ಹದವಾದ ಮಳೆ; ಕೃಷಿ ಕಾಯಕ ಚುರುಕು

ಕೊರೊನಾತಂಕದ ಮಧ್ಯೆ ಕೃಷಿ ಚಟುವಟಿಕೆ­ಭತ್ತ-ಗೋವಿನ ಜೋಳ ಬೀಜ ವಿತರಣೆ

Team Udayavani, May 24, 2021, 9:27 PM IST

23mnd1

ಮುನೇಶ ತಳವಾರ

ಮುಂಡಗೋಡ: ತಾಲೂಕಿನಲ್ಲಿ ಕೆಲ ದಿನಗಳ ಹಿಂದೆ ಬಿದ್ದ ಮಳೆಯಿಂದಾಗಿ ಬಿತ್ತನೆಗೆ ಭೂಮಿ ಉತ್ತಮ ಹದವಾಗಿದ್ದು ಕೊರೊನಾ ಭಯದ ನಡುವೆಯೂ ನೇಗಿಲಯೋಗಿಯ ಕಾಯಕ ಚುರುಕುಗೊಂಡಿದೆ.

ತಾಲೂಕಿನಲ್ಲಿ ಕೋವಿಡ್‌-19 ಸೋಂಕಿತರ ಸಂಖ್ಯೆ ಹೆಚ್ಚಾಗಿ ಈಗಾಗಲೇ ಪಟ್ಟಣ ಸೇರಿ 5 ಗ್ರಾಮವನ್ನು ಕಂಟೈನ್ಮೆಂಟ್‌ ವಲಯ ಎಂದು ಜಿಲ್ಲಾಡಳಿತ ಘೋಷಿಸಿದ್ದರೂ ಕೃಷಿ ಚಟುವಟಿಕೆ ತೊಂದರೆ ಆಗದಂತೆ ರೈತರಿಗೆ ಉಳುಮೆ ಮಾಡಲು ಸಮಯವನ್ನು ನಿಗದಿ ಮಾಡಿದೆ. ವಾಸ್ತವವಾಗಿ ಗ್ರಾಮೀಣ ಭಾಗದಲ್ಲಿಯೇ ಸೋಂಕಿತರ ಪ್ರಮಾಣ ಹೆಚ್ಚಾಗಿದ್ದರೂ ಇದನ್ನು ಲೆಕ್ಕಸದೇ ಅನ್ನದಾತ ಕೃಷಿ ಚಟುವಟಿಕೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾನೆ.

ಕೃಷಿ ಇಲಾಖೆಯ ವತಿಯಿಂದ ತಾಲೂಕಿನಲ್ಲಿ ಮುಂಗಾರು ಹಂಗಾಮಿಗಾಗಿ ಪ್ರಮುಖ ಬೆಳೆಯಾದ ಭತ್ತ ಹಾಗೂ ಗೋವಿನ ಜೋಳ ಬೀಜವನ್ನು ಸಹಾಯಧನದಲ್ಲಿ ಮುಂಡಗೋಡ ಹಾಗೂ ಪಾಳಾ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ವಿತರಿಸುತ್ತಿದ್ದಾರೆ. ಕಳೆದ ವರ್ಷ ಕೈಕೊಟ್ಟಿದ್ದ ಜೋಳ: ಕಾತೂರು ಗ್ರಾಪಂ ವ್ಯಾಪ್ತಿಯ ಕೆಲ ಗ್ರಾಮದ ರೈತರು ಲೋಕಲ್‌ ಭತ್ತದ ತಳಿಯ ಒಣ ಬಿತ್ತನೆ ಮಾಡಿದರೆ, ಇನ್ನು ಕೆಲವು ರೈತರು ಮಳೆಯ ಹದ ಕಾಯ್ದು ಈಗ ತಾನೇ ಬಿತ್ತನೆ ಕಾರ್ಯಕ್ಕೆ ಭೂಮಿಯನ್ನು ಹದ ಮಾಡುತ್ತಿದ್ದಾರೆ. ಕೆಲವರು ಟ್ರ್ಯಾಕ್ಟರ್‌ ಬಳಸಿ ಉಳುಮೆ ಮಾಡಿದರೆ ಇನ್ನು ಕೆಲ ರೈತರು ಎತ್ತುಗಳನ್ನು ಸಂಗಾತಿಯಾಗಿ ಬಳಸಿ ಭೂಮಿ ಹದವನ್ನು ಮುಗಿಸಿದ್ದಾರೆ.

ಕಳೆದ ಬಾರಿ ಗೋವಿನ ಜೋಳದ ಬೆಳೆಯು ಇಳುವರಿ ಹೆಚ್ಚಿದ್ದರೂ ಸರಿಯಾದ ಬೆಲೆ ಇಲ್ಲದೆ ರೈತರು ನಷ್ಟ ಅನುಭವಿಸಿದ್ದರು. ಈ ಬಾರಿ ಮಳೆಯ ಭರವಸೆಯ ಮೇಲೆ ಭೂಮಿ ಹದವನ್ನು ಮಾಡಿದ್ದೇವೆ ಕಾದು ನೋಡಬೇಕು ಎಂಬ ಮಾತು ತಾಲೂಕಿನ ರೈತರಿಂದ ಕೇಳಿ ಬರುತ್ತಿದೆ. ಪ್ರಸಕ್ತ ವರ್ಷ ತಾಲೂಕಿನಲ್ಲಿ 6500 ಹೆಕ್ಟೆರ್‌ ಪ್ರದೇಶದಲ್ಲಿ ಭತ್ತ ಬಿತ್ತನೆ, 5000 ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನ ಜೋಳದ ಬೆಳೆ, 50 ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬಿತ್ತನೆ ಗುರಿಯನ್ನು ಕೃಷಿ ಇಲಾಖೆ ಹೊಂದಿದೆ. 500 ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬು ಬಿತ್ತನೆ ಕಾರ್ಯ ಈಗಾಗಲೇ ಮಾಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.