ಅಂಗಡಿಕಾರರಿಗೆ ತೊಂದರೆ ಆಗದಂತೆ ಕ್ರಮ

ಶತಮಾನದ ಹಿಂದಿನ ಗಾಂಧಿ ಮಾರುಕಟ್ಟೆ ಮಳಿಗೆಗಳು ಶಿಥಿಲಗೊಂಡಿವೆ.

Team Udayavani, Jun 25, 2022, 6:35 PM IST

ಅಂಗಡಿಕಾರರಿಗೆ ತೊಂದರೆ ಆಗದಂತೆ ಕ್ರಮ

ಕಾರವಾರ: ಜಿಲ್ಲಾ ಕೇಂದ್ರ ಕಾರವಾರ ನಗರದ ಹಳೆಯ ಕಟ್ಟಡ ಗಾಂಧಿ ಮಾರ್ಕೆಟ್‌ನ್ನು ಈಗಿರುವ ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ಸುಸಜ್ಜಿತ ವಾಣಿಜ್ಯ ಸಂಕೀರ್ಣ ನಿರ್ಮಿಸಿ ನಗರದ ಸೌಂದರ್ಯ ಹೆಚ್ಚಿಸುವಂತೆ ಕ್ರಮ ಕೈಗೊಳ್ಳಲು ನಗರಸಭೆ ಮತ್ತು ನಗರಾಡಳಿತ ಸಚಿವಾಲಯ ಉದ್ದೇಶಿಸಿದೆ.

ಹಳೆಯ ಮಾರ್ಕೆಟನಲ್ಲಿರುವ ವ್ಯಾಪಾರಸ್ಥರಿಗೆ ಹಾಗೂ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಶಾಸಕಿ ರೂಪಾಲಿ ನಾಯ್ಕ ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಜೊತೆ ಚರ್ಚಿಸಿ, ಪತ್ರ ವ್ಯವಹಾರ ಮಾಡಿ 9 ಕೋಟಿ ರೂ. ಮಂಜೂರು ಮಾಡಿಸಿದ್ದಾರೆ. 1931ರಲ್ಲಿ ಗಾಂಧಿಜೀ ಕಾರವಾರಕ್ಕೆ ಅಸ್ಪೃಶ್ಯತೆ ನಿವಾರಣೆಯ ಜಾಗೃತಿ ಕಾರ್ಯಕ್ರಮಕ್ಕೆ ಬಂದ ನೆನಪಿಗಾಗಿ ನಗರಸಭೆ ಗಾಂ ಧಿ ಮಾರ್ಕೆಟ್‌ ನಿರ್ಮಿಸಿತ್ತು. ಶತಮಾನದ ಹಿಂದಿನ ಗಾಂಧಿ ಮಾರುಕಟ್ಟೆ ಮಳಿಗೆಗಳು ಶಿಥಿಲಗೊಂಡಿವೆ. ನಗರದ ಹೃದಯಭಾಗದಲ್ಲಿರುವ ಈ ಮಾರುಕಟ್ಟೆ ವ್ಯಾಪಾರ ವಹಿವಾಟಿಗೆ ಸೂಕ್ತವಾಗಿದೆ.

ಆದರೆ ಕಟ್ಟಡ ಹಳೆಯದಾಗಿದ್ದು, ಹೊಸ ಕಟ್ಟಡ ಕಟ್ಟಲು ಕಳೆದ ಹತ್ತು ವರ್ಷಗಳಿಂದ ನಗರಸಭೆ ಪ್ರಯತ್ನಿಸಿತ್ತು. ಆದರೆ ಬಾಡಿಗೆ ಇರುವವರ ಮನವೊಲಿಸುವುದೇ ನಗರಸಭೆಗೆ ದೊಡ್ಡ ತಲೆನೋವಾಗಿತ್ತು. ಈಗ ಇರುವ ಸ್ಥಳದಲ್ಲಿಯೇ ವ್ಯಾಪಾರ ಮಳಿಗೆ ಮಾಡಿ ಗ್ರಾಹಕ ಸ್ನೇಹಿಯಾಗಿ ಆಧುನಿಕ ಸೌಲಭ್ಯಗಳೊಂದಿಗೆ 9 ಕೋಟಿ ರೂ. ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಶಾಸಕರು ಬಯಸಿದ್ದರು. ಈಗ ಹೊಸ ಕಟ್ಟಡ ನಿರ್ಮಾಣಕ್ಕೆ ನಗರೋತ್ಥಾನದಡಿ 5 ಕೋಟಿ ರೂ. ಹಾಗೂ ಶಾಸಕರ ವಿಶೇಷ ಅನುದಾನವಾಗಿ 4 ಕೋಟಿ ರೂ.ಗಳನ್ನು ವಾಣಿಜ್ಯ ಸಂಕೀರ್ಣಕ್ಕೆ ಮೀಸಲಿಡಲಾಗಿದೆ.

ಹೆಚ್ಚುವರಿ ಅನುದಾನ ಬೇಕಿದ್ದಲ್ಲಿ ಅನುದಾನ ತರುವ ಭರವಸೆಯನ್ನು ಶಾಸಕರು ನೀಡಿದ್ದಾರೆ. ಈಗಾಗಲೆ ಹಳೆಯ ಕಟ್ಟಡದಲ್ಲಿ ಇರುವ ವ್ಯಾಪಾರಸ್ಥರಿಗೆ ಹೊಸ ಕಟ್ಟಡದಲ್ಲಿ ಅನುಕೂಲವಾಗುವಂತೆ ನೆಲ ಮಹಡಿ ಮಳಿಗೆಗಳನ್ನು ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಶಾಸಕಿ ಸಭೆ ನಡೆಸಿ ಅಂಗಡಿಕಾರರಿಗೆ ಮಾಹಿತಿ ನೀಡಿದ್ದಾರೆ. ನಗರಸಭೆ, ಸಂಬಂಧಪಟ್ಟ ಇಲಾಖೆಗಳ ಸಹಕಾರದಲ್ಲಿ ನಗರದ ಹೃದಯಭಾಗದಲ್ಲಿ ಸುಸಜ್ಜಿತ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸುವ ಮೂಲಕ ಅಂಗಡಿಕಾರರು, ಗ್ರಾಹಕರು ಎಲ್ಲರಿಗೂ ಅನುಕೂಲ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ನಗರದ ಸೌಂದರ್ಯವೂ ಇದರಿಂದ ಇಮ್ಮಡಿಯಾಗಲಿದೆ. ಮಳೆಗಾಲದ ನಂತರ ಹಳೆಯ ಕಟ್ಟಡ ಕೆಡವಲು ನಿರ್ಧರಿಸಲಾಗಿದೆ.

2022 ಸೆಪ್ಟೆಂಬರ್‌ ಒಳಗಡೆ ಅಂಗಡಿಗಳನ್ನು ತೆರವುಗೊಳಿಸಿ ಹೊಸ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುವುದು ಈಗ ಯೋಜಿತವಾಗಿದೆ.

ಗಾಂಧಿ ಮಾರುಕಟ್ಟೆ ಅಂಗಡಿ ಮಳಿಗೆಗಳು ಶತಮಾನದ ಹಿಂದೆ ನಿರ್ಮಾಣವಾಗಿದ್ದು, ಈಗ ಶಿಥಿಲವಾಗಿವೆ. ಈಗ ಇರುವ ಅಂಗಡಿಕಾರರಿಗೆ ನೂತನ ವಾಣಿಜ್ಯ ಸಂಕೀರ್ಣದಲ್ಲಿ ಆದ್ಯತೆ ಮೇಲೆ ಮಳಿಗೆಗಳನ್ನು ನೀಡಲಾಗುವುದು. ಎಲ್ಲರ ಸಹಕಾರದಿಂದ ನಗರದ ಮುಖ್ಯ ಪ್ರದೇಶದಲ್ಲಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ ನಿರ್ಮಿಸುವ ಮೂಲಕ ಎಲ್ಲರಿಗೂ ಅನುಕೂಲ ಕಲ್ಪಿಸಲು ಉದ್ದೇಶಿಸಲಾಗಿದೆ.
ರೂಪಾಲಿ ನಾಯ್ಕ, ಶಾಸಕಿ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.