ಕೊಚ್ಚಿ ಹೋದ ಸೇತುವೆ : ಸಂಪರ್ಕ ಕಳೆದುಕೊಂಡ 9 ಕುಗ್ರಾಮಗಳು
Team Udayavani, Jul 22, 2021, 10:17 PM IST
ಅಂಕೋಲಾ: ಕಳೆದ ಕೆಲ ದಿನಗಳಿಂದ ತಾಲೂಕಿನ್ನೆಲ್ಲೆಡೆ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳಗಳು ಉಕ್ಕಿ ಹರಿಯುತ್ತಿದ್ದು ಹಳ್ಳದ ರಭಸಕ್ಕೆ ಹಟ್ಟಿಕೇರಿಯಿಂದ ಕುಗ್ರಾಮಕ್ಕೆ ಸಂಪರ್ಕಿಸುವ ಬಿದಿರಿನ ಸೇತುವೆ ಕೊಚ್ಚಿಹೋಗಿದ್ದು, 9 ಕುಗ್ರಾಮಗಳ ಸಂಪರ್ಕ ಕಡಿತಗೊಂಡಿವೆ.
ತಾಲೂಕಿನ ಹಟ್ಟಿಕೇರಿ ಗ್ರಾಪಂ ವ್ಯಾಪ್ತಿಯಲ್ಲಿ ಗೂಳೆ, ಕೆಂದಗಿ, ಲಕ್ಕೆಗುಳಿ, ಸಿಕಳಿ, ತುರ್ಲಿ, ಮಲಗದ್ದೆ, ಹೀರೆಮನೆ, ಕೋಟೆಬಾವಿ, ಮನ್ನಾಣಿ ಗ್ರಾಮಗಳು ಅಕ್ಷರಶಃ ಸಂಪರ್ಕ ಕಳೆದುಕೊಂಡಿವೆ. ಈ ಎಲ್ಲಾ ಗ್ರಾಮಗಳಲ್ಲಿ 400 ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಬಿದಿರಿನ ಸೇತುವೆ ಕೊಚ್ಚಿ ಹೋದ ಪರಿಣಾಮ ಈ ಗ್ರಾಮದ ನಾಗರಿಕರು ದಿಗ್ಬಂಧನಕ್ಕೊಳಗಾದಂತಾಗಿದೆ. ಮಳೆಗಾಲ ಆರಂಭವಾಗುತ್ತಲೇ ಹಟ್ಟಿಕೇರಿಯಿಂದ ಈ 9 ಗ್ರಾಮಗಳ ಸಂಪರ್ಕಕ್ಕೆ ಸೇರುವ ಮಧ್ಯೆ ಇದ್ದ ಹಳ್ಳ ತುಂಬಿ ಹರಿಯುತ್ತದೆ. ಇಲ್ಲಿ ಗ್ರಾಮಸ್ಥರೆ ಕೂಡಿಕೊಂಡು ಬೀದರಿನ ಸೇತುವೆ ತಾತ್ಕಾಲಿಕವಾಗಿ ನಿರ್ಮಿಸಿಕೊಂಡು ಮೂಲಭೂತ ಅವಶ್ಯಕತೆಗೆ ಹಟ್ಟಿಕೇರಿಗೆ ಹೋಗಿ ಬರುತ್ತಿದ್ದರು. ಆದರೆ ಭಾರಿ ಮಳೆಯಿಂದಾಗಿ ಸೇತುವೆ ಕೊಚ್ಚಿ ಹೋಗಿದ್ದು 9 ಕುಗ್ರಾಮಗಳಲ್ಲಿ ಭಯದ ಕಾರ್ಮೋಡ ಕವಿದಿದೆ.
ಈ ಗ್ರಾಮಗಳಿಗೆ ಸಾಗಲು ಪ್ರಮುಖವಾಗಿ 5 ಸೇತುವೆಗಳ ಅವಶ್ಯಕತೆ ಇದೆ. ಈಗಾಗಲೇ ಶಾಸಕಿ ರೂಪಾಲಿ ನಾಯ್ಕ ಅವರು ಬೊಕಳೆ ಹಳ್ಳಕ್ಕೆ 20 ಲಕ್ಷ ರೂ. ಹಾಗೂ ದೊಡ್ಡಹಳ್ಳದ ಕಾಲು ಸಂಕಕ್ಕೆ 10 ಲಕ್ಷ ರೂ. ಅನುದಾನಕ್ಕಾಗಿ ಕ್ರಿಯಾಯೋಜನೆ ಸಿದ್ಧಪಡಿಸಿದ್ದಾರೆ. ಇನ್ನುಳಿದ 3 ಕಾಲು ಸಂಕವು ಆಗಬೇಕಿದೆ. ದಟ್ಟಕಾಡಿನ ಮಧ್ಯೆ ಇರುವ ಈ 9 ಕುಗ್ರಾಮಗಳ ಜನರು ಯಾವುದೇ ಮೂಲಭೂತ ಅವಶ್ಯಕತೆಗಾಗಿ ಹಟ್ಟಿಕೇರಿಗೆ ಬರಬೇಕು. ರೇಷನ್, ಆಸ್ಪತ್ರೆಗಳಿಗೂ ಹಟ್ಟಿಕೇರಿಯೇ ಇವರಿಗೆ ಆಧಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!