ಅಮರ ಶಿಲ್ಪಿ ಜಕಣಾಚಾರಿ ಜಯಂತಿ
Team Udayavani, Jan 2, 2021, 2:58 PM IST
ಕಾರವಾರ: ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇದೇ ಪ್ರಥಮ ಬಾರಿಗೆ ಸರಕಾರಿ ಕಾರ್ಯಕ್ರಮವಾಗಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಜನ್ಮದಿನವನ್ನು ಶುಕ್ರವಾರ ಆಚರಿಸಲಾಯಿತು.
ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿ ಡಾ| ಕೆ. ಹರೀಶಕುಮಾರ್ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ದೀಪಬೆಳಗಿಸಿ ಮಾತನಾಡಿ, ಅಮರ ಶಿಲ್ಪಿ ಜಕಣಾಚಾರಿಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂನಮ್ಮನ್ನು ಬೆರಗುಗೊಳಿಸುತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಜಗತ್ತಿನ ಅದ್ಭುತ ಶಿಲ್ಪಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಬೆಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಮಾಡುವ ಕೆಸದ ಬಗ್ಗೆ ತಿಳಿವಳಿಕೆ, ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ. ಸಾಧಕರನ್ನು ಸ್ಮರಣೆ ಮಾಡಿದರಷ್ಟೇ ಸಾಲದು. ಅವರ ಗುಣ ಮತ್ತುಬೆಳೆದು ಬಂದ ಪರಿಶ್ರಮದ ಘಟನೆಗಳನ್ನ ತಿಳಿದು ಜೀವನದಲ್ಲಿ ಅಳವಡಿಸಿಕೊಳ್ಳುದು ಅತೀ ಮುಖ್ಯ ಎಂದರು.
ಅಮರ ಶಿಲ್ಪಿ ಜಕಣಾಚಾರಿ ಅವರನ್ನು ನಾವು ಇಂದು ನೆನೆಯುವ ಹಾಗೆ ಉತ್ತಮ ಜ್ಞಾನ ಮತ್ತು ಕಲಾತ್ಮಕ ಪ್ರವೃತ್ತಿ ರೂಢಿಸಿಕೊಂಡಿದ್ದೆ ಆದರೆ ಸಮಾಜ ನಮ್ಮನ್ನು ಸ್ಮರಿಸುವಂತಾಗುತ್ತದೆ ಎಂದುಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿಹೇಳಿದರು. ವಿವಿಧ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ