ಬಾರದ ಸಿಎಂ: ಸಂತ್ರಸ್ತರಲ್ಲಿ ನಿರಾಶೆ


Team Udayavani, Sep 1, 2019, 1:01 PM IST

uk-tdy-2

ಕಾರವಾರ: ಮುಖ್ಯಮಂತ್ರಿಗಳ ಆಗಮನಕ್ಕೆ ಕಾದಿದ್ದ ಅಧಿಕಾರಿಗಳ ದಂಡು.

ಕಾರವಾರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕಾರವಾರ ಭೇಟಿ ಹವಾಮಾನ ವೈಪರಿತ್ಯದಿಂದ ರದ್ದಾಗಿದೆ. ಕರಾವಳಿಯಲ್ಲಿ ಬೀಳುತ್ತಿದ್ದ ಮಳೆ ಹಾಗೂ ಮೋಡ ಕವಿದ ವಾತಾವರಣ ಹೆಲಿಕಾಪ್ಟರ್‌ ಇಳಿಯಲು ಸೂಕ್ತವಲ್ಲ ಎಂದು ಪೈಲೆಟ್ ಹೇಳಿದ ಕಾರಣ ಬಿಎಸ್‌ವೈ ಉತ್ತರ ಕನ್ನಡ ಜಿಲ್ಲೆಯ ಭೇಟಿ ಮುಂದೂಡಲ್ಪಟ್ಟಿತು.

ನೆರೆ ಪ್ರದೇಶಗಳಿಗೆ ಭೇಟಿ ಹಾಗೂ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಲು ಸಕಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿತ್ತು.

ನೆರೆ ಪ್ರದೇಶದ ಛಾಯಚಿತ್ರಗಳ ಪ್ರದರ್ಶನ ಸಹ ಡಿಸಿ ಕಚೇರಿ ಕಾರಿಡಾರ್‌ನಲ್ಲಿ ಏರ್ಪಟ್ಟಿತ್ತು. ನೆರೆ ಕುರಿತಾದ ಐದು ನಿಮಿಷದ ಸಾಕ್ಷ್ಯಚಿತ್ರವನ್ನು ಸಿಎಂ ಎದುರು ಪ್ರದರ್ಶಿಸಲು ವಿಜುವಲ್ಸ್ ಬಳಸಿ ಧ್ವನಿ ನೀಡಿ ತಯಾರಿಸಲಾಗಿತು. ಆದರೆ ಶನಿವಾರ ಬೆಳಗಿನಿಂದಲೇ ಸುರಿದ ಭಾರೀ ಮಳೆಯ ಕಾರಣ ಮುಖ್ಯಮಂತ್ರಿಗಳ ಭೇಟಿ ರದ್ದಾಗಿದೆ.

ಶಾಸಕರು ಕಾಯುತ್ತಿದ್ದರು: ಶಾಸಕರಾದ ರೂಪಾಲಿ ನಾಯ್ಕ, ದಿನಕರ ಶೆಟ್ಟಿ, ಸುನೀಲ್ ನಾಯ್ಕ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಬೆಳಗಿನಿಂದಲೇ ಕಾಯುತ್ತಿದ್ದರು. ಜಿಲ್ಲಾಧಿಕಾರಿ ಹರೀಶ್‌ ಕುಮಾರ್‌, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್‌ ಮುದ್ಗಲ್ ಸಜ್ಜಾಗಿದ್ದರು. ಕುಮಟಾದ ಖೈರೆ, ಕಾರವಾರದ ಗೋಟೆಗಾಳಿ, ಕದ್ರಾ ಗ್ರಾಮಗಳಿಗೆ ಮುಖ್ಯಮಂತ್ರಿಗಳನ್ನು ಕರೆದುಕೊಂಡು ಹೋಗಲು ಸಕಲ ಸಿದ್ಧತೆಗಳು ನಡೆದಿದ್ದವು. ಆದರೆ ಪ್ರಕೃತಿ ಮುನಿದ ಕಾರಣ ಮುಖ್ಯಮಂತ್ರಿಗಳ ಭೇಟಿ ಎರಡನೇ ಸಲ ರದ್ದಾದಂತಾಗಿದೆ.

ನಿರಾಶರಾದ ಕಾರ್ಯಕರ್ತರು: ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಸಿಎಂ ಆಗಮನಕ್ಕೆ ಕಾದಿದ್ದರು. ಶನಿವಾರ ಬೆಳಗಿನ 8 ರಿಂದ ಮಧ್ಯಾಹ್ನ 12ರ ವರೆಗೆ ಸಿಎಂ ಬರುತ್ತಾರೆಂದು ಕಾಯಲಾಯಿತು. ಆದರೆ ಅಂತಿಮವಾಗಿ ಮೋಡಗಳ ಹಿನ್ನೆಲೆಯಲ್ಲಿ ರದ್ದಾಯಿತು. ಅಂಕೋಲಾದ ಡೊಂಗ್ರಿಯಿಂದ ಭಾರತೀಯ ಕಿಸಾನ್‌ ಸಂಘದ ಪದಾಧಿಕಾರಿಗಳು ಬಂದಿದ್ದರು. ಬಿಜೆಪಿ ಜಿಪಂ ಸದಸ್ಯರು, ನಗರಸಭೆ ಸದಸ್ಯರು, ನಗರ ಘಟಕದ ಅಧ್ಯಕ್ಷರು, ಅಂಕೋಲಾ ಬಿಜೆಪಿ ಪ್ರಮುಖರು ಬಂದಿದ್ದರು. ಸಿಎಂ ಬಾರದಿದ್ದಾಗ ಅವರ ಅರ್ಪಣೆಗೆ ತಂದಿದ್ದ ಹೂ ಬೊಕ್ಕೆಗಳನ್ನು ಹಿಡಿದು ನಿರಾಶೆಯಿಂದ ಮನೆಯತ್ತ ಹೆಜ್ಜೆ ಹಾಕಿದರು.

ನಿರಾಶ್ರಿತರಲ್ಲಿ ನಿರಾಶೆ: ಮುಖ್ಯಮಂತ್ರಿ ಕಾರವಾರ ಭೇಟಿ ಯೋಗವಿಲ್ಲ ಎಂದು ಅಂಕೋಲಾ ಕಡೆಯವರು ಗೊಣಗಿದರು. ಗೋಟೆಗಾಳಿ ಮತ್ತು ಕದ್ರಾ ಜನ ಸಿಎಂ ಆಗಮನದ ನಿರೀಕ್ಷೆಯಲ್ಲಿದ್ದರು. ಆದರೆ ಅವರು ಬರುವುದಿಲ್ಲ ಎಂದಾಕ್ಷಣ ತೀವ್ರ ನಿರಾಶೆಗೆ ಒಳಗಾದರು. ಕಣ್ಣಂಚಲ್ಲಿ ಮಡುಗಟ್ಟಿದ ದುಃಖ ಕಟ್ಟೆಯೊಡೆಯಿತು. ಸರ್ಕಾರ ನಮ್ಮ ನೆರೆವಿಗೆ ಬರಲಿದೆಯೇ ಎಂಬ ಅನುಮಾನ ಅವರನ್ನು ಕಾಡಿತು.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.