ಹಸಿ ಅಡಕೆ ಕೊಯ್ಲಿಗೆ ಯೋಜನೆ


Team Udayavani, Dec 22, 2019, 3:37 PM IST

uk-tdy-1

ಶಿರಸಿ: ರೈತಸ್ನೇಹಿ ಯೋಜನೆಗಳಿಂದ ಸಹಕಾರಿ ವಲಯದಲ್ಲಿ ಈಗಾಗಲೇ ಗುರುತಿಸಿಕೊಂಡಿರುವ ಶಿರಸಿ ಹೆಗಡೆಕಟ್ಟಾ ಸೇವಾ ಸಹಕಾರಿ ಸಂಘವು ತನ್ನ ಸದಸ್ಯರಿಗಾಗಿ ರೈತರ ಅಡಕೆ ಬೆಳೆ ಕೊಯ್ದು, ಹಸಿ ಅಡಕೆ ವಿಕ್ರಯಿಸುವ ಹೊಸ ಯೋಜನೆ ಜಾರಿಗೆ ತರುವ ಮೂಲಕ ಗಮನಸೆಳೆದಿದೆ.

ಕೃಷಿ ಕೂಲಿ ಸಮಸ್ಯೆ, ರೈತ ಕುಟುಂಬದಲ್ಲಿ ದುಡಿಯುವ ಕೈಗಳ ಕೊರತೆಯಿಂದಾಗಿ ಇಂದು ಹಲವು ಕುಟುಂಬಗಳಿಗೆ ತಾವು ಬೆಳೆದ ಬೆಳೆ ಕಟಾವು ಮಾಡುವುದು ಸಮಸ್ಯೆಯಾಗಿದೆ. ಡಿಸೆಂಬರ ತಿಂಗಳೆಂದರೆ ಎಲ್ಲ ಕಡೆ ಒಂದೇ ಸಮಯಕ್ಕೆ ಕೊನೆ ಕೊಯ್ಲು ಆರಂಭವಾಗುವುದರಿಂದ ಕೊನೆ ಗೌಡರಿಂದ ಹಿಡಿದು, ಕೃಷಿ ಕಾರ್ಮಿಕರ ಕೊರತೆ ಉಂಟಾಗುತ್ತದೆ. ಸರಿಯಾದ ಸಮಯಕ್ಕೆ ಕೊಯ್ಲು ಸಹ ಆಗದಂತಾಗುತ್ತದೆ. ಇದು ಅಡಕೆ ಬೆಳೆಗಾರರ ಸರ್ವೇ ಸಾಮಾನ್ಯ ಸಮಸ್ಯೆಯಾಗಿದ್ದು ಈ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಹೆಗಡೆಕಟ್ಟಾ ಸೇವಾ ಸಹಕಾರಿ ಸಂಘವು ತನ್ನ ಸದಸ್ಯರಿಗಾಗಿ ಈ ಯೋಜನೆ ರೂಪಿಸಿದೆ.

ಚಿಕ್ಕ ಹಿಡುವಳಿದಾರರಿಂದ ಹಿಡಿದು ಮಧ್ಯಮ, ದೊಡ್ಡ ಬೆಳೆಗಾರರಾದ ಸಂಘದ ಎಲ್ಲ ಸದಸ್ಯ ರೈತರಿಗಾಗಿ ಸಂಘವು ಈ ಪ್ರಮುಖವಾದ ಯೋಜನೆ ಪ್ರಸಕ್ತ ವರ್ಷದಿಂದ ಜಾರಿಯಲ್ಲಿ ತಂದಿದೆ. ಕಳೆದ ವರ್ಷವಷ್ಟೇ ಗ್ರಾಮೀಣ ಭಾಗದಲ್ಲಿ ಹಸಿ ಅಡಕೆ ಟೆಂಡರ್‌ ಪ್ರಕ್ರಿಯೆ ಆರಂಭಿಸಿದ ಸಂಘವು ಈ ವರ್ಷದಿಂದ ಈ ಯೋಜನೆ ರೈತರಿಗೆ ಅನುಕೂಲವಾಗಲಿದೆ ಎಂದು ಹೆಗಡೆಕಟ್ಟಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಪಿ ಹೆಗಡೆ ಕೊಟ್ಟೆಗದ್ದೆ ಅಭಿಪ್ರಾಯಪಟ್ಟಿದ್ದಾರೆ.

ಇದರಿಂದ ಕೃಷಿ ಕಾರ್ಮಿಕರಿಗೆ ಖಾಯಂ ಉದ್ಯೋಗ, ರೈತರ ದೃಷ್ಟಿಯಿಂದ ಅಡಕೆ ಕೊಯ್ಲು ಮತ್ತಷ್ಟು ಸುಲಭವಾಗಲಿದೆ ಎಂದು ಸಂಘದ ಕೃಷಿ ಸಲಹೆಗಾರ ಗುರುಮೂರ್ತಿ ಹೆಗಡೆ ತುಂಬೆಮನೆ ಹೇಳಿದ್ದಾರೆ. ಸಂಘವೇ ನಿರ್ಧರಿಸಿದ ದಿನದಂದು ಕೊನೆ ಗೌಡರು, ಕೃಷಿ ಕಾರ್ಮಿಕರನ್ನು ರೈತನ ತೋಟಕ್ಕೆ ಕಳುಹಿಸಿ ಕೊನೆಕೊಯ್ಲು ನಡೆಸಿಕೊಡುತ್ತದೆ. ಸಂಘದ ವಾಹನದ ಮೂಲಕ ಸಾಗಾಣಿಕೆ ಮಾಡಿ ಹಸಿ ಅಡಕೆ ಟೆಂಡರ ಪ್ರಕ್ರಿಯೆಯ ಮೂಲಕ ಪಾರದರ್ಶಕ ರೀತಿಯಲ್ಲಿ ಹಸಿ ಅಡಕೆ ಮಾರಾಟ ಕೂಡ ಮಾಡಿಸಿಕೊಡುತ್ತದೆ. ಇದರಿಂದ ರೈತನಿಗೆ ನಿರಾತಂಕವಾಗಿ ವರ್ಷದ ಕೆಲಸ ನಡೆಯುವುದಲ್ಲದೆ, ಅನಗತ್ಯ ಒತ್ತಡ ಕಡಿಮೆ ಮಾಡುತ್ತದೆ. ಪ್ರಸಕ್ತ ವರ್ಷ ಹೆಗಡೆಕಟ್ಟಾ ಹಸಿ ಅಡಕೆ ಟೆಂಡರಿನಲ್ಲಿ ಪ್ರತಿ ಕ್ವಿಂಟಲಿಗೆ 4350ರ ಗಡಿ ದಾಟಿ ಹಾಗೂ ಗೋಟು ಅಡಕೆ 4580 ರೂಪಾಯಿಗೂ ಹೆಚ್ಚಿನ ದರಕ್ಕೆ ಮಾರಾಟವಾಗಿ ಹೆಗಡೆಕಟ್ಟಾ ಭಾಗದ ರೈತರಲ್ಲಿ ಹರ್ಷ ಮೂಡಿಸಿದ್ದಷ್ಟೇ ಅಲ್ಲದೆ ನೂತನ ಕೊನೆಕೊಯ್ಯುವ ಯೋಜನೆ ಮತ್ತಷ್ಟು ಆಶಾಭಾವನೆ ಮೂಡಿಸಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.