ಮೂಲ ಸೌಕರ್ಯವಿಲ್ಲದ ಕ್ರೀಡಾಂಗಣ!


Team Udayavani, Sep 17, 2019, 12:41 PM IST

uk-tdy-1

ಶಿರಸಿ: ಜಿಲ್ಲೆಯ ಕ್ರೀಡಾಂಗಣಗಳ ದೃಶ್ಯ.

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧೀನದಲ್ಲಿರುವ ಕ್ರೀಡಾಂಗಣಗಳಲ್ಲಿ ಕ್ರೀಡಾಪಟುಗಳು ಮೂಲ ಸೌಕರ್ಯಗಳಿಂದ ವಂಚಿತರಾಗಿ ನಿರ್ವಣೆಯಲ್ಲಿನ ಲೋಪದಿಂದ ಕ್ರೀಡಾಂಗಣಗಳು ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವುದಕ್ಕೆ ಸ್ಪಂದನ ನ್ಪೋರ್ಟ್ಸ್ ಅಕಾಡೆಮಿ ಜಿಲ್ಲೆಯಲ್ಲಿ ಸುಸಜ್ಜಿತ ಮತ್ತು ವ್ಯವಸ್ಥಿತ ಕ್ರೀಡಾಂಗಣಕ್ಕೆ ಸರಕಾರಕ್ಕೆ ಆಗ್ರಹಿಸಿ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಕಾನೂನಾತ್ಮಕ ಹೋರಾಟ ಪ್ರಕ್ರಿಯೆ ಪ್ರಾರಂಭಿಸುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಎ.ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಜಿಲ್ಲೆಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧೀನದಲ್ಲಿರುವ ಶಿರಸಿ, ಯಲ್ಲಾಪುರ, ಹಳಿಯಾಳ, ಮುಂಡಗೋಡ, ಜೋಯಿಡಾ, ಭಟ್ಕಳ, ಅಂಕೋಲಾ ಮುಂತಾದ ತಾಲೂಕಿನ ಕ್ರೀಡಾಂಗಣಗಳು ಅವ್ಯವಸ್ಥೆ, ಅಸಮರ್ಪಕ, ಅವೈಜ್ಞಾನಿಕ, ಸಮತಟ್ಟು ಇಲ್ಲದ, ಕಳಪೆ ಹಾಗೂ ಸೂಕ್ತ ಕ್ರೀಡಾ ಸಾಮಗ್ರಿಗಳ ಕೊರತೆಯಿಂದ ಬಳಲುತ್ತಿದ್ದು, ಅನೇಕ ಕ್ರೀಡಾಂಗಣಕ್ಕೆ ಶೌಚಾಲಯದ ಸೌಲಭ್ಯ ಕೂಡ ಇಲ್ಲದಿರುವುದು ದುರದೃಷ್ಟಕರ. ಇಲಾಖೆಯು ಎಲ್ಲಾ ಕ್ರೀಡಾಂಗಣಗಳ ನಿರ್ವಹಣೆಯಲ್ಲಿ ಸಂಪೂರ್ಣ ವೈಫಲ್ಯವಾಗಿದ್ದು ಒಳಚರಂಡಿ, ಕ್ರೀಡಾಂಗಣ ಸಮತಟ್ಟು ಮಾಡುವಿಕೆ, ಮೈದಾನದ ಸುತ್ತಲೂ ತಡೆಗೋಡೆ, ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳಿಗೆ ಬಟ್ಟೆ ಬದಲಿಸಲು ಕೊಠಡಿ ಇಲ್ಲದಿರುವಿಕೆ ಖೇದಕರ ಸಂಗತಿಯಾಗಿದೆ. ಶಿರಸಿ ಹೊರತಾಗಿ ಇನ್ನುಳಿದ ಯಾವುದೇ ಕ್ರೀಡಾಂಗಣದಲ್ಲಿಯೂ ವ್ಯಾಯಾಮ ಶಾಲೆ ಇಲ್ಲದಿರುವುದು ದುರದೃಷ್ಟಕರ. ಇಂಥ ಅವ್ಯವಸ್ಥೆಗಳಿಂದ ಕೆಲವೊಂದು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಜರುಗಿಸಲು ಅಸಾಧ್ಯವಾಗಿರುವುದು ಕಂಡು ಬಂದಿದೆ. ಅಪಾಯಕಾರಿ ಕ್ರೀಡಾಂಗಣದಲ್ಲಿ ಅನೇಕ ಕ್ರೀಡಾಪಟುಗಳು ಗಾಯಗೊಂಡ ನಿದರ್ಶನಗಳು ಸಾಕಷ್ಟಿವೆ.

ಅಸಮರ್ಪಕ ಕ್ರೀಡಾಂಗಣ ಜಿಲ್ಲೆಯಲ್ಲಿರುವುದರಿಂದ ರಾಜ್ಯಮಟ್ಟದ ಯಾವುದೇ ಕ್ರೀಡಾಕೂಟಗಳು ಜರುಗುತ್ತಿಲ್ಲ ಕ್ರೀಡಾಪಟುಗಳಿಗೆ ಪೂರಕ ವಾತಾವರಣದ ಕೊರತೆಯಿಂದ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಪಟುಗಳ ಬೆಳವಣಿಗೆ ಕುಂಠಿತವಾಗಿದೆ. ಕ್ರೀಡಾ ಚಟುವಟಿಕೆಗೆ ಪೂರಕವಾದ ಯೋಗ್ಯ ಕ್ರೀಡಾಂಗಣ ಹಾಗೂ ಯುಕ್ತ ತರಬೇತುದಾರರ ಕೊರತೆಯಿಂದ ಜಿಲ್ಲೆಯ ಉದಯೋನ್ಮುಖ ಕ್ರೀಡಾಪಟುಗಳು ಗುರಿ ಸಾಧಿಸುವಲ್ಲಿ ವಂಚಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧೀನದಲ್ಲಿರುವ ಕ್ರೀಡಾಂಗಣದಲ್ಲಿ ಕಾರವಾರದಲ್ಲಿ ಅಥ್ಲೆಟಿಕ್ಸ್‌ ಮತ್ತು ಮುಂಡಗೋಡದಲ್ಲಿ ವಾಲಿಬಾಲ್, ಹಳಿಯಾಳದಲ್ಲಿ ಕುಸ್ತಿ ತರಬೇತುದಾರರನ್ನು ಬಿಟ್ಟರೆ ಜಿಲ್ಲಾ ಕ್ರೀಡಾಂಗಣವೆಂದು ಗುರುತಿಸಲ್ಪಟ್ಟ ಶಿರಸಿಯನ್ನು ಸೇರಿಸಿ ಇನ್ನುಳಿದ ತಾಲೂಕುಗಳಲ್ಲಿ ಪರಿಣಿತ ಖಾಯಂ ಅಥವಾ ಹಂಗಾಮಿ ತರಬೇತುದಾರರು ಇಲ್ಲದಿರುವುದು ಶೋಚನೀಯ ಸಂಗತಿ ಎಂದು ರವೀಂದ್ರ ನಾಯ್ಕ ತಿಳಿಸಿದ್ದಾರೆ.

ವಿವಿಧ ವಿಭಾಗದ ವಯೋಮಿತಿ ಬಾಲಕ-ಬಾಲಕಿಯರ ಮತ್ತು ಪುರುಷ-ಮಹಿಳೆಯರ ಕ್ರೀಡಾ ವಿಭಾಗದ ವಿಜೇತರ ಅಂಕಿ-ಅಂಶ ರಾಜ್ಯದಲ್ಲಿನ ಉಳಿದ ಜಿಲ್ಲೆಯ ಕ್ರೀಡಾ ಪ್ರಗತಿಯನ್ನು ಉ.ಕ. ಜಿಲ್ಲೆಗೆ ತುಲನಾತ್ಮಕವಾಗಿ ನೋಡಿದಾಗ ಇದು ಕೊನೆಯ ಸ್ಥಾನದಲ್ಲಿದೆ.

ಜಿಲ್ಲೆಯ ಸಶಕ್ತ, ಬುಡಕಟ್ಟು ಮತ್ತು ದೈಹಿಕ ಸಾಮರ್ಥ್ಯದ ಕ್ರೀಡಾಪಟುಗಳಿದ್ದರೂ ಕ್ರೀಡೆಗೆ ಪೂರಕವಾದ ಕ್ರೀಡಾಂಗಣ, ಪ್ರೋತ್ಸಾಹ, ತಂತ್ರಜ್ಞಾನ, ಕುಶಲತೆ ತರಬೇತಿ ಇಲ್ಲದಿರುವುದು ಹಿನ್ನೆಡೆಗೆ ಕಾರಣವಾಗಿದೆ. ಇಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಜರುಗಿಸದೇ ಇರಲು ಕಳಪೆ ಮಟ್ಟದ ಕ್ರೀಡಾಂಗಣವೇ ಕಾರಣವಾಗಿದೆ.

ಪ್ರತಿ ತಾಲೂಕಿನಲ್ಲಿಯೂ ಪ್ರತಿವರ್ಷ ಪ್ರಾಥಮಿಕ, ಪ್ರೌಢ, ಪಪೂ, ಮಹಾವಿದ್ಯಾಲಯ, ದಸರಾ, ಪೈಕಾ ಕ್ರೀಡಾಕೂಟಗಳಲ್ಲಿ ಪ್ರತಿ ತಾಲೂಕಿನಲ್ಲಿಯೂ ಪ್ರತಿ ಶೈಕ್ಷಣಿಕ ವರ್ಷದಲ್ಲಿ 7 ರಿಂದ 8 ಸಾವಿರ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ನೇರವಾಗಿ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ತಾಲೂಕು ಕೇಂದ್ರದಲ್ಲಿ ಸುಸಜ್ಜಿತ 400 ಮೀ. ಓಟ ಪಥದ ಪರಿವ್ಯಾಪ್ತಿಯ ಕ್ರೀಡಾಂಗಣದ ಅವಶ್ಯಕತೆಗೆ ಕಾನೂನಾತ್ಮಕ ಹೋರಾಟ ಹಮ್ಮಿಕೊಳ್ಳುವ ಉದ್ದೇಶದಿಂದ ಹಾಗೂ ಕ್ರೀಡಾ ಪೂರಕ ಚಟುವಟಿಕೆಗೆ ಸುಸಜ್ಜಿತ ಕ್ರೀಡಾಂಗಣದ ಅವಶ್ಯಕತೆ ಇರುವುದನ್ನು ಮನಗಂಡು ಪ್ರತಿ ತಾಲೂಕಿನಲ್ಲಿಯೂ ಸುಸಜ್ಜಿತ ಕ್ರೀಡಾಂಗಣ ಹಾಗೂ ಜಿಲ್ಲೆಗೊಂದು ಸಿಂಥೆಟಿಕ್‌ ಅಥ್ಲೆಟಿಕ್‌ ಕ್ರೀಡಾಂಗಣವನ್ನು ಸರ್ಕಾರ ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ಕಾನೂನು ಹೋರಾಟ ಆರಂಭಿಸಲಾಗುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.