ಸರಳ ವ್ಯಕ್ತಿತ್ವದ ಸಜ್ಜನ ವ್ಯಕ್ತಿ ನಾ.ಸು. ಭರತನಹಳ್ಳಿ

ಸಾಹಿತಿ-ರಂಗಕರ್ಮಿ-ಪತ್ರಕರ್ತ-ಪ್ರಕಾಶಕರಾಗಿ ಸಾಹಿತ್ಯದ ಸೇವೆ ಮಾಡಿದ್ದರು: ಹೆಬ್ಬಾರ್

Team Udayavani, Dec 26, 2020, 3:07 PM IST

ಸರಳ ವ್ಯಕ್ತಿತ್ವದ ಸಜ್ಜನ ವ್ಯಕ್ತಿ ನಾ.ಸು. ಭರತನಹಳ್ಳಿ

ಕಾರವಾರ: ಹಿರಿಯ ಸಾಹಿತಿ, ಅಂಕಣಕಾರರು ಹಾಗೂ ಯಲ್ಲಾಪುರ ತಾಲೂಕು ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷ ನಾ.ಸು. ಭರತನಳ್ಳಿ ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಹಿತಿ, ರಂಗಕರ್ಮಿ, ಪತ್ರಕರ್ತ,

ಪ್ರಕಾಶಕರಾಗಿ ಸಾಹಿತ್ಯದ ಸೇವೆ ಮಾಡಿದ್ದರು. ಕಥೆ, ಕಾದಂಬರಿ, ಕವನ, ಪ್ರವಾಸಿ ಕಥನ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಅಂಕಣ ಬರಹ ಸೇರಿದಂತೆ 26 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ವಿಶೇಷ ಬರಹಗಳ ಮೂಲಕವಾಗಿ ಯಲ್ಲಾಪುರದ ಸಾಹಿತ್ಯ ರಂಗಕ್ಕೆ ಹೊಸ ಮೆರಗನ್ನು ನೀಡಿದರು.

ಮುನ್ನಡೆ ಪತ್ರಿಕೆಗೆ ಪತ್ರಕರ್ತರಾಗಿ ಕೆಲಸ ಮಾಡಿದ್ದ ನಾಸು ಭರತನಳ್ಳಿ ಸೇರಿದಂತೆ ರಾಜ್ಯ ಪತ್ರಿಕೆಯಲ್ಲಿ ಅಂಕಣ ಬರೆಯುವುದರ ಮೂಲಕ ಗುರುತಿಸಿಕೊಂಡಿದ್ದರು. ನಾಸು ಅವರ ನಿಧನದಿಂದ ತಾಲೂಕಿನ ಸಾಹಿತ್ಯ ರಂಗವು ಸಜ್ಜನರನ್ನು ಕಳೆದುಕೊಂಡಿದೆ ಎಂದಿದ್ದಾರೆ. ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ ಎಂದು ಸಚಿವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಮೂರುಸಾವಿರ ಮಠದ ರಕ್ಷಣೆಗೆ ಮುಂದಾಗಿದ್ದಕ್ಕೆ ಜೀವಬೆದರಿಕೆ: ದಿಂಗಾಲೇಶ್ವರ ಸ್ವಾಮೀಜಿ

ಗಣ್ಯರ ಕಂಬನಿ

ಹಿರಿಯ ಸಾಹಿತಿಗಳು, ಖ್ಯಾತ ಅಂಕಣಕಾರ ನಾ.ಸು ಭರತನಳ್ಳಿ ಅವರ ನಿಧನದಿಂದ ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದುಅವರ ನೆನಪು ಶಾಶ್ವತ ಎಂದು ಚೇತನಾ ಸಹಕಾರಿ ಮುದ್ರಣಾಲಯದ ಅಧ್ಯಕ್ಷ, ಸಹಕಾರಿ ರತ್ನ ಪುರಸ್ಕೃತ ಜಿ.ಎಮ್‌ ಹೆಗಡೆ ಹುಳಗೋಳ ಕಂಬನಿ ಮಿಡಿದಿದ್ದಾರೆ.

ಕಳೆದ ಮೂವತ್ತೆರಡು ವರ್ಷಗಳಿಂದ ಚೇತನಾ ಸಹಕಾರಿ ಮುದ್ರಣಾಲಯದ ಸಂಸ್ಥಾಪಕ ನಿರ್ದೇಶಕರಾಗಿ, ಹಾಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಸಂಸ್ಥೆಯ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೇವಲ ಸಾಮಾಜಿಕ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಹಕಾರಿ ಕ್ಷೇತ್ರದಲ್ಲಿನ ಅವರ ಸಾಧನೆಯ ಸಂಗತಿಗಳು ಎಲೆಮರೆಯ ಕಾಯಿ ಇದ್ದಂತೆ. ಅವರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ.

ತಮ್ಮ ಕೊನೆ ದಿನಗಳಲ್ಲಿಯೂ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ನಾ.ಸು ಅವರ ನಿಧನಕ್ಕೆ ಚೇತನಾ ಸಹಕಾರಿ ಮುದ್ರಣಾಲಯದ ನಿರ್ದೇಶಕರಾದ ಎಸ್‌.ಪಿ ಶೆಟ್ಟಿ, ಎನ್‌.ಆರ್‌ ಹೆಗಡೆ ಬುಗಡಿಮನೆ, ಪರಮೇಶ್ವರ ಹೆಗಡೆ ಕಾಗೇರಿ, ಸಲಹೆಗಾರ ಪಿ.ವಿ. ಹೆಗಡೆ ಕಂಪ್ಲಿ ಹಾಗೂ ಸಂಸ್ಥೆ ಸಿಬ್ಬಂದಿ ದುಃಖ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.