ಲೋಕ ಸಮರದ ಮತ ಎಣಿಕೆಗೆ ಸಕಲ ಸಜ್ಜು
ಕೇಂದ್ರದ ಸುತ್ತ ನಿಷೇಧಾಜ್ಞೆ•4 ಹಂತದಲ್ಲಿ ಭದ್ರತೆ•ಫಲಿತಾಂಶಕ್ಕೆ ಕಾದಿರುವ 13 ಅಭ್ಯರ್ಥಿಗಳು
Team Udayavani, May 22, 2019, 10:55 AM IST
ಕಾರವಾರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಏ.23ರಂದು ಉತ್ತರ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಮತದಾನ ನಡೆದು, ಒಂದು ತಿಂಗಳ ಅಂತರದಲ್ಲಿ ಮೇ 23ರಂದು ಜಿಲ್ಲೆಯ ಕುಮಾಟಾದ ಡಾ| ಎ.ವಿ. ಬಾಳಿಗಾ ಕಾಲೇಜಿನಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಮತದಾರರು ಯಾವ ಪಕ್ಷದ ಅಭ್ಯರ್ಥಿ ಗೆಲ್ಲಬಹುದು ಎಂಬ ಕುತೂಹಲದಲ್ಲಿದ್ದರೆ, ಅಭ್ಯರ್ಥಿಗಳು ನಮಗೆ ಎಷ್ಟು ಮತಗಳು ಬರಬಹುದು ಎಂಬ ಕಾತುರತೆಯಲ್ಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ನಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು ಈ ಸಲದ ಫಲಿತಾಂಶವನ್ನು ಪ್ರತಿಷ್ಠೆಯಾಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಚುನಾವಣಾ ಕಣಕ್ಕೆ ಇಳಿಯದೇ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿತ್ತು.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ಜಿಲ್ಲೆಯ ಹಳಿಯಾಳ (ಶೇ.73.43), ಕಾರವಾರ (ಶೇ.72.28), ಕುಮಟಾ (ಶೇ.77.12), ಭಟ್ಕಳ(71.79), ಶಿರಸಿ(ಶೇ.78.38), ಯಲ್ಲಾಪುರ (ಶೇ.77.75) ಹಾಗೂ ಬೆಳಗಾವಿ ಜಿಲ್ಲೆಯ ಖಾನಾಪುರ (ಶೇ.70.68) ಹಾಗೂ ಕಿತ್ತೂರು (ಶೇ.72.33) ಕ್ಷೇತ್ರಗಳು ಈ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿವೆ. ಒಟ್ಟು 15,52,134 ಮತದಾರರಿದ್ದು 11,49,609 ಮತದಾರರು ಮತ ಚಲಾಯಿಸಿದ್ದಾರೆ. ಶೇ.74.07ರಷ್ಟು ಮತದಾನವಾಗಿತ್ತು.
ರಾಷ್ಟ್ರೀಯ ಮತ್ತು ರಾಜ್ಯ ಪಕ್ಷಗಳಾದ ಬಿಜೆಪಿಯ ಅನಂತಕುಮಾರ್ ಹೆಗಡೆ, ಜೆಡಿಎಸ್ನ ಆನಂದ್ ಅಸ್ನೋಟಿಕರ್, ಬಹುಜನ ಸಮಾಜ ಪಕ್ಷದ ಸುಧಾಕರ ಕೀರ ಜೋಗಳೇಕರ್, ನೋಂದಾಯಿತ ರಾಜಕೀಯ ಪಕ್ಷಗಳಾದ ರಾಷ್ಟ್ರೀಯ ಸಮಾಜ ಪಕ್ಷದ ನಾಗರಾಜ ನಾಯ್ಕ, ರಾಷ್ಟ್ರೀಯ ಜನಸಂಭಾವನ ಪಕ್ಷದ ನಾಗರಾಜ್ ಶೇಟ್, ಭಾರತ ಭೂಮಿ ಪಕ್ಷದ ಮಂಜುನಾಥ ಸದಾಶಿವ, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್, ಪಕ್ಷೇತರ ಅಭ್ಯರ್ಥಿಗಳಾದ ಅನಿತಾ ಶೇಟ್, ಕುಂದಬಾಯಿ ಗಣಪತಿ ಪುರಲೇಕರ್, ಚಿದಾನಂದ ಹರಿಜನ, ನಾಗರಾಜ್ ಅನಂತ್ ಶಿರಾಲಿ, ಬಾಲಕೃಷ್ಣ ಪಾಟೀಲ್, ಮೊಹಮದ್ ಝಬರೂದ್ ಖತೀಬ್ ಸೇರಿ ಒಟ್ಟು 13 ಅಭ್ಯರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ