ಲೋಕ ಸಮರದ ಮತ ಎಣಿಕೆಗೆ ಸಕಲ ಸಜ್ಜು

ಕೇಂದ್ರದ ಸುತ್ತ ನಿಷೇಧಾಜ್ಞೆ•4 ಹಂತದಲ್ಲಿ ಭದ್ರತೆ•ಫಲಿತಾಂಶಕ್ಕೆ ಕಾದಿರುವ 13 ಅಭ್ಯರ್ಥಿಗಳು

Team Udayavani, May 22, 2019, 10:55 AM IST

uk-tdy-1..

ಕಾರವಾರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಏ.23ರಂದು ಉತ್ತರ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಮತದಾನ ನಡೆದು, ಒಂದು ತಿಂಗಳ ಅಂತರದಲ್ಲಿ ಮೇ 23ರಂದು ಜಿಲ್ಲೆಯ ಕುಮಾಟಾದ ಡಾ| ಎ.ವಿ. ಬಾಳಿಗಾ ಕಾಲೇಜಿನಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮತದಾರರು ಯಾವ ಪಕ್ಷದ ಅಭ್ಯರ್ಥಿ ಗೆಲ್ಲಬಹುದು ಎಂಬ ಕುತೂಹಲದಲ್ಲಿದ್ದರೆ, ಅಭ್ಯರ್ಥಿಗಳು ನಮಗೆ ಎಷ್ಟು ಮತಗಳು ಬರಬಹುದು ಎಂಬ ಕಾತುರತೆಯಲ್ಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ನಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು ಈ ಸಲದ ಫಲಿತಾಂಶವನ್ನು ಪ್ರತಿಷ್ಠೆಯಾಗಿಸಿಕೊಂಡಿದ್ದಾರೆ. ಕಾಂಗ್ರೆಸ್‌ ಚುನಾವಣಾ ಕಣಕ್ಕೆ ಇಳಿಯದೇ ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ ನೀಡಿತ್ತು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ಜಿಲ್ಲೆಯ ಹಳಿಯಾಳ (ಶೇ.73.43), ಕಾರವಾರ (ಶೇ.72.28), ಕುಮಟಾ (ಶೇ.77.12), ಭಟ್ಕಳ(71.79), ಶಿರಸಿ(ಶೇ.78.38), ಯಲ್ಲಾಪುರ (ಶೇ.77.75) ಹಾಗೂ ಬೆಳಗಾವಿ ಜಿಲ್ಲೆಯ ಖಾನಾಪುರ (ಶೇ.70.68) ಹಾಗೂ ಕಿತ್ತೂರು (ಶೇ.72.33) ಕ್ಷೇತ್ರಗಳು ಈ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿವೆ. ಒಟ್ಟು 15,52,134 ಮತದಾರರಿದ್ದು 11,49,609 ಮತದಾರರು ಮತ ಚಲಾಯಿಸಿದ್ದಾರೆ. ಶೇ.74.07ರಷ್ಟು ಮತದಾನವಾಗಿತ್ತು.

ರಾಷ್ಟ್ರೀಯ ಮತ್ತು ರಾಜ್ಯ ಪಕ್ಷಗಳಾದ ಬಿಜೆಪಿಯ ಅನಂತಕುಮಾರ್‌ ಹೆಗಡೆ, ಜೆಡಿಎಸ್‌ನ ಆನಂದ್‌ ಅಸ್ನೋಟಿಕರ್‌, ಬಹುಜನ ಸಮಾಜ ಪಕ್ಷದ‌ ಸುಧಾಕರ ಕೀರ ಜೋಗಳೇಕರ್‌, ನೋಂದಾಯಿತ ರಾಜಕೀಯ ಪಕ್ಷಗಳಾದ ರಾಷ್ಟ್ರೀಯ ಸಮಾಜ ಪಕ್ಷದ ನಾಗರಾಜ ನಾಯ್ಕ, ರಾಷ್ಟ್ರೀಯ ಜನಸಂಭಾವನ ಪಕ್ಷದ ನಾಗರಾಜ್‌ ಶೇಟ್, ಭಾರತ ಭೂಮಿ ಪಕ್ಷದ ಮಂಜುನಾಥ ಸದಾಶಿವ, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್‌, ಪಕ್ಷೇತರ ಅಭ್ಯರ್ಥಿಗಳಾದ ಅನಿತಾ ಶೇಟ್, ಕುಂದಬಾಯಿ ಗಣಪತಿ ಪುರಲೇಕರ್‌, ಚಿದಾನಂದ ಹರಿಜನ, ನಾಗರಾಜ್‌ ಅನಂತ್‌ ಶಿರಾಲಿ, ಬಾಲಕೃಷ್ಣ ಪಾಟೀಲ್, ಮೊಹಮದ್‌ ಝಬರೂದ್‌ ಖತೀಬ್‌ ಸೇರಿ ಒಟ್ಟು 13 ಅಭ್ಯರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ.

ಅಧಿಕೃತ ಪ್ರವೇಶ ಪತ್ರ ಕಡ್ಡಾಯ:

ಮತ ಎಣಿಕೆ ಕೇಂದ್ರದ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ ಮತ ಎಣಿಕೆ ಕೇಂದ್ರದಲ್ಲಿ ನಾಲ್ಕು ಹಂತದ ತೀವ್ರ ಭದ್ರತೆ ಇರಲಿದ್ದು, ಅಭ್ಯರ್ಥಿ ಮತ್ತು ರಾಜಕೀಯ ಪಕ್ಷಗಳ ಚುನಾವಣಾ ಏಜೆಂಟರು, ಮತ ಎಣಿಕೆ ಸಿಬ್ಬಂದಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಇವರೂ ಕೂಡ ಕಡ್ಡಾಯವಾಗಿ ಆಯೋಗದಿಂದ ನೀಡಲಾದ ಅಧಿಕೃತ ಪ್ರವೇಶ ಪತ್ರ ಹೊಂದಿರಬೇಕು. ರಾಜಕೀಯ ಪಕ್ಷಗಳ ಮುಖಂಡರಿಗೆ ಈಗಗಲೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತಿಳಿವಳಿಕೆ ನೀಡಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಯಾವುದೇ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದ್ದು ಅಧಿಕೃತ ವಾಹನಗಳು ಪೊಲೀಸ್‌ ಇಲಾಖೆಯಿಂದ ನೀಡುವ ಮಾರ್ಗದರ್ಶನದಂತೆ ಪ್ರವೇಶ ಪಡೆಯಬಹುದಾಗಿದೆ. ಉಳಿದಂತೆ ಹೆಗಡೆ ವೃತ್ತದವರೆಗೆ ಮಾತ್ರ ಪ್ರವೇಶವಿರುತ್ತದೆ. ಪೊಲೀಸ್‌ ಇಲಾಖೆ ನಿಯಮಗಳನ್ನು ಯಾರೂ ಉಲ್ಲಂಘನೆ ಮಾಡದಂತೆ ಹಾಗೂ ಕಡ್ಡಾಯವಾಗಿ ಇಲಾಖೆಯಿಂದ ನೀಡಿರುವ ಪಾಸ್‌ಗಳನ್ನು ಪ್ರದರ್ಶಿಸಬೇಕಿದೆ. ಭದ್ರತೆಗೆ ಜಿಲ್ಲಾ ಪೊಲೀಸ್‌ ಅಧಿಧೀಕ್ಷಕರು, ಹೆಚ್ಚುವರಿ ಜಿಲ್ಲಾ ಪೊಲೀಸ್‌ ಅಧಿಧೀಕ್ಷಕರು, 3 ಡಿವೈಎಸ್‌ಪಿ, 10 ಸಿಪಿಐ, 19 ಪಿಎಸ್‌ಐ, 29 ಎಎಸ್‌ಐ, 680 ಪೊಲೀಸ್‌ ಸಿಬ್ಬಂದಿ, 2 ಕೆಎಸ್‌ಆರ್‌ಪಿ, 6 ಡಿಎಆರ್‌, 3 ಸಿಎಪಿಎಫ್‌ ನಿಯೋಜಿಸಲಾಗಿದೆ.
ಮದ್ಯ ಮಾರಾಟಕ್ಕೂ ಬ್ರೇಕ್‌:

ಉತ್ತರ ಕನ್ನಡ ಕೋಮು ಸೂಕ್ಷ್ಮ ಜಿಲ್ಲೆಯಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಮೇ 22ರ ಮಧ್ಯರಾತ್ರಿಯಿಂದ 24ರ ಮಧ್ಯರಾತ್ರಿವರೆಗೆ 144 ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಜಿಲ್ಲಾದ್ಯಂತ ಮೇ23 ಬೆಳಗ್ಗೆ 6ರಿಂದ 24ರ ಬೆಳಗ್ಗೆ 6ರವರೆಗೆ ಮದ್ಯ ಮಾರಾಟ, ಮದ್ಯ ತಯಾರಿಕಾ ಘಟಕಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
ಜಂಗಮವಾಣಿಗೆ ನಿಷೇಧ:

ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮತ ಎಣಿಕೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ಹಾಗೂ ಮಾಧ್ಯಮ ಕೇಂದ್ರ ಪ್ರವೇಶಿಸುವ ಪತ್ರಕರ್ತರಿಗೆ ಮಾತ್ರ ಮೊಬೈಲ್ಗೆ ವಿನಾಯಿತಿ ಇರಲಿದೆ. ಮತ ಎಣಿಕೆ ಕೇಂದ್ರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಹಾಗೂ ಜಿಲ್ಲಾ ಪೊಲೀಸ್‌ ಅಧೀಕ್ಷಕ ವಿನಾಯಕ ಪಾಟೀಲ್ ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.