Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ
Team Udayavani, Sep 24, 2023, 11:31 AM IST
ಶಿರಸಿ: ಜಾನುವಾರು ತುಂಬಿಕೊಂಡು ಬಂದ ವಾಹನ ತಾಲೂಕಿನ ಬುಗುಡಿಕೊಪ್ಪ ಬಳಿ ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಸೆ.24ರ ಭಾನುವಾರ ನಡೆದಿದೆ.
ಚಾಲಕನ ನಿರ್ಲಕ್ಷ್ಯತನದಿಂದ ವಾಹನದಲ್ಲಿದ್ದ ಜಾನುವಾರಲ್ಲಿ ಒಂದು ಮೃತಪಟ್ಟಿದೆ.
ಗಾಯಗೊಂಡವರು ಹಾನಗಲ್ ಮೂಲದವರು ಎನ್ನಲಾಗಿದ್ದು, ಶಿರಸಿ ಅಗ್ನಿಶಾಮಕ ದಳ ಸಿಬಂದಿಗಳು ಬೆಳಗಿನ ಜಾವ 45 ನಿಮಿಷಗಳ ಕಾಲ ಕಾರ್ಯಾಚರಣೆ ಮಾಡಿ ಚಾಲಕ, ಸಹ ಪ್ರಯಾಣಿಕ ಹಾಗೂ ವಾಹನದಲ್ಲಿದ್ದ ಜಾನುವಾರುಗಳನ್ನು ಹೊರ ತೆಗೆದರು.
ಒಂದೇ ವಾಹನದಲ್ಲಿ ಆರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವ ಬಗ್ಗೆ ಕೂಡ ಪೋಲಿಸರಿಂದ ತನಿಖೆ ಆರಂಭವಾಗಿದೆ.
ಬನವಾಸಿ ಠಾಣೆ ಪಿಎಸ್ಐ ಚಂದ್ರಕಲಾ ಪತ್ತಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ