![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕೃಷಿಯೇ ನಮಗೆ ದೇವರು: ಸ್ವರ್ಣವಲ್ಲೀ ಶ್ರೀ
•ಕೃಷಿ ಜಯಂತಿ ಸಂಪನ್ನ•ಕೃಷಿ-ತೋಟಗಾರಿಕೆ ವಿಷಯಗಳು ಪ್ರೌಢಶಾಲೆ ಮಕ್ಕಳಿಗೆ ಪಠ್ಯಕ್ರಮವಾಗಲಿ
Team Udayavani, May 18, 2019, 2:45 PM IST
![uk-tdy-2..](https://www.udayavani.com/wp-content/uploads/2019/05/uk-tdy-2..-5-620x247.jpg)
ಶಿರಸಿ:ಸ್ವರ್ಣವಲ್ಲೀ ಮಠಾಧೀಶ ಶ್ರೀಗಂಗಾಧೀರೇಂದ್ರ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಿದರು.
ಶಿರಸಿ: ಕೃಷಿಯೇ ನಮಗೆ ದೇವರು. ದೇವರ ದರ್ಶನಕ್ಕೂ ಭಕ್ತಿಯ ಕೃಷಿ ಅಗತ್ಯ ಎಂದು ಸೋಂದಾ ಸ್ವರ್ಣವಲ್ಲೀ ಮಠಾಧೀಶ ಗಂಗಾಧರೇಂದ್ರ ಸರಸ್ವತೀ ಆಶಿಸಿದರು.
ಶುಕ್ರವಾರ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಕೃಷಿ ಪ್ರತಿಷ್ಠಾನ ಹಮ್ಮಿಕೊಂಡ ಕೃಷಿ ಜಯಂತಿ ಸಮಾರೋಪದ ಸಾನ್ನಿಧ್ಯ ವಹಿಸಿ ಆಶೀರ್ವಚನ ನುಡಿದರು. ಭಗವಂತನ ದರ್ಶನಕ್ಕೆ ಕೃಷಿ ಮಾಡಬೇಕು. ಆಗ ದೇವರ ದರ್ಶನ ಸಾಧ್ಯ. ಲಕ್ಷ್ಮೀ ನೃಸಿಂಹ ಕೂಡ ಬರುತ್ತಾನೆ. ಕೃಷಿಗೂ ಅದೇ ತಪಸ್ಸು ಬೇಕು ಎಂದು ವಿಶ್ಲೇಷಿಸಿದರು.
ಕೃಷಿ ಹಾಗೂ ತೋಟಗಾರಿಕೆ ವಿಷಯವನ್ನು ಪ್ರೌಢಶಾಲೆಯಲ್ಲಿ ಪಾಠ ಮಾಡಿ ಮಕ್ಕಳಿಗೆ ಅಭಿರುಚಿಗೊಳಿಸಬೇಕು. ಅಧಿಕೃತ ರೂಪ ಬರಲು ಪಠ್ಯವಾಗಬೇಕು. ಆಗ ಯುವಕರು ಒಪ್ಪಿಕೊಳ್ಳಲು ಸಾಧ್ಯ. ಕಾನೂನು, ಪಠ್ಯ ಆದರೆ ಅದು ಅಧಿಕೃತವಾಗುತ್ತದೆ. ಪ್ರಾಯೋಗಿಕ ಭಾಗವಾಗಿ ಇಡಬೇಕು ಎಂದರು.
ನೃಸಿಂಹ ಜಯಂತಿ ಎಂದರೆ ಭಗವಂತ ಅವತಾರ ಎತ್ತಿದ ದಿನ. ಪ್ರಹ್ಲಾದ ಎಂಬ ಹುಡುಗನಿಗೋಸ್ಕರ ಕಂಬದಿಂದ ಎದ್ದು ಬಂದ. ವೈರಿಯ ಮಗನಿಗೆ ಎದ್ದು ಬಂದ. ಒಂದೇ ಕಾರಣಕ್ಕೆ ಭಗವಂತ ಅವತಾರ ಎತ್ತಿದ. ಪ್ರಹ್ಲಾದ ಅವನು ಭಕ್ತ ಶ್ರೇಷ್ಠನಾಗಿದ್ದನು ಎಂದ ಶ್ರೀಗಳು, ಪ್ರಹ್ಲಾದನಿಗೆ ಭಕ್ತಿ ಎಂದರೆ ಪ್ರೀತಿ. ಭಕ್ತ ಶ್ರೇಷ್ಠ ಆಗಿದ್ದರಿಂದಲೇ ಅವತಾರ ಎತ್ತಿ ಬಂದ. ಭಗವಂತ ಅವತಾರ ಎತ್ತಲು ಇಂಥದ್ದೊಂದು ಆಕಾರ ಇಲ್ಲ. ಮನುಷ್ಯನೂ ಪ್ರಾಣಿಯೂ ಅಲ್ಲದಂತೆಯೂ ಅವತಾರ ಎತ್ತಿದ್ದ ಎಂದರು.
ಕ್ಯಾಂಮ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಕೃಷಿ ತಜ್ಞ ಶಂಕರ ಬದನಾಜೆ, ಮಠದ ಅಧ್ಯಕ್ಷ ವಿಘ್ನೕಶ್ವರ ಹೆಗಡೆ ಬೊಮ್ಮನಳ್ಳಿ, ಗ್ರಾಮಾಭ್ಯುದಯದ ಅಧ್ಯಕ್ಷ ಶಿವಾನಂದ ದೀಕ್ಷಿತ ಇತರರು ಇದ್ದರು.
ವಿ.ಜಿ. ಹೆಗಡೆ ಗೊಡವೆಮನೆ ಫಲ ಸಮರ್ಪಿಸಿದರು. ಆರ್.ಎನ್. ಹೆಗಡೆ ಉಳ್ಳಿಕೊಪ್ಪ ಸ್ವಾಗತಿಸಿದರು. ಜಿ.ವಿ. ಹೆಗಡೆ ಹುಳಗೋಳ ನಿರ್ಣಯ ಮಂಡಿಸಿದರು. ಸುರೇಶ್ ಹಕ್ಕಿಮನೆ ನಿರ್ವಹಿಸಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.