ದಾಂಡೇಲಿ: ಫಣಸೋಲಿ ಅರಣ್ಯ ಪ್ರದೇಶದಲ್ಲಿ ಜಂಗಲ್ ಸಫಾರಿಗೆ ಹೋದ ವಾಹನ ಪಲ್ಟಿ; ಐವರಿಗೆ ಗಾಯ
Team Udayavani, May 20, 2023, 1:40 PM IST
ದಾಂಡೇಲಿ: ಜಂಗಲ್ ಸಫಾರಿಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿ ಹಿಂದುರುಗಿ ಬರುತ್ತಿದ್ದ ಬೊಲೆರೊ ಕ್ಯಾಂಪರ್ ವಾಹನವೊಂದು ಪಲ್ಟಿಯಾಗಿ ವಾಹನದಲ್ಲಿದ್ದ ಐವರಿಗೆ ಗಾಯವಾದ ಘಟನೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಫಣಸೋಲಿ ಅರಣ್ಯ ಪ್ರದೇಶದಲ್ಲಿರುವ ಬೆಥಗಿ ಘಾಟ್ ಹತ್ತಿರ ಶನಿವಾರ ಬೆಳಿಗ್ಗೆ ನಡೆದಿದೆ.
ವಾಹನದಲ್ಲಿದ್ದ ಕೋಲಾರದ ಒಂದೇ ಕುಟುಂಬಕ್ಕೆ ಜಾನ್ಸಿ ಶ್ರೀನಿವಾಸ(35) ಶ್ರೀನಿವಾಸ ಭದ್ರಾಚಾರಿ(40) ವೈಷ್ಣವಿ ದರ್ಶನ್.ಕೆ (35) ಋತ್ವಿಕ್ ಭದ್ರ.ಎಸ್ (4), ತೌಶಿಕ್.ಭದ್ರ.ಎಸ್(13) ಘಟನೆಯಲ್ಲಿ ಗಾಯಗೊಂಡಿದ್ದಾರೆ.
ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ, ಋತ್ವಿಕ್.ಭದ್ರ.ಎಸ್ ಎಂಬಾತನನ್ನು ಬಿಟ್ಟು ಉಳಿದ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ರವಾನಿಸಲಾಗಿದೆ.
ಕೋಲಾರದಿಂದ ಪ್ರವಾಸಕ್ಕೆಂದು ಬಂದಿದ್ದ ಆರು ಜನರ ತಂಡವೊಂದು ಶನಿವಾರ ಬೆಳಿಗ್ಗೆ ಫಣಸೋಲಿಯ ಜಂಗಲ್ ಸಫಾರಿ ಪಾಯಿಂಟ್ ನಿಂದ ಜಂಗಲ್ ಸಫಾರಿಗೆ ಕೆಎ:35, ಡಿ:3105 ಸಂಖ್ಯೆಯ ಬೊಲೆರೊ ಕ್ಯಾಂಪರ್ ವಾಹನದ ಮೂಲಕ ತೆರಳಿದ್ದರು. ಜಂಗಲ್ ಸಫಾರಿ ಮುಗಿಸಿ ಹಿಂದುರುಗಿ ಬರುತ್ತಿದ್ದ ಬೆಥಗಿ ಘಾಟ್ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಕ್ಯಾಂಪರ್ ಪಲ್ಟಿಯಾಗಿದೆ.
ಇನ್ನೂ ಚಾಲಕ ರಾಘವೇಂದ್ರ ವಿಷ್ಣು ಪೆಡ್ನೇಕರ್ ಎಂಬಾತನಿಗೆ ಸಣ್ಣಪುಟ್ಟ ಗಾಯವಾಗಿರುವ ಮಾಹಿತಿ ಲಭ್ಯವಾಗಿದೆ.
ಜಂಗಲ್ ಸಫಾರಿಗೆ ಹೋಗಿ ಬರುವ ಸಂದರ್ಭದಲ್ಲಿ ಕನಿಷ್ಟ ವೇಗದಲ್ಲಿ ವಾಹನ ಸಂಚಾರಿಸಿದ್ದರೂ, ಆಕಸ್ಮಿಕವಾಗಿ ಈ ಘಟನೆ ಸಂಭವಿಸಿದ್ದು, ಪ್ರವಾಸಿಗರು ಆತಂಕ ಪಡುವ ಅವಶ್ಯಕತೆಯಿಲ್ಲ.
ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸೈ ಕೃಷ್ಣೆಗೌಡ ಹಾಗೂ ಪೊಲಿಸ್ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಆಸ್ಪತ್ರೆಗೆ ಫಣಸೋಲಿ ವಲಯಾರಣ್ಯಾಧಿಕಾರಿ ರಶ್ಮಿ ದೇಸಾಯಿ ಸೇರಿದಂತೆ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ