Ankola; ನಕಲಿ ಮಂಗಳಮುಖಿಯ ಬಟ್ಟೆ ಬಿಚ್ಚಿ ಧರ್ಮದೇಟು!
Team Udayavani, Oct 14, 2023, 11:55 PM IST
ಅಂಕೋಲಾ: ಯುವತಿಯಂತೆ ವೇಷ ಹಾಕಿಕೊಂಡು, ಜನರ ಮೈ ಮುಟ್ಟಿ, ಅಸಭ್ಯವಾಗಿ ವರ್ತಿಸಿ ಹಣ ಕೇಳುತ್ತಿದ್ದ ವ್ಯಕ್ತಿಯನ್ನು ಅಸಲಿ ಮಂಗಳಮುಖಿಯರು ಹಿಡಿದು ಬಟ್ಟೆ ಬಿಚ್ಚಿಸಿ ಧರ್ಮದೇಟು ನೀಡಿದ ಘಟನೆ ಅಂಕೋಲಾದಲ್ಲಿ ನಡೆದಿದೆ.
ಕಾರವಾರ ಹಾಗೂ ಅಂಕೋಲಾ ಪಟ್ಟಣದಲ್ಲಿ ಸೂರಜ್ ಎನ್ನುವ ವ್ಯಕ್ತಿ ಮಂಗಳಮುಖೀ ವೇಷ ಧರಿಸಿ ಭಿಕ್ಷೆ ಬೇಡುತ್ತಾ ಹಣ ವಸೂಲಿ ಮಾಡುತ್ತಿದ್ದ. ಈ ವಿಷಯವನ್ನು ಅಸಲಿ ಮಂಗಳಮುಖಿಯರ ಅಂತರಂಗ ಸಂಘಟನೆ ಸದಸ್ಯೆ ಆಯಿಷಾ ಹೊನ್ನಾವರ ಅವರ ಗಮನಕ್ಕೆ ಸಾರ್ವಜನಿಕರು ತಂದಿದ್ದರು.
ಕೂಡಲೇ ಅಂಕೋಲಾ ಹಾಗೂ ಕಾರವಾರದಲ್ಲಿ ಕಾರ್ಯಾಚರಣೆಗೆ ಇಳಿದ ಮಂಗಳಮುಖಿಯರಾದ ಸಂಧ್ಯಾ ಉಡುಪಿ, ಉ.ಕ. ಅಂತರಂಗ ಸಂಘಟನೆ ಉಪಾಧ್ಯಕ್ಷೆ ಆಯಿಷಾ ಹೊನ್ನಾವರ, ಸುಹಾನಾ ಹಾಗೂ ಪಾರ್ವತಿ ಅವರು ಮಂಗಳಮುಖಿ ವೇಷದಲ್ಲಿದ್ದ ಪುರುಷನನ್ನು ಹಿಡಿದಿದ್ದಾರೆ.
ಚೂಡಿದಾರ ಧರಿಸಿ ಹೆಣ್ಣಿನಂತೆ ವಯ್ಯಾರ ಪ್ರದರ್ಶಿಸುತ್ತ ನಾಗರಿಕರಿಂದ ಹಣ ಕೇಳುತ್ತಿದ್ದ ಈತನ ಚೂಡಿದಾರ ಬಿಚ್ಚಿಸಿ ಮಂಗಳಾರತಿ ಮಾಡಿದ್ದಾರೆ. ನಿಜವಾದ ಮಂಗಳಮುಖಿಯರು ನಿಷ್ಠಾವಂತರಿದ್ದಾರೆ. ಆದರೆ ಇಂಥ ನಕಲಿ ಮಂಗಳಮುಖಿ ವೇಷಧಾರಿಗಳಿಂದ ನಿಜವಾದ ಮಂಗಳಮುಖೀಯರು ತಲೆ ತಗ್ಗಿಸುವಂತಾಗಿದೆ. ಈ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿ ಕಾರ್ಯಪ್ರವೃತ್ತರಾಗಬೇಕು ಎಂದು ನಾಗರಿಕರು ಆಗ್ರಹಿದ್ದಾರೆ.
ಸದ್ಯ ನವರಾತ್ರಿ ಹಾಗೂ ದೀಪಾವಳಿ ಹಬ್ಬ ಬರುತ್ತಿದ್ದು ಹೊರ ಜಿಲ್ಲೆಯಿಂದ ಕಾರವಾರ ಹಾಗೂ ಅಂಕೋಲಾಕ್ಕೆ ಮಂಗಳಮುಖಿಯರು ಬಂದು ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಇಂಥ ಮಂಗಳಮುಖಿಯರಿಗೆ ಅಂಜದೆ, ನಿರ್ಭೀತವಾಗಿ ಪೊಲೀಸ್ ಅಥವಾ ಅಂತರಂಗ ಸಂಘಟನೆ ಗಮನಕ್ಕೆ ತನ್ನಿ ಎಂದು ಆಯಿಷಾ ಹೊನ್ನಾವರ ತಿಳಿಸಿದ್ದಾರೆ.
ಚೂಡಿದಾರ ಧರಿಸಿ ಮಂಗಳಮುಖಿ ವೇಷ ಹಾಕಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ವ್ಯಕ್ತಿಯ ಅಸಲಿ ಮುಖವನ್ನು ಬಯಲು ಮಾಡಿದ್ದೇವೆ. ಈ ರೀತಿಯ ಘಟನೆಗಳು ಉ.ಕ. ಜಿಲ್ಲೆಯಲ್ಲಿ ಅನೇಕ ಕಡೆ ಕಂಡು ಬರುತ್ತಿದೆ. ಎಸ್ಪಿ ಅವರು ಈ ಬಗ್ಗೆ ವಿಶೇಷವಾಗಿ ಗಮನಹರಿಸಿ ಕಾರ್ಯಪ್ರವೃತ್ತರಾಗಬೇಕು ಎನ್ನುವುದು ನಮ್ಮ ಆಶಯವಾಗಿದೆ.
-ಆಯಿಷಾ ಹೊನ್ನಾವರ, ಉಪಾಧ್ಯಕ್ಷೆ ಅಂತರಂಗ ಸಂಘಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ
Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ