ಸತ್ಯಾಗ್ರಹ-ಹೋರಾಟಗಳಿಗೆ ಸ್ಪಂದಿಸದ ಸರ್ಕಾರ

ಗೌರವ ಧನ ಹೆಚ್ಚಿಸಲು ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರ ಒತ್ತಾಯ

Team Udayavani, Jul 12, 2019, 3:15 PM IST

uk-tdy-4..

ಕುಮಟಾ: ರಾಜ್ಯ ಸ್ವತಂತ್ರ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಕುಮಟಾ ಸಂಘದ ಸದಸ್ಯರು.

ಕುಮಟಾ: ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರಾಗಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರ ಗೋಳಿನ ಕಥೆ ಒಂದೆರಡಲ್ಲ. ಸೇವೆ ಸಲ್ಲಿಸುತ್ತಿರುವ ಈ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಸರ್ಕಾರದ ಧೋರಣೆಯಿಂದ ಭವಿಷ್ಯ ಮಂಕಾಗಿ ಗೋಚರಿಸುತ್ತಿರುವ ಆತಂಕ ಎದುರಾಗಿದೆ. ಜೀವ ಸವೆದರೂ ಬಾಳು ಹಸನವಾಗುತ್ತಿಲ್ಲ ಎಂಬುದು ಇವರ ಅಳಲು.

ಹಲವು ವರ್ಷಗಳಿಂದ ತಮ್ಮ ಬೇಡಿಕೆಗಳಿಗೆ ಧರಣಿ, ಸತ್ಯಾಗ್ರಹ, ಹೋರಾಟಗಳು ನಿರಂತರ ನಡೆಯುತ್ತ ಬಂದರೂ, ಸರ್ಕಾರ ಮಾತ್ರ ಇವರ ಬೇಡಿಕೆಗಳ ಬಗ್ಗೆ ಒಂದಿಷ್ಟೂ ಯೋಚಿಸುತ್ತಿಲ್ಲ. ತಮ್ಮ ಬೇಡಿಕೆಗಳನ್ನು ಕಂಡಕಂಡವರಲ್ಲಿ ಹೇಳಿಕೊಳ್ಳುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗುವ ಗೌರವಧನ ಎಲ್ಲೂ ಸಾಲದು ಎಂಬುದು ಸರ್ಕಾರಕ್ಕೂ ತಿಳಿದಿದೆ. ಆದರೂ ಇವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೇ ಇರುವುದು ಇವರ ಚಿಂತೆಗೆ ಕಾರಣವಾಗಿದೆ.

ಪಟ್ಟಣದ ಮಣಕಿ ಮೈದಾನದಲ್ಲಿ ಸೇರಿದ್ದ ಅಂಗನವಾಡಿ ಕಾರ್ಯಕರ್ತೆಯರು ಪತ್ರಕರ್ತರಲ್ಲಿ ತಮ್ಮ ಅಳಲು ತೋಡಿಕೊಂಡರು. ಎಲ್ಲ ಹೋರಾಟಗಳ ನಂತರ ಮಾಧ್ಯಮದ ಮೊರೆ ಹೋಗುತ್ತಿದ್ದೇವೆ. ನಿಮ್ಮಿಂದ ನಮಗೇನಾದರೂ ಕಿಂಚಿತ್‌ ಅನುಕೂಲ ಆಗಬಹುದೆಂದು ಆಸೆ ಹೊಂದಿದ್ದೇವೆ ಎಂದರು.

ಸಿಐಟಿಯು ಮೂಲಕ ನಮ್ಮ ಬೇಡಿಕೆಗಳ ಹೋರಾಟದಲ್ಲಿ ಹಗಲಿರುಳು ಪಾಲ್ಗೊಂಡಿದ್ದೇವೆ. ಆದರೆ ಒಂದೇ ಒಂದು ಬೇಡಿಕೆಯೂ ಈಡೇರಲಿಲ್ಲ. ಆದಕಾರಣ ಪ್ರತ್ಯೇಕವಾಗಿ ಸ್ವತಂತ್ರ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕುಮಟಾ ತಾಲೂಕು ಎಂಬ ಸಂಘ ಕಟ್ಟಿಕೊಂಡು ಹೋರಾಟ ನಡೆಸುತ್ತಿದ್ದೇವೆ. ಆದರೂ ನಮ್ಮ ಬೇಡಿಕೆಗಳಿಗೆ ಬೆಲೆ ಸಿಗುತ್ತಿಲ್ಲ ಎಂದು ಬೆಸರ ವ್ಯಕ್ತಪಡಿಸಿದರು.

ಸಂಘದ ಸದಸ್ಯರಾದ ತಾರಾ ನಾಯ್ಕ ಹಾಗೂ ಸಾವಿತ್ರಿ ಶಾಸ್ತ್ರಿ ಮಾತನಾಡಿ, ಸರಕಾರ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ಪ್ರಾರಂಭಿಸಿದೆ. ಇದು ಒಳ್ಳೆಯ ನಿರ್ಧಾರ. ಆದರೆ ನಮ್ಮಲ್ಲಿರುವ ಇಂಗ್ಲಿಷ್‌ ಬಲ್ಲವರನ್ನು ಸರ್ಕಾರ ಶಿಕ್ಷಕರನ್ನಾಗಿ ನೇಮಿಸಿಕೊಳ್ಳಲಿ. ಸದ್ಯ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ 8 ಸಾವಿರ ರೂ. ಗೌರವಧನ ಸಾಲದು. ಸಮಾನ ಕೆಲಸಕ್ಕೆ ಸಮಾನ ವೇತನ ಎಲ್ಲ ಇಲಾಖೆಗಳಿಗೂ ಅನ್ವಯಿಸುತ್ತದೆ. ಆದರೆ ನಮಗೆ ಮಾತ್ರ ಅನ್ವಯಿಸುತ್ತಿಲ್ಲ. ಸರ್ಕಾರ ತಮ್ಮೆಲ್ಲ ಕೆಲಸಗಳಿಗೆ ಉಳಿದ ಕಾಯಂ ಸರ್ಕಾರಿ ನೌಕರರಂತೆ ನಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ವೇತನದ ಪ್ರಶ್ನೆ ಬಂದಾಗ ಮಾತ್ರ ಸರ್ಕಾರ ಹಿಂದೆ ಸರಿಯುತ್ತದೆ. ಸ್ವತಂತ್ರ ಭಾರತದಲ್ಲಿ ನಾವು ಜೀತದಾಳುಗಳಂತೆ ದುಡಿಯುತ್ತಿದ್ದೇವೆ.

ಸರ್ಕಾರದ ಕಾರ್ಯಕ್ರಮಗಳಿಗೆ ನಾವು ಪ್ರತಿನಿತ್ಯ 40 ರಿಜೀಸ್ಟರ್‌ಗಳನ್ನು ಬರೆಯಬೇಕಾಗಿದೆ. ಆದರೆ ಸರ್ಕಾರ ನ್ಯಾಯಾಲಯದ ಆದೇಶದಂತೆ ಕನಿಷ್ಠ ಕೂಲಿಯನ್ನೂ ನೀಡುತ್ತಿಲ್ಲ. ನಮಗೂ ಸಂಸಾರವಿದೆ. ಮಕ್ಕಳ ಶಿಕ್ಷಣದ ಚಿಂತೆಯಿದೆ. ಮನೆಯ ಸದಸ್ಯರ ಜವಾಬ್ದಾರಿಯಿದೆ. 8 ಸಾವಿರ ರೂ.ನಲ್ಲಿ ಒಂದು ಸಂಸಾರ ಕಳೆಯಲು ಹೇಗೆಸಾಧ್ಯ ಎಂಬುದನ್ನು ಸರ್ಕಾರ ಯೋಚಿಸಬೇಕು. ಚುನಾವಣಾ ಸಂದರ್ಭದಲ್ಲಿ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳುವ ಎಲ್ಲಾ ಸರ್ಕಾರಿ ನೌಕರರಿಗೆ ಸರಕಾರ ಹಣ ನೀಡುತ್ತದೆ. ನಮ್ಮ ಕೈಯಲ್ಲೂ ಸಮಾನವಾಗಿ ದುಡಿಸಿಕೊಳ್ಳುತ್ತದೆ. ಆದರೆ ನಮಗೆ ಮಾತ್ರ ಹಣ ಕೊಡುತ್ತಿಲ್ಲ. ಸಾಮಾನ್ಯ ಸರ್ಕಾರಿ ನೌಕರರೊಬ್ಬರು ನಿವೃತ್ತಿಯಾದರೆ ಅವರಿಗೆ 10 ರಿಂದ 20 ಲಕ್ಷದ ವರೆಗೆ ಭವಿಷ್ಯ ನಿಧಿ ಹಾಗೂ ಇತರ ಹಣ ಸಿಗುತ್ತದೆ. ನಮಗೆ ಮಾತ್ರ ಭವಿಷ್ಯದ ಯಾವ ಬಧ್ರತೆಯೂ ಇಲ್ಲ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ನೀಡುತ್ತದೆ. ಆದರೆ ನಮಗೆ ಇದರಿಂದ ವಂಚಿಸಲಾಗುತ್ತಿದೆೆ ಎಂದು ಬೇಸರಿಸಿಕೊಂಡರು.ಕುಮಟಾ ತಾಲೂಕು ಸಂಘದ ಅಧ್ಯಕ್ಷೆ ಕುಸುಮಾ ನಾಯ್ಕ, ಭಾಗೀರಥಿ ನಾಯ್ಕ, ಜಾನಕಿ ಕೂರ್ಸೆ, ಸುಶೀಲಾ ನಾಯ್ಕ, ಸುಮತಿ ನಾಯ್ಕ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.