ಹೊನ್ನಾವರದಲ್ಲಿ 795 ಜನ ಕ್ವಾರಂಟೈನ್
Team Udayavani, May 15, 2020, 5:43 PM IST
ಹೊನ್ನಾವರ: ತಾಲೂಕಿಗೆ ಹೊರಗಿನಿಂದ ಆಗಮಿಸಿದ 795 ಜನರಿಗೆ 14 ದಿನಗಳ ಕಾಲ ವಿವಿಧ ಕ್ವಾರಂಟೈನ್ನಲ್ಲಿ ಇರಬೇಕು ಎಂದು ಆದೇಶಿಸಲಾಗಿದ್ದು, ಇವರಲ್ಲಿ ಹೆಚ್ಚು ಜನ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.
ಇದರಲ್ಲಿ 756 ಜನ ಮನೆಯಲ್ಲಿ, ಹೊಟೇಲ್ನಲ್ಲಿ 16 ಜನ ಮತ್ತು ಹಾಸ್ಟೆಲ್ಗಳಲ್ಲಿ 23 ಜನ ಉಳಿದುಕೊಂಡಿದ್ದು, ಹೊಸ್ಟೆಲ್ ಗಳಲ್ಲಿ ಉಳಿದವರ ವೆಚ್ಚವನ್ನು ಸರ್ಕಾರ ಭರಿಸಲಿದೆ. ಮನೆಯಲ್ಲಿ ಮತ್ತು ಹೊಟೇಲ್ ಗಳಲ್ಲಿ ಉಳಿದುಕೊಂಡವರ ವೆಚ್ಚವನ್ನು ಅವರೇ ಭರಿಸಬೇಕಾಗಿದೆ. ಮಹಾರಾಷ್ಟ್ರ ಸಿಂಧದುರ್ಗದಿಂದ ಗೋವಾ ಮಾರ್ಗ ವಾಗಿ ಬಂದವರನ್ನು ಮಾಜಾಳಿ ಚೆಕ್ಪೋಸ್ಟ್ ನಲ್ಲಿ ತಡೆಹಿಡಿಯಲಾಗಿದೆ. ಇವರು ಭಟ್ಕಳ ಉಪ ವಿಭಾಗಾಧಿಕಾರಿಯಿಂದ ಪರವಾನಗಿ ಪಡೆಯುವಾಗ ಗೋವಾದಿಂದ ಬಂದಿದ್ದರು ಎಂಬ ದಾಖಲೆ ನೀಡಿದ ಕಾರಣ ತಾಂತ್ರಿಕವಾಗಿ ತಡೆಹಿಡಿಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಾನವೀಯ ನೆಲೆಯಲ್ಲಿ ಇವರನ್ನು ಮನೆಯಲ್ಲಿ ಕ್ವಾರಂಟೈನ್ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಚಂದ್ರಕಾಂತ ಕೊಚರೇಕರ್ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಮಹಾರಾಷ್ಟ್ರ, ಸಿಂಧದುರ್ಗ ಕೊಂಕಣಭಾಗ ಮತ್ತು ಗೋವಾ ಭಾಗಗಳಲ್ಲಿ ಮೀನುಗಾರಿಕೆಗಾಗಿ ಬೋಟ್ನಲ್ಲಿ ಕೆಲಸಮಾಡಲು ಜಿಲ್ಲೆಯಿಂದ ಸಾವಿರಾರು ಕಾರ್ಮಿಕರು ಹೋಗಿದ್ದು, ಹೊನ್ನಾವರದಿಂದ 500ರಷ್ಟು ಜನ ಹೋಗಿದ್ದಾರೆ. ಮಳೆಗಾಲ ಹತ್ತಿರ ಬಂದ ಕಾರಣ ಇವರೆಲ್ಲ ತಮ್ಮ ಲೆಕ್ಕಾಚಾರ ಮುಗಿಸಿಕೊಂಡು ಹಣ ಪಡೆದು ಊರಿನತ್ತ ಹೆಜ್ಜೆ ಹಾಕಲಿದ್ದಾರೆ.
ಬಹುಪಾಲು ಅಶಿಕ್ಷಿತರಾದ ಇವರನ್ನು ಕ್ವಾರಂಟೈನ್ ಒಳಪಡಿಸುವುದು ಆಡಳಿತಕ್ಕೆ ಸವಾಲಾಗಲಿದೆ. ಈ ಅವಧಿಯಲ್ಲಿ ಸರ್ಕಾರ ಪರವಾನಗಿ ಮತ್ತು ವೈದ್ಯಕೀಯ ತಪಾಸಣೆ, ಕ್ವಾರಂಟೈನ್ ಎಲ್ಲ ವ್ಯವಸ್ಥೆ ಮಾಡಿದ್ದರೂ ಕೋವಿಡ್ ಪೀಡಿತರು ನುಸುಳಿ ಬರುವ ಸಾಧ್ಯತೆಯಿದ್ದು, ಸಾರ್ವಜನಿಕರು ಇನ್ನೆರಡು ವಾರ ಹೆಚ್ಚು ಕಾಳಜಿ ವಹಿಸಬೇಕು, ಕ್ವಾರಂಟೈನ್ನಲ್ಲಿ ಇದ್ದವರು ಯಾವುದೇ ಕಾರಣಕ್ಕೆ ಹೊರಗೆ ಬರಬಾರದು, ಅವರ ಮೇಲೆ ನಿಗಾ ಇಡಲಾಗಿದೆ ಎಂದು ತಹಶೀಲ್ದಾರ್ ವಿವೇಕ ಶೇಣ್ವಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ