ಮತ್ತೆ ಮಣ್ಣಲ್ಲಿ ಸಿಲುಕಿದ ಪ್ರಯಾಣಿಕರ ದೋಣಿ-ಆತಂಕ ಸೃಷ್ಟಿ

ಸೇತುವೆ ಕಾಮಗಾರಿಗಾಗಿ ಬಳಸಿದ್ದ ಮಣ್ಣು ತೆರವುಗೊಳಿಸದ್ದರಿಂದ ಹೆಚ್ಚಿದ ಸಮಸ್ಯೆ

Team Udayavani, Oct 14, 2022, 3:56 PM IST

20

ಅಂಕೋಲಾ: ತಾಲೂಕಿನ ಮಂಜಗುಣಿ-ಗಂಗಾವಳಿ ನಡುವಿನ ಸೇತುವೆ ನಿರ್ಮಾಣಕ್ಕೆ ಹಾಕಲಾಗಿದ್ದ ಮಣ್ಣು ಸಂಪೂರ್ಣ ತೆರವುಗೊಳಿಸದ್ದರಿಂದ ಯಾಂತ್ರೀಕೃತ ದೋಣಿಯೊಂದು ಮಣ್ಣಿನಲ್ಲಿ ಸಿಲುಕಿ ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದ್ದು, ಕಾಮಗಾರಿ ಕೈಗೊಂಡ ಕಂಪನಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2018 ರಲ್ಲಿ ಅಂದಿನ ಶಾಸಕ ಸತೀಶ ಸೈಲ್‌ 30 ಕೋಟಿ ರೂ. ವೆಚ್ಚದ ಸೇತುವೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದರು. ರೂಪಾಲಿ ನಾಯ್ಕ ಶಾಸಕರಾದ ನಂತರ ಕಾಮಗಾರಿ ಆರಂಭಗೊಂಡಿತ್ತು. ಈ ಕಾಮಗಾರಿಗಾಗಿ ಗಂಗಾವಳಿ ನದಿಗೆ ಮಣ್ಣು ಹಾಕಿ ಫಿಲ್ಲರ್‌ ಮಾಡಲಾಗಿತ್ತು. ಆದರೆ μಲ್ಲರ್‌ ಕಾಮಗಾರಿ ಮುಗಿದರೂ ಕೂಡ ಮಣ್ಣು ತೆಗೆಯದೆ ಇರುವುದರಿಂದ ಸಮಸ್ಯೆ ಉಂಟಾಗಿತ್ತು. ಸ್ಥಳೀಯರು ಸೇರಿದಂತೆ ನದಿ ತಟದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.

ಈ ಸೇತುವೆ ಕಾಮಗಾರಿಗಾಗಿ ನದಿಗೆ ಮಣ್ಣು ಹಾಕಿದ್ದರಿಂದ ಸತತ ಮೂರು ವರ್ಷ ನೆರೆ ಉಂಟಾಗಿ ಸಾಕಷ್ಟು ಆಸ್ತಿಪಾಸ್ತಿ ಹಾನಿಯಾಗಿದ್ದಲ್ಲದೇ ಶಿರೂರಿನಲ್ಲಿ ದೋಣಿ ಮಗುಚಿ ಇಬ್ಬರು ಮೃತಪಟ್ಟಿದ್ದರು. ಹೀಗಾಗಿ ನದಿಗೆ ಹಾಕಲಾಗಿದ್ದ ಮಣ್ಣು ತೆರವುಗೊಳಿಸುವಂತೆ ಕೆಲ ತಿಂಗಳ ಹಿಂದೆ ಮಂಜಗುಣಿ ಸೇರಿದಂತೆ ನದಿ ಅಕ್ಕ ಪಕ್ಕದ ಗ್ರಾ.ಪಂ. ವ್ಯಾಪ್ತಿಯ ಜನಪ್ರತಿನಿ ಗಳು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು.

ತಹಶೀಲ್ದಾರ್‌ ಉದಯ ಕುಂಬಾರ, ಸಿಪಿಐ ಸಂತೋಷ ಶೆಟ್ಟಿ ಸ್ಥಳಕ್ಕೆ ಆಗಮಿಸಿ ಮಣ್ಣನ್ನು ತೆರವುಗೊಳಿಸುವಂತೆ ಸೂಚನೆ ನೀಡುವುದರೊಂದಿಗೆ ನೋಟಿಸ್‌ ಕೂಡ ಜಾರಿ ಮಾಡಿದ್ದರು. ನಂತರ ಕಂಪನಿಯವರು ಮಣ್ಣು ತೆರವಿಗೆ ಮುಂದಾದರೂ ನೀರಿನ ಮೇಲ್ಭಾಗದ ಮಣ್ಣನ್ನು ಮಾತ್ರ ತೆಗೆಯಲು ಸಾಧ್ಯವಾಯಿತು. ನದಿಯಾಳದ ಮಣ್ಣನ್ನು ತೆಗೆಯಬೇಕಾದರೆ ಬಾರ್ಜ್‌ನಿಂದಲೇ ತೆಗೆಯಬೇಕು. ಹೀಗಾಗಿ ದುಬಾರಿ ವೆಚ್ಚದ ಸಬೂಬು ಹೇಳಿ ಕಂಪನಿ ಜಾರಿಕೊಂಡಿತ್ತು.

ಈ ವರ್ಷ ಘಟ್ಟದ ಮೇಲ್ಭಾಗದಲ್ಲಿ ಮಳೆ ಹೆಚ್ಚಾಗಿರದಿದ್ದರಿಂದ ನೆರೆ ಉಂಟಾಗಿಲ್ಲ. ಒಂದು ವೇಳೆ ಮಳೆ ಹೆಚ್ಚಾಗಿದ್ದರೆ ಪ್ರವಾಹ ಉಂಟಾಗುವ ಸಾಧ್ಯತೆಯಿತ್ತು. ಇದನ್ನು ಹೀಗೆ ಬಿಟ್ಟರೆ ಮುಂದೆಯೂ ಕೂಡ ಅನಾಹುತ ಕಟ್ಟಿಟ್ಟ ಬುತ್ತಿ. ಹೀಗಾಗಿ ಕೂಡಲೇ ನದಿಗೆ ಹಾಕಲಾದ ಸಾವಿರಾರು ಲೋಡ್‌ ಮಣ್ಣನ್ನು ತೆರವುಗೊಳಿಸಬೇಕು. ಜತೆಗೆ ಸೇತುವೆ ಕಾಮಗಾರಿಯು ಆದಷ್ಟು ಬೇಗ ಮುಗಿಯಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಅನಾಹುತ ಹೆಚ್ಚುವ ಮುನ್ನ ಮಣ್ಣು ತೆರವಾಗಲಿ

ತಾರಿ ದೋಣಿ ಗುತ್ತಿಗೆ ಪಡೆದವರು ಸ್ವಂತ ಹಣದಲ್ಲಿ ಮಂಜಗುಣಿಯಲ್ಲಿ ಸಣ್ಣ ಜಟ್ಟಿ ನಿರ್ಮಿಸಿಕೊಂಡಿದ್ದರು. ಆದರೆ ಅಮವಾಸ್ಯೆ ಮತ್ತು ಹುಣ್ಣಿಮೆಯ ಸಮಯದಲ್ಲಿ ನೀರು ಕಡಿಮೆಯಾಗುವುದರಿಂದ ಹಳೆಯ ಜಟ್ಟಿಯ ಮೂಲಕ ದೋಣಿಯನ್ನು ಚಲಾಯಿಸಬೇಕಾಗುತ್ತದೆ. ಎಂದಿನಂತೆ ಚಲಾಯಿಸುತ್ತಿದ್ದ ದೋಣಿ ಸೇತುವೆ ಕೆಳಗೆ ಹಾಕಲಾಗಿದ್ದ ಮಣ್ಣಿಗೆ ಸಿಲುಕಿ ಸಂಕಷ್ಟ ಎದುರಿಸುವಂತಾಯಿತು. ನೀರಿನ ರಭಸಕ್ಕೆ ಸಂಪೂರ್ಣ ಮಣ್ಣು ಕೊಚ್ಚಿ ಹೋಗಿದೆ ಎಂದು ಹೇಳುವ ಗುತ್ತಿಗೆ ಕಂಪನಿಗೆ ಈಗ ಸಾಕ್ಷé ಒದಗಿಸಿದಂತಾಗಿದೆ. ಕೆಲವೊಮ್ಮೆ ಮೀನುಗಾರಿಕೆ ದೋಣಿಗಳೂ ಕೂಡ ದಾಟದ ಪರಿಸ್ಥಿತಿಯಲ್ಲಿದೆ. ಕೂಡಲೇ ಅಧಿಕಾರಿಗಳು ಮಣ್ಣು ತೆರವಿಗೆ ಮುಂದಾಗದಿದ್ದರೆ ಮತ್ತೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.