
2.70 ಕೋಟಿ ರೂ.ಲೂಟಿ ಮಾಡಿದ ಬ್ಯಾಂಕ್ ಸಹಾಯಕ ಮ್ಯಾನೇಜರ್ ನಾಪತ್ತೆ
ಪತ್ನಿ ಖಾತೆಗೆ ಜಮಾ ಮಾಡಿದ ಹಣವೂ ಖಾಲಿ; ಉತ್ತರ ಕನ್ನಡ ಎಸ್ಪಿ ಸುಮನ್ ಪನ್ನೇಕರ್
Team Udayavani, Sep 12, 2022, 7:55 PM IST

ಕಾರವಾರ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಯಲ್ಲಾಪುರದಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿನ ಸಹಾಯಕ ಮ್ಯಾನೇಜರ್ ಅಕ್ರಮವಾಗಿ 2.70 ಕೋಟಿ ರೂ.ಗಳನ್ನು ಲಪಟಾಯಿಸಿ ತನ್ನ ಪತ್ನಿ ಖಾತೆಗೆ ಜಮಾ ಮಾಡಿದ್ದ ಹಗರಣ ಸಂಬಂಧ ಪ್ರಕರಣ ದಾಖಲಾಗಿದೆ. ಆತನ ಪತ್ನಿಯ ಖಾತೆಯಲ್ಲಿ ಸಹ ಈಗ ಯಾವುದೇ ಹಣ ಇಲ್ಲದಿರುವುದು ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ಹೇಳಿದ್ದಾರೆ.
ನಗರದ ಎಸ್ಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರ ಬೋನಲ್ ಬ್ಯಾಂಕ್ ನ ಕ್ಲರ್ಕ್ ಮತ್ತು ಇತರೆ ಸಿಬಂದಿ ಟೀ ಕುಡಿಯಲು ಅಥವಾ ಊಟಕ್ಕೆ ಹೋದಾಗ ಅವರ ಐಡಿ ಯಿಂದ ಲಾಗಿನ್ ಆಗಿ ಹಂತ ಹಂತವಾಗಿ ಕಳೆದ 4-5 ತಿಂಗಳಿಂದ ತನ್ನ ಕುಟುಂಬಸ್ಥರ ಖಾತೆಗೆ ಹಣವನ್ನು ವರ್ಗಾವಣೆ ಮಾಡಿಕೊಳ್ಳುತ್ತಿದ್ದ. 5 ತಿಂಗಳಿಂದ ಪ್ರಕರಣ ಬೆಳಕಿಗೆ ಬರುವ ತನಕ ಇಲ್ಲಿಯವರೆಗೆ ಬ್ಯಾಂಕ್ ನಿಂದ 2.70 ಕೋಟಿ ರೂ. ಹಣವನ್ನು ವರ್ಗಾಯಿಸಿಕೊಂಡಿರುವುದು ತಿಳಿದು ಬಂದಿದೆ.
ಈ ವಿಷಯವು ಬ್ಯಾಂಕ್ ಆಫ್ ಬರೋಡಾ ಸಿಬಂದಿಗಳಿಗೆ ಇತ್ತೀಚೆಗೆ ಗಮನಕ್ಕೆ ಬಂದಿದ್ದರಿಂದ ಕುಮಾರ್ ಬೋನಾಲ್ ರ ವಂಚನೆಯ ಬಗ್ಗೆ ದೂರು ನೀಡಿದ್ದಾರೆ. ಅವರ ಮಾಹಿತಿ ಹಾಗೂ ದಾಖಲೆಗಳನ್ನು ಆಧರಿಸಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಅವರು ತಮ್ಮ ಪತ್ನಿಯ ಖಾತೆಗೆ ಜಮಾ ಮಾಡಿರುವುದರಿಂದ ಅವರನ್ನೂ ಈ ಪ್ರಕರಣದ ಆರೋಪಿಯನ್ನಾಗಿ ಮಾಡಲಾಗಿದೆ.
ಇನ್ನು ಅವರ ಖಾತೆಯಿಂದ ಹಣವನ್ನು ಮರು ಭರ್ತಿ ಮಾಡಿಕೊಳ್ಳಲು ಈಗ ಅವರ ಖಾತೆಯಲ್ಲಿ ಯಾವುದೇ ಹಣವಿಲ್ಲ ಎಂಬುದು ತಿಳಿದು ಬಂದಿದೆ. ಇದರ ಜೊತೆಗೆ ಈ ಬ್ಯಾಂಕ್ ಸಹಾಯಕ ಮ್ಯಾನೇಜರ್ ಬೋನಾಲ್ ಕಳೆದೊಂದು ವಾರದ ಹಿಂದೆಯೇ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಆ ಸಂದರ್ಭದಲ್ಲಿ ಬ್ಯಾಂಕ್ ವಿಷಯ ಯಾರ ಗಮನಕ್ಕೂ ಬಂದಿರಲಿಲ್ಲ. ಅವರ ಪತ್ತೆಗೆ ತನಿಖೆ ಆರಂಭಿಸಲಾಗಿದೆ. ಆರೋಪಿ ಪತ್ತೆಯಾದ ಬಳಿಕ ಹಣವನ್ನು ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರಳಿ ವಿಜಯ್

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ