ಸೇವೆಯ ಸೌಭಾಗ್ಯ ಕೊಟ್ಟ‌ ಕ್ಷೇತ್ರದ ಜನತೆಗೆ ಭಾವನಾತ್ಮಕ ಪತ್ರ ಬರೆದ ಅನಂತ್!

ಲೋಕಸಭಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆ

Team Udayavani, Mar 24, 2024, 10:56 PM IST

ಸೇವೆಯ ಸೌಭಾಗ್ಯ ಕೊಟ್ಟ‌ ಕ್ಷೇತ್ರದ ಜನತೆಗೆ ಭಾವನಾತ್ಮಕ ಪತ್ರ ಬರೆದ ಅನಂತ್!

ಶಿರಸಿ: ಜನಕ್ಕೆ ಸೇವೆಯ ಸೌಭಾಗ್ಯ ಕೊಟ್ಟ ಜನ‌ಮನಕ್ಕೆ ಸಾಷ್ಟಾಂಗ ಪ್ರಣಾಮ ಎಂದು ಸಂಸದ ಅನಂತಕುಮಾರ ಹೆಗಡೆ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯಿಂದ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಂಚಿತ ಹಿಂದೂ ಹುಲಿ ಅನಂತಕುಮಾರ ಹೆಗಡೆ ಅವರ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅದರ ಪೂರ್ಣ ಪಾಠ ಇಲ್ಲಿದೆ.

ಈ ಭೂಮಿಯಲ್ಲಿ ಒಂದು ಲೌಕಿಕ ಬದುಕಿನಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನ್ನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು. ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ‌ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ  ನಾನು ಈ ಪೂಜೆಯನ್ನು ಎಲ್ಲಿಂದ ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ.

ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ಧನ ಆರಾಧನೆ. ಸರಿ‌ ಸುಮಾರು ೩೦ ವರ್ಷಗಳ ಲಾಲ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ‌ಪ್ರೀತಿ, ಸ್ನೇಹ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು. ಅದು ಅದಮ್ಯ.

ಯಾವುದೇ ಪೂಜೆ, ಆರಾಧ‌ನೆ ಅದು ಎಂದಿಗೂ‌ ಮುಗಿಯದ ಅನಂತ ಕಾಯಕ. ಈ ತಾಯ್ನೆಲದ ಪೂಜೆಯಲ್ಲಿ ಆಕೆಯ ಸೇವೆಯಲ್ಲಿ ನನ್ನನ್ನು‌ ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದ್ದಕ್ಕೆ ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದ ಪದ್ಮಗಳಿಗೆ ಅನಂತ‌ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ‌ ಮೂರು ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ . ಈ ಬದುಕಿನಲ್ಲಿ ಅದು ನನಗೊಂದು ಗುರುತು ನೀಡಿದೆ.ನಿಜಕ್ಕೂ ಅಷ್ಟೇ ಸಾಕು. ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೆ ಸಿಕ್ಕೀತು? ಎಂದೂ ಕೇಳಿದ್ದಾರೆ.

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ, ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ಮು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ ಮತ್ತೊಮ್ಮೆ ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯಾಂತರಾಳದ ಕೃತಜ್ಞತೆಗಳು ಎಂದು ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqe

Gokarana; ಮಹಾಬಲೇಶ್ವರ ಗರ್ಭಗುಡಿಯ ನಂದಿ ಪೂಜೆ ವಿವಾದ: ಪ್ರತಿಭಟನೆ!

8-sirsi

Sirsi: ಒಂದೇ ಊರಿನ ಇಬ್ಬರಿಗೆ 2ನೇ, 5ನೇ ರ‍್ಯಾಂಕ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.