2.70 ಕೋಟಿ ರೂ.ಲೂಟಿ ಮಾಡಿದ ಬ್ಯಾಂಕ್ ಸಹಾಯಕ ಮ್ಯಾನೇಜರ್ ನಾಪತ್ತೆ

ಪತ್ನಿ ಖಾತೆಗೆ ಜಮಾ ಮಾಡಿದ ಹಣವೂ ಖಾಲಿ; ಉತ್ತರ ಕನ್ನಡ ಎಸ್ಪಿ ಸುಮನ್ ಪನ್ನೇಕರ್

Team Udayavani, Sep 12, 2022, 7:55 PM IST

1—–sdsd-sd

ಕಾರವಾರ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಯಲ್ಲಾಪುರದಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿನ ಸಹಾಯಕ ಮ್ಯಾನೇಜರ್ ಅಕ್ರಮವಾಗಿ 2.70 ಕೋಟಿ ರೂ.ಗಳನ್ನು ಲಪಟಾಯಿಸಿ ತನ್ನ ಪತ್ನಿ ಖಾತೆಗೆ ಜಮಾ ಮಾಡಿದ್ದ ಹಗರಣ ಸಂಬಂಧ ಪ್ರಕರಣ ದಾಖಲಾಗಿದೆ. ಆತನ ಪತ್ನಿಯ ಖಾತೆಯಲ್ಲಿ ಸಹ ಈಗ ಯಾವುದೇ ಹಣ ಇಲ್ಲದಿರುವುದು ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ಹೇಳಿದ್ದಾರೆ.

ನಗರದ ಎಸ್‌ಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರ ಬೋನಲ್ ಬ್ಯಾಂಕ್ ನ ಕ್ಲರ್ಕ್ ಮತ್ತು ಇತರೆ ಸಿಬಂದಿ ಟೀ ಕುಡಿಯಲು ಅಥವಾ ಊಟಕ್ಕೆ ಹೋದಾಗ ಅವರ ಐಡಿ ಯಿಂದ ಲಾಗಿನ್ ಆಗಿ ಹಂತ ಹಂತವಾಗಿ ಕಳೆದ 4-5 ತಿಂಗಳಿಂದ ತನ್ನ ಕುಟುಂಬಸ್ಥರ ಖಾತೆಗೆ ಹಣವನ್ನು ವರ್ಗಾವಣೆ ಮಾಡಿಕೊಳ್ಳುತ್ತಿದ್ದ. 5 ತಿಂಗಳಿಂದ ಪ್ರಕರಣ ಬೆಳಕಿಗೆ ಬರುವ ತನಕ ಇಲ್ಲಿಯವರೆಗೆ ಬ್ಯಾಂಕ್ ನಿಂದ 2.70 ಕೋಟಿ ರೂ. ಹಣವನ್ನು ವರ್ಗಾಯಿಸಿಕೊಂಡಿರುವುದು ತಿಳಿದು ಬಂದಿದೆ.

ಈ ವಿಷಯವು ಬ್ಯಾಂಕ್ ಆಫ್ ಬರೋಡಾ ಸಿಬಂದಿಗಳಿಗೆ ಇತ್ತೀಚೆಗೆ ಗಮನಕ್ಕೆ ಬಂದಿದ್ದರಿಂದ ಕುಮಾರ್ ಬೋನಾಲ್ ರ ವಂಚನೆಯ ಬಗ್ಗೆ ದೂರು ನೀಡಿದ್ದಾರೆ. ಅವರ ಮಾಹಿತಿ ಹಾಗೂ ದಾಖಲೆಗಳನ್ನು ಆಧರಿಸಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಅವರು ತಮ್ಮ ಪತ್ನಿಯ ಖಾತೆಗೆ ಜಮಾ ಮಾಡಿರುವುದರಿಂದ ಅವರನ್ನೂ ಈ ಪ್ರಕರಣದ ಆರೋಪಿಯನ್ನಾಗಿ ಮಾಡಲಾಗಿದೆ.

ಇನ್ನು ಅವರ ಖಾತೆಯಿಂದ ಹಣವನ್ನು ಮರು ಭರ್ತಿ ಮಾಡಿಕೊಳ್ಳಲು ಈಗ ಅವರ ಖಾತೆಯಲ್ಲಿ ಯಾವುದೇ ಹಣವಿಲ್ಲ ಎಂಬುದು ತಿಳಿದು ಬಂದಿದೆ. ಇದರ ಜೊತೆಗೆ ಈ ಬ್ಯಾಂಕ್ ಸಹಾಯಕ ಮ್ಯಾನೇಜರ್ ಬೋನಾಲ್ ಕಳೆದೊಂದು ವಾರದ ಹಿಂದೆಯೇ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಆ ಸಂದರ್ಭದಲ್ಲಿ ಬ್ಯಾಂಕ್ ವಿಷಯ ಯಾರ ಗಮನಕ್ಕೂ ಬಂದಿರಲಿಲ್ಲ. ಅವರ ಪತ್ತೆಗೆ ತನಿಖೆ ಆರಂಭಿಸಲಾಗಿದೆ. ಆರೋಪಿ ಪತ್ತೆಯಾದ ಬಳಿಕ ಹಣವನ್ನು ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.