ಯರ್ರಾಬಿರ್ರಿ ವಾಹನ ನಿಲ್ಲಿಸಿದ್ರೆ ಬೀಳ್ತದೆ ಚಕ್ರಕ್ಕೆ ಬೀಗ


Team Udayavani, Mar 21, 2019, 11:48 AM IST

21-march-21.jpg

ಶಿರಸಿ: ನೋ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದರೂ ಇನ್ನೂ ನಿಮ್ಮ ವಾಹನಗಳ ಚಕ್ರಕ್ಕೇ ಚಕ್ರ ಬಿದ್ದೀತು. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ವಾಹನ ಪಾರ್ಕಿಂಗ್‌ ಮಾಡಿ ತೆರಳುವ ಸವಾರರಿಗೆ ಶಿಸ್ತಿನ ಪಾಠ ಹೇಳಿಕೊಡಲು ಪೊಲೀಸ್‌ ಇಲಾಖೆ ವ್ಹೀಲ್‌ ಲಾಕ್‌ ಮಾಡಲು ಮುಂದಾಗಿದೆ. ಈಗಾಗಲೇ ಹತ್ತಕ್ಕೂ ಹೆಚ್ಚು ವ್ಹೀಲ್‌ ಲಾಕ್‌ ಖರೀದಿಸಿ ಹೊಸ ಪಾಠ ಮಾಡಲು ಶುರುವಿಟ್ಟುಕೊಂಡಿದೆ.

ಶಿರಸಿಗೆ ಪ್ರತ್ಯೇಕ ಟ್ರಾಫಿಕ್‌ ಫೂಲೀಸ್‌ ಠಾಣೆ ನಿರ್ಮಿಸುವಂತೆ ಆಗ್ರಹ ಇದ್ದರೂ ಈಗ ಇರುವ ಸಿಬ್ಬಂದಿಗಳೆ ಈ ಸೂತ್ರಕ್ಕೆ ಬಂದಿದ್ದಾರೆ. ಮಹಾನಗರಗಳಲ್ಲಿ ಇದ್ದಂತೆ ಇಲ್ಲೂ ವೀಲ್‌ ಲಾಕ್‌ ಮಾಡಲು ಇಲಾಖೆ ಮುಂದಾಗಿದೆ. 67ಸಾವಿರಕ್ಕೂ ಅಧಿ ಕ ಜನಸಂಖ್ಯೆ ಇರುವ ಶಿರಸಿ ನಗರಕ್ಕೆ ಪ್ರತಿನಿತ್ಯ ಸಾವಿರಾರು ವಾಹನಗಳು ಬಂದು ತೆರಳುತ್ತವೆ. ಆ ನಿಟ್ಟಿನಲ್ಲಿ ದಿನವಿಡಿ ವಾಹನ ದಟ್ಟಣೆಯಿಂದ ಕೂಡಿರುವ ಶಿರಸಿಯಲ್ಲಿ ಟ್ರಾಫಿಕ್‌ ನಿರ್ವಹಣೆ ಮಾಡುವಂತೆ ಒತ್ತಡ ಹೇರಿದ್ದ ಜನಸಾಮಾನ್ಯರ ಬೇಡಿಕೆಯಂತೆ ಶಿರಸಿಯಲ್ಲಿ ಟ್ರಾಫಿಕ್‌ ಒತ್ತಡ ನಿರ್ವಹಣೆಗೆ ಪೊಲೀಸರು ಈ ಕ್ರಮ ಅನುಸರಿಸುತ್ತಿದ್ದಾರೆ.

ಬೈಕ್‌ಗಳ ಹೊರತಾಗಿ ಕಾರುಗಳ ಸಂಖ್ಯೆಯೂ ಬಹಳವೇ ಹೆಚ್ಚಿದೆ. ಇವೆಲ್ಲ ಕಾರಣದಿಂದ ನಗರದಲ್ಲಿ ದಿನೇದಿನೇ ಟ್ರಾಫಿಕ್‌ ಸಮಸ್ಯೆ ಮಿತಿಮೀರುತ್ತಿದೆ. ಅದರಲ್ಲೂ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದು, ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್‌ ಮಾಡುವುದು, ನೋ ಪಾರ್ಕಿಂಗ್‌ ಸ್ಥಳದಲ್ಲೂ ನಿಲ್ಲಿಸುವುದು ಹೆಚ್ಚುತ್ತಿದೆ. ಇದರಿಂದ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದರಿಂದ ಪೊಲೀಸ್‌ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದು ಹೀಗೆ ಬೇಕಾಬಿಟ್ಟಿಯಾಗಿ ಕಾರುಗಳನ್ನು ನಿಲ್ಲಿಸಿದರೆ ಅದಕ್ಕೆ ಲಾಕ್‌ ಹಾಕಲು ಮುಂದಾಗುತ್ತಿದ್ದೇವೆ ಎನ್ನುತ್ತಾರೆ ಸಿಪಿಐ ಗಿರೀಶ.

ಇಲ್ಲಿನ ನಟರಾಜ ರಸ್ತೆ, ದೇವಿಕೆರೆ, ಸಿಂಪಿಗಲ್ಲಿ, ಶಿವಾಜಿ ಚೌಕ, ಅಂಚೆ ವೃತ್ತ, ಸಿ.ಪಿ ಬಝಾರ್‌, ಹೊಸಪೇಟೆ ರಸ್ತೆ ಸೇರಿದಂತೆ ಹಲವೆಡೆಗಳಲ್ಲಿ ಕಿರಿದಾದ ರಸ್ತೆಗಳಿವೆ. ಹೆಚ್ಚು ವಾಹನ ದಟ್ಟಣೆಯಿಂದ ಕೂಡಿರುವ ರಸ್ತೆಗಳ ಅಂಚಿನಲ್ಲಿಯೆ ಬೇಕಾಬಿಟ್ಟಿಯಾಗಿ ವಾಹನ ಮಾಲೀಕರು ಪಾರ್ಕಿಂಗ್‌ ಮಾಡಿ ತೆರಳುತ್ತಾರೆ.

ಎರಡು ದೊಡ್ಡ ವಾಹನಗಳು ಪರಸ್ಪರ ಎದುರಾದರೆ ದಾಟಿ ಮುಂದಕ್ಕೆ ಸಾಗುವುದಕ್ಕೆ ಹರಸಾಹಸಪಡುವ ಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ವಾಹನಗಳು ರಸ್ತೆಯಲ್ಲೇ ಕಾರುಗಳನ್ನು ನಿಲ್ಲಿಸಿ ಹೋದರೆ ಸಂಚಾರಕ್ಕೆ ಪಜೀತಿಯುಂಟಾಗುತ್ತದೆ. ಹಾಗೇ ನೋ ಪಾರ್ಕಿಂಗ್‌ ಬೋರ್ಡ್‌ ಇರುವಲ್ಲಿಯೂ ನಿಲ್ಲಿಸುವುದರಿಂದ ಇನ್ನಷ್ಟು ಪಜೀತಿಯಾಗುತ್ತದೆ. ಇದಕ್ಕೆಲ್ಲ ಕಡಿವಾಣ ಹಾಕಲು ಲಾಕ್‌ ಅಳವಡಿಕೆಯ ಮೂಲಕ ಬಿಸಿ ಮುಟ್ಟಿಸಲು ಇಲಾಖೆ ಮುಂದಾಗಿದೆ.

ನಗರದಲ್ಲಿ ದಿನೇದಿನೇ ಟ್ರಾಫಿಕ್‌ ಸಮಸ್ಯೆ ಮಿತಿಮೀರುತ್ತಿದೆ. ಅದರಲ್ಲೂ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದು, ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್‌ ಮಾಡುವುದು, ನೋ ಪಾರ್ಕಿಂಗ್‌ ಸ್ಥಳದಲ್ಲೂ ನಿಲ್ಲಿಸುವುದು ಹೆಚ್ಚುತ್ತಿದೆ.

ವ್ಹೀಲ್‌ ಲಾಕ್‌.

ಟಾಪ್ ನ್ಯೂಸ್

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.