ಕೃಷಿ ಯಾಂತ್ರೀಕರಣ ಸಹಾಯಧನ ಹೆಚ್ಚಳ: ರೆಡ್ಡಿ


Team Udayavani, Jun 19, 2019, 11:19 AM IST

uk-tdy-1..

ಶಿರಸಿ: ಕೃಷಿಕರಿಗೆ ನೀಡಲಾಗುವ ಯಾಂತ್ರೀಕರಣ ಸಹಾಯಧನದ ಮಿತಿಯನ್ನು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಕೃಷಿ ಸಚಿವ ಎನ್‌.ಎಚ್. ಶಿವಶಂಕರ ರೆಡ್ಡಿ ಹೇಳಿದರು.

ಅವರು ಶಿರಸಿಯಲ್ಲಿ ಕೃಷಿಕರ ಜೊತೆ ಸಂವಾದ ನಡೆಸಿ, ಈಗಾಗಲೇ ಶೇ.50 ರಷ್ಟು ಸಹಾಯಧನವನ್ನು ಸಾಮಾನ್ಯ ವರ್ಗದ ಕೃಷಿಕರಿಗೆ ಹಾಗೂ ವಿಶೇಷ ಘಟಕದ ಅಡಿಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.90ರಷ್ಟು ಸಹಾಯಧನದಲ್ಲಿ ಟ್ರ್ಯಾಕ್ಟರ್‌, ಟಿಲ್ಲರ್‌, ಭತ್ತದ ನಾಟಿ ಯಂತ್ರಗಳು, ನೀರಾವರಿ ಉಪಕರಣಗಳನ್ನು ಒದಗಿಸಲಾಗುತ್ತಿತ್ತು. ಆದರೆ, ಸಾಮಾನ್ಯ ವರ್ಗದ ರೈತರೂ ಬಡವರಿದ್ದು, ಅವರಿಗೂ ಹೆಚ್ಚಿನ ಸಹಾಯಧನದಲ್ಲಿ ಕೃಷಿ ಉಪಕರಣ ಒದಗಿಸಬೇಕು ಎಂಬ ಬೇಡಿಕೆಗೆ ಸರಕಾರ ಸ್ಪಂದಿಸಿದೆ ಎಂದರು.

ಸಾಮಾನ್ಯ ವರ್ಗದ ರೈತರಿಗೂ ಶೇ.75ರ ಸಹಾಯಧನದಲ್ಲಿ ಯಂತ್ರೋ ಪಕರಣಗಳನ್ನು ಪ್ರಸಕ್ತ ಹಂಗಾಮಿನಲ್ಲೇ ಒದಗಿಸಲಾಗುತ್ತದೆ. ಈಗಾಗಲೇ ಆರ್ಥಿಕ ಇಲಾಖೆ ಅನುಮತಿಗೆ ಪ್ರಸ್ತಾವನೆ ಹೋಗಿದ್ದು, ಶೀಘ್ರ ಅನುಮತಿ ಸಿಗುವ ನಿರೀಕ್ಷೆ ಇದೆ. ಉತ್ತರ ಕನ್ನಡದಂತಹ ದೊಡ್ಡ ಜಿಲ್ಲೆಗಳಲ್ಲಿರುವ ಹೆಚ್ಚುವರಿ ಯಾಂತ್ರೀಕರಣಕ್ಕೆ ಅಗತ್ಯವಾದ ಬೇಡಿಕೆಗೂ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದೂ ಹೇಳಿದರು.

ಸಹಕಾರಿ ಸಂಘಗಳಿಗೂ: ಯಾಂತ್ರೀಕರಣಗಳನ್ನು ಬಾಡಿಗೆ ಆಧಾರಿತವಾಗಿ ಕೃಷಿ ಯಂತ್ರಧಾರಾ ಯೋಜನೆ ಹಾಗೂ ವೈಯಕ್ತಿಕವಾಗಿ ಮಾತ್ರ ಸಹಾಯಧನದ ಮಾದರಿಯಲ್ಲಿ ಒದಗಿಸಲಾಗುತ್ತಿತ್ತು. ಆದರೆ, ಇನ್ನುಮುಂದೆ ಸ್ಥಳೀಯ ಸಹಕಾರಿ ಸಂಘಗಳು, ಸ್ವಸಹಾಯ ಸಂಘಗಳು ಅರ್ಜಿ ಹಾಕಿದರೂ ಅವುಗಳಿಗೂ ಲಭ್ಯವಾಗುವ ಆದೇಶ ಮಾಡಲಾಗುತ್ತದೆ ಎಂದೂ ಸ್ಪಷ್ಟಪಡಿಸಿದರು.

ಸಹಕಾರಿ ಸಂಸ್ಥೆಗಳಿಗೇ ಯಾಂತ್ರೀಕರಣ ಒದಗಿಸಿದರೆ ಅವರು ಬಾಡಿಗೆ ಆಧಾರದಲ್ಲಿ ಸಹಕಾರಿಗಳಿಗೆ ನೀಡುವ ಮೂಲಕ ನಿರ್ವಹಣೆ ಮಾಡಲು ಅನುಕೂಲವಾಗಲಿದೆ. ಆಯಾ ಕ್ಷೇತ್ರದ ರೈತರಿಗೆ ಅಗತ್ಯವಾದ ಯಾಂತ್ರೀಕರಣ ಕೂಡ ಸುಲಭದಲ್ಲಿ ಒದಗಿಸಲು ಸಾಧ್ಯವಾಗಲಿದೆ ಎಂದೂ ಹೇಳಿದರು.

ಒಕ್ಕೂಟಕ್ಕೆ ಚಿಂತನೆ: ಕರ್ನಾಟಕದಲ್ಲಿ ಪ್ರಾಂತೀಯ ಸಾವಯವ ಒಕ್ಕೂಟಗಳನ್ನು ಪ್ರತಿ ಜಿಲ್ಲೆಗಳಲ್ಲೂ ಮಾಡಲಾಗಿದ್ದು, ಅವು ಚೆನ್ನಾಗಿ ಕೆಲಸ ಮಾಡುತ್ತಿವೆ. ಅವು ಅವರದ್ದೇ ಆದ ಬ್ರಾಂಡ್‌ನ‌ಲ್ಲಿ ಮಾರುಕಟ್ಟೆ ಮಾಡುತ್ತಿವೆ. ಕೃಷಿ ಇಲಾಖೆ ಹೆಬ್ಟಾಳದಲ್ಲಿ ಇಡೀ ರಾಜ್ಯಮಟ್ಟದ ಸಾವಯವ ಉತ್ಪನ್ನಗಳ ಒಕ್ಕೂಟ ರಚನೆ ಮಾಡಿ, ಒಂದೇ ಬ್ರಾಂಡಿನಲ್ಲಿ ಉತ್ಪನ್ನಗಳನ್ನು ಮಾರುಕಟ್ಟೆ ಮಾಡಲಿದ್ದೇವೆ ಎಂದೂ ಹೇಳಿದರು.

ಕಾರಾವಳಿ ಭಾಗದಲ್ಲಿ ಭತ್ತದ ಬೇಸಾಯಗಾರರಿಗೆ ಉತ್ತೇಜನ ನೀಡಲು ಹೆಕ್ಟೇರ್‌ಗೆ 7500 ರೂ. ನೀಡುವ ಕರಾವಳಿ ಪ್ಯಾಕೇಜ್‌ ಘೋಷಿಸಿದ್ದೇವೆ. ಆದರೆ, ಅದರಲ್ಲಿ ಮಲೆನಾಡು ಬಯಲು ಸೀಮೆ ಸೇರಿಲ್ಲ. ಅಂಥ ರೈತರಿಗೂ ನೆರವಾಗಲು ಯೋಜಿಸುತ್ತೇವೆ ಎಂದೂ ಭರವಸೆ ನೀಡಿದರು. ಕೃಷಿ ಇಲಾಖೆ ಆಯುಕ್ತ ಶ್ರೀನಿವಾಸ, ಡಿಡಿ ಹೊನ್ನಪ್ಪ ಗೌಡ ಇತರರು ಇದ್ದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.