ನಿರಪೇಕ್ಷೆಯಿಂದ ರಸ್ತೆ ದುರಸ್ತಿ ಮಾಡಿದ ಕೂಲಿ ಕಾರ್ಮಿಕ


Team Udayavani, Aug 30, 2019, 12:08 PM IST

uk-tdy-1

ಕುಮಟಾ: ಹದಗೆಟ್ಟ ಕೂಜಳ್ಳಿ ರಸ್ತೆ ದುರಸ್ತಿ ಪಡಿಸುತ್ತಿರುವ ಪರಮೇಶ್ವರ ತಿಮ್ಮಪ್ಪ ಗೌಡ.

ಕುಮಟಾ: ರಸ್ತೆ ದುರಸ್ತಿ ಸರ್ಕಾರದ ಕಾರ್ಯ ಎಂದು ನಿರ್ಲಕ್ಷ್ಯ ತೋರುವವರ ನಡುವೆ ಕೂಲಿ ಕಾರ್ಮಿಕನೊಬ್ಬ ಬಿಡುವಿನ ಸಮಯದಲ್ಲಿ ಶ್ರಮದಾನದ ಮೂಲಕ ರಸ್ತೆ ದುರಸ್ತಿ ಪಡಿಸುವ ಕಾಯಕದಲ್ಲಿ ತೊಡಗಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರನಾಗಿ, ಇತರರಿಗೆ ಮಾದರಿಯಾಗಿದ್ದಾನೆ.

ವಾಲಗಳ್ಳಿ ಗ್ರಾ.ಪಂ ವ್ಯಾಪ್ತಿಯ ಹಾರೋಡಿ ನಿವಾಸಿ, ಕೂಲಿಕಾರ್ಮಿಕ ಪರಮೇಶ್ವರ ತಿಮ್ಮಪ್ಪ ಗೌಡ ಪ್ರಶಂಸೆಗೆ ಪಾತ್ರನಾದ ವ್ಯಕ್ತಿ.

ಪಟ್ಟಣದ ಹೊಸ ಹೆರವಟ್ಟಾದಿಂದ ಕೂಜಳ್ಳಿವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದೆ. ಇದರಿಂದ ಅನೇಕ ವಾಹನ ಸವಾರರು ತಾಲೂಕು ಆಡಳಿತವನ್ನು ಶಪಿಸುತ್ತಾರೆಯೇ ಹೊರತು ಅದರ ದುರಸ್ತಿಗೆ ಮುಂದಾಗಿಲ್ಲ. ಆದರೆ ಕೂಲಿಕಾರ್ಮಿಕ ಪರಮೇಶ್ವರ ತಿಮ್ಮಪ್ಪ ಗೌಡ ಕಳೆದ 4 ವರ್ಷಗಳಿಂದ ತಮ್ಮ ಬಿಡುವಿನ ಸಮಯದಲ್ಲಿ ರಸ್ತೆಯ ಹೊಂಡಗಳಿಗೆ ಕಲ್ಲು ಹಾಕಿ ಮುಚ್ಚುವ ಕಾಯಕದಲ್ಲಿ ತೊಡಗಿದ್ದಾರೆ.

ಜೀವನ ನಿರ್ವಹಣೆಗಾಗಿ ಕೃಷಿ ಕೂಲಿ ಅವಲಂಬಿಸಿರುವ ಪರಮೇಶ್ವರ ಗೌಡ ಅವರು, ಯಾವಾಗ ಕೂಲಿ ಕೆಲಸ ಇರುವುದಿಲ್ಲವೋ ಆ ದಿನ ರಸ್ತೆ ದುರಸ್ತಿಪಡಿಸುತ್ತಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ ಗೌಡ, ಹೊಸ ಹೆರವಟ್ಟಾದಿಂದ ಕೂಜಳ್ಳಿವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸರ್ಕಾರ ದುರಸ್ತಿ ಮಾಡಿಲ್ಲ. ನಾನೇ ಆ ಕಾರ್ಯ ಮಾಡುತ್ತಿದ್ದೇನೆ. ರಸ್ತೆ ದುರಸ್ತಿಯಾದರೆ ನಮಗೆ ಓಡಾಡಲೂ ಅನುಕೂಲವಾಗುತ್ತದೆ. ಸಾರ್ವಜನಿಕ ಕಾರ್ಯಗಳನ್ನು ಸರ್ಕಾರವೇ ಮಾಡಲಿ ಎಂದು ಕೈಕಟ್ಟಿ ಕೂರುವ ಬದಲು, ನಾವೇ ಮಾಡಿದರೆ, ಊರಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎನ್ನುತ್ತಾರೆ.

ಒಟ್ಟಾರೆ ಇವರ ರಸ್ತೆ ದುರಸ್ತಿ ಶ್ರಮದಾನಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದ್ದು, ಪಿಎಸ್‌ಐ ಈ.ಸಿ. ಸಂಪತ್‌ ಕೂಡಾ ಸ್ಥಳಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನಾದರೂ ತಾಲೂಕು ಆಡಳಿತ ಈ ರಸ್ತೆ ಅಭಿವೃದ್ಧಿಪಡಿಸುವ ಮೂಲಕ ಪರಮೇಶ್ವರ ಗೌಡರ ಕಾರ್ಯಕ್ಕೆ ನೆರವಾಗಲಿ ಎಂಬುದು ಎಲ್ಲರ ಆಶಯ.

ಟಾಪ್ ನ್ಯೂಸ್

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.