ಶೇ.40 ಕಮಿಷನ್‌ ಆರೋಪ ಬೇಸ್‌ಲೆಸ್‌

ಸುಳ್ಳು ಆರೋಪವಾಗಿದ್ದರಿಂದ ಕಾಂಗ್ರೆಸ್‌ ಅಧಿವೇಶನದಲ್ಲಿ ದಾಖಲೆ ಬಿಡುಗಡೆ ಮಾಡಿಲ್ಲ: ಪಾಟೀಲ್‌

Team Udayavani, Sep 29, 2022, 5:04 PM IST

17

ಶಿರಸಿ: ರಾಜ್ಯ ಸರಕಾರ ಶೇ.40ರಷ್ಟು ಕಮಿಷನ್‌ ಪಡೆಯುವ ಸರಕಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಆರೋಪ ಬೇಸ್‌ಲೆಸ್‌ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್‌ ಹೇಳಿದರು.

ಬುಧವಾರ ನಗರದ ಅಂಬೇಡ್ಕರ ಭವನದಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ನವರು ಕೇವಲ ರಾಜಕೀಯ ಉದ್ದೇಶದಿಂದ ಈ ಆರೋಪ ಮಾಡಿದ್ದು, ಇದರಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿಯೇ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಲಿ ಅಥವಾ ಒಂದೇ ಒಂದು ಪೂರಕ ದಾಖಲೆ ಬಿಡುಗಡೆ ಮಾಡಿಲ್ಲ ಎಂದರು.

ಬಿಜೆಪಿ ಸರಕಾರ ಶೇ.40 ಪ್ರತಿಶತ ಕಮಿಷನ್‌ ತೆಗೆದುಕೊಂಡಿದ್ದರೆ ದಾಖಲೆ ಬಿಡುಗಡೆ ಮಾಡಬೇಕಿತ್ತು. ಅಧಿವೇಶನದಲ್ಲಿ ಮಾತನಾಡಬೇಕಿತ್ತು. ಈ ವಿಚಾರ ಅಲ್ಲಿ ಎತ್ತೇ ಇಲ್ಲ. ಅಲ್ಲಿಗೆ ಈ ಆರೋಪ ನಿರಾಧಾರ ಎಂಬುದು ಎಲ್ಲರಿಗೂ ತಿಳಿದಂತಾಗಿದೆ. ಕಾಂಗ್ರೆಸ್‌ ಅರೋಪಕ್ಕೆ ಸರಕಾರ ಕೂಡ ದಾಖಲೆ ಸಹಿತ ಉತ್ತರಿಸಲು ನಾವು ಸಿದ್ಧರಾಗಿ ಕಾದಿದ್ದೆವು. ಆದರೆ ತಾವು ಹೇಳುತ್ತಿರುವುದು ಸುಳ್ಳು ಎಂಬುದು ಕಾಂಗ್ರೆಸ್‌ನವರಿಗೆ ಗೊತ್ತಿತ್ತು. ಹೀಗಾಗಿಯೇ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿಲ್ಲ ಎಂದರು.

ಕಾಮಗಾರಿ ಮುಗಿದೆಡೆ ಶೀಘ್ರ ಗುತ್ತಿಗೆದಾರರಿಗೆ ಹಣ ಪಾವತಿಸಲಾಗುವುದು. ಹಿಂದಿನ ಸರಕಾರ ಮಾಡಿದ ತಾಂತ್ರಿಕ ಕಾರಣದಿಂದ ಗುತ್ತಿಗೆದಾರರಿಗೆ ಹಣ ವಿಳಂಬ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ತಿಳಿಸಿ ಪೂರಕ ಅನುದಾನ ಪಡೆಯಲಾಗುವುದು. 200 ಕೋ.ರೂ. ಅನುದಾನ ಬೇಡಿಕೆ ಇಡಲಾಗಿದೆ ಎಂದರು.

ಏಳು ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಎಲ್ಲ ಕಡೆ ಒಳ್ಳೆಯ ಹೆಜ್ಜೆ ಗುರುತು ಇಟ್ಟು ಬಂದಿದ್ದೇನೆ. ಮುಂದೆ ಇಂದು ಶಿಲಾನ್ಯಾಸ ಮಾಡಿದ ಅನೇಕ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ ಸಚಿವರಾಗಿ ಕಾಗೇರಿ ಅವರು ಉದ್ಘಾಟನೆ ಮಾಡಲಿ ಎಂದು ಹಾರೈಸಿದರಲ್ಲದೇ ಕಾಗೇರಿ ಅವರು ಅನೇಕ ಕಾಮಗಾರಿಗಳ ಪ್ರಸ್ತಾಪ ಮುಂದಿಟ್ಟಿದ್ದಾರೆ. ಅದಕ್ಕೆ ತಕ್ಷಣ 25 ಕೋ.ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಹತ್ತು ಕೋಟಿ ರೂ. ಮೊತ್ತದಲ್ಲಿ ಮಾರಿಕಾಂಬಾ ಜಿಲ್ಲಾ ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿಗೆ ಶಿಲಾನ್ಯಾಸ, 9 ಕೋಟಿ ಮೊತ್ತದಲ್ಲಿ ಹತ್ತರಗಿ ಕ್ರಾಸ್‌ ನಿಂದ ಕುಮಟಾ ರಸ್ತೆ ತನಕ 5.5 ಕಿಮೀ ಕಾಮಗಾರಿಗೆ ಭೂಮಿ ಪೂಜೆ, ನಗರದ ಪಂಡಿತ್‌ ಆಸ್ಪತ್ರೆಯಿಂದ ಮಹಾಸತಿ ದೇಗುಲದ ವರೆಗಿನ 15 ಕೋಟಿ ರೂ. ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ರಸ್ತೆ ಅಗಲೀಕರಣದ ಬಳಿಕ ಅಂಡರ್‌ಗ್ರೌಂಡ್‌ ಕೇಬಲ್‌ ಕೂಡ ಆಗಬೇಕು. ಅದಕ್ಕೂ ಅನುದಾನ ಬೇಕು ಎಂದರು.

ಕಾಮಗಾರಿ ಮುಗಿದರೂ ಬಾಕಿ ಉಳಿದಿರುವ ಗುತ್ತಿಗೆದಾರರಿಗೆ ಅವರ ಮೊತ್ತ ಬಿಡುಗಡೆ ಮಾಡಿಸಲು ಪಾಟೀಲರಿಗೆ ಸೂಚಿಸಿದ್ದೇನೆ. ಗಣೇಶಪಾಲ್‌ ಬ್ರಿಡ್ಜ್ ಶಾಶ್ವತ ಕೆಲಸ ಆಗುತ್ತಿದೆ. ಬೈರುಂಬೆ ಬ್ರಿಡ್ಜ್ ನಿರ್ಮಾಣಕ್ಕೂ ಟೆಂಡರ್‌ ಆಗಿದೆ. ಫೈವ್‌ ಕ್ರಾಸ್‌ ಬಳಿ ಅಗಲೀಕರಣಕ್ಕೆ ಸುಮಾರು 185 ಜನ ಸ್ಥಳ ಕೊಟ್ಟಿದ್ದಾರೆ. 14 ಕೋಟಿ ರೂ. ಪರಿಹಾರ ಶೀಘ್ರ ಬಿಡುಗಡೆ ಆಗಲಿದೆ. ಎಲ್ಲೆಡೆ ಅಭಿವೃದ್ಧಿ ಆಗುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಕಿಂಚಿತ್ತೂ ರಾಜೀಯೇ ಇಲ್ಲ. ಅಭಿವೃದ್ಧಿಗೆ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಲಾಗುವುದು ಯಾವ ನಿರ್ಲಕ್ಷ್ಯ ಇಲ್ಲವೇ ಇಲ್ಲ ಎಂದರು.

ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ಎಪಿಎಂಸಿ ಅಧ್ಯಕ್ಷ ಪ್ರಶಾಂತ ಗೌಡ, ಹೆಗಡೆಕಟ್ಟಾ ಪಂಚಾಯ್ತಿ ಅಧ್ಯಕ್ಷೆ ವೀಣಾ ಭಟ್ಟ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ ಇತರರು ಇದ್ದರು.

ಪಿಎಫ್‌ ಐ ಸಂಘಟನೆ ನಿಷೇಧಿಸಲಾಗಿದೆ. ದೇಶದ್ರೋಹಿ ಹಾಗೂ ವಿಧ್ವಸಂಕ ಕೃತ್ಯಗಳ ವಿರುದ್ಧ ಸರಕಾರ ಬಿಗಿ ಕ್ರಮಕೈಗೊಂಡಿದೆ. ಶಾಂತಿಪ್ರಿಯ ಶಿರಸಿಗೂ ಈ ಕಳಂಕ ತಟ್ಟಿದ್ದು, ಇದನ್ನು ಹೋಗಲಾಡಿಸಬೇಕಾಗಿದೆ. –ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್‌

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.