ನಡೆಯುತ್ತಿವೆ. ಲಾಭದ ಉದ್ದೇಶವಿಲ್ಲದೇ ರೈತ ಸ್ನೇಹಿಯಾಗಿ ಹೈನುಗಾರರ ಹಿತ ಕಾಯುತ್ತಿವೆ. ಈ ವ್ಯವಸ್ಥೆ ಇನ್ನೂ ಹೆಚ್ಚಿನ ಹಳ್ಳಿಗಳಿಗೆ ತಲುಪಬೇಕು. ಹಾಲಿನ ಗುಣಮಟ್ಟ ಹೆಚ್ಚಬೇಕು, ಇದರಿಂದಷ್ಟೇ ನಾವು ಜಗತ್ತಿನ ಮಾರುಕಟ್ಟೆ ಪ್ರವೇಶಿಸಲು ಸಾಧ್ಯವಾಗಿ ಹಾಲು ಉತ್ಪಾದಕರಿಗೆ ಹೆಚ್ಚಿನ ಧಾರಣೆ ಕೊಡಿಸಲು ಸಾಧ್ಯವಾಗುತ್ತದೆ ಎಂದು ಒಕ್ಕೂಟದ ಅಧ್ಯಕ್ಷರು ಹೇಳಿದರು. ಇನ್ನು ಆರು ತಿಂಗಳೊಳಗೆ ಶಿರಸಿಯಲ್ಲೇ ಹಾಲಿನ ಪ್ರೊಸೆಸಿಂಗ್‌ ಘಟಕ ಸಿದ್ಧಗೊಳ್ಳಲಿದ್ದು, ಸಾಗಾಟದ ಖರ್ಚು ಉಳಿತಾಯವಾಗುತ್ತದೆ, ಗ್ರಾಹಕರಿಗೂ ಅನೂಕೂಲವಾಗಲಿದೆ ಎಂದರು.

ಹೈನುಗಾರಿಕೆ ಕೃಷಿಗೆ ಪೂರಕ ಉಪಕಸುಬಾಗಿದ್ದು, ರೈತರು ಹೈನುಗಾರಿಕೆಯಿಂದ ವಿಮುಖರಾಗದೇ ಮುಂದುವರೆದರೆ ನಮ್ಮ ಆರೋಗ್ಯ ಹಾಗೂ ತೋಟದ ಆರೋಗ್ಯ ಎರಡೂ ಉತ್ತಮವಾಗುವುದೆಂದು ಹೇಳಿದರು.

ಅತಿಥಿಗಳಾಗಿ ಜಿ.ಪಂ. ಸದಸ್ಯ ಜಿ.ಎನ್‌. ಹೆಗಡೆ, ಮುರೇಗಾರ ಮಾತನಾಡಿ, ಪಶು ಆಹಾರಕ್ಕೆ ಸರ್ಕಾರ ಹಾಗೂ ಒಕ್ಕೂಟವು ಶೇ.50 ಸಹಾಯಧನ ನೀಡುವಂತಾದರೆ ಮಾತ್ರ ಹೈನುಗಾರಿಕೆ ಉಳಿಯಲು ಸಾಧ್ಯ, ಸಹಾಯ ನೇರವಾಗಿ ನಮಗಲ್ಲದೆ ಪಶುಗಳಿಗೆ ತಲುಪಲು ಸಾಧ್ಯ ಎಂದರು.

ಒಕ್ಕೂಟದ ಈ ಭಾಗದ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಮಾತನಾಡಿ ಹಾಲು ಸಂಘಗಳ ಬೆಳವಣಿಗೆ ವಿವರಿಸಿದರು. ಮಂಗಳೂರು ಒಕ್ಕೂಟದ ನಿವೃತ್ತ ಜಂಟಿ ನಿರ್ದೇಶಕ ಡಿ.ಎಸ್‌. ಹೆಗಡೆ, ಶಿರಸಿ ಇವರು ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ಉತ್ಪಾದಕರ ಪಾತ್ರದ ಬಗ್ಗೆ ಉಪನ್ಯಾಸ ನೀಡಿದರು. ಹಿರಿಯರಾದ ವಿ.ಎನ್‌. ಹೆಗಡೆ, ಬೊಮ್ನಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿಕರು ಪಶುಪಾಲನೆ ಉಪಕಸುಬಾಗಿ ಮುಂದುವರೆಸಿದರೆ ಕೃಷಿಯಲ್ಲಿ ಲಾಭವಿದೆ, ದೂರಗಾಮಿ ಹಿತವಿದೆ ಎಂದರು.

ಬೆಳ್ಳಿ ಹಬ್ಬದಲ್ಲಿ ಸದಸ್ಯರಿಗೆ ಹಾಲುಕ್ಯಾನ್‌ ವಿತರಿಸಲಾಯಿತು. ಉಪಯುಕ್ತ ಸೇವೆಗಾಗಿ ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಹಾಗೂ ಮುಖ್ಯ ಕಾರ್ಯನಿರ್ವಾಹಕರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ನರಸಿಂಹ ವಿ.ಹೆಗಡೆ, ಬೊಮ್ನಳ್ಳಿ ಸ್ವಾಗತಿಸಿದರು. ಕಾರ್ಯನಿರ್ವಾಹಕ ಭಾಸ್ಕರ ಹೆಗಡೆ ವಂದಿಸಿದರು. ಚಂದನ ಹೆಗಡೆ ನಿರ್ವಹಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.