ಅಂಕೋಲಾ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ತಂದೆ-ಮಗ ಸಾವು
Team Udayavani, Dec 29, 2022, 11:12 PM IST
ಅಂಕೋಲಾ : ವಿಷ ಪದಾರ್ಥಗಳನ್ನು ಸೇವಿಸಿ ಆಂಧ್ರ ಪ್ರದೇಶ ಗುಂಟೂರು ಜಿಲ್ಲೆಯ ತಂದೆ ಮಗ ದಾರಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಗಂಗರಾಜು ವೆಕಂಟ ನಾಗಾ ನರಸಿಂಹ ರಾಘವ ದಿನಕರ ( 41) ಮತ್ತು ಪುತ್ರ ಗಂಗರಾಜು ವ್ಯಾಗ್ರೇಶ್ವರ ಕಾರ್ತಿಕೇಯ ತರುಣ (15) ಮೃತ ದುರ್ದೈವಿಗಳು. ಇವರು ತನ್ನ ಸಹೋದರಿ ಪದ್ಮಜಾರವರ ಆಂಧ್ರ ಪ್ರದೇಶದ ಮನೆಯಲ್ಲಿ ವಾಸವಿದ್ದರು.
ಡಿ 14 ರಂದು ಹೈದ್ರಾಬಾದ್ನಲ್ಲಿ ಅಡುಗೆ ಕೆಲಸ ಸಿಕ್ಕಿದ್ದು, ತನ್ನ ಮಗನನ್ನು ಕರೆದುಕೊಂಡು ಹೋಗಿದ್ದಾನೆ. ಅಲ್ಲಿಂದ ಹೊದವ ನೇರವಾಗಿ ಗೋಕರ್ಣ ಕಡೆಗೆ ಬಂದಿದ್ದು, ಯಾವುದೊ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ತಂದೆ ಮತ್ತು ಮಗ ಇಬ್ಬರೂ ಸೇರಿ ವಿಷ ಪದಾರ್ಥವನ್ನು ಸೇವಿಸಿ, ಡಿ. 24ರಂದು ಗೋಕರ್ಣದಿಂದ ಅಂಕೋಲಾ ಮೂಲಕ ಬಸ್ಸನಲ್ಲಿ ಹೋಗುತ್ತಿದ್ದಾಗ ಸಂಜೆ 6 ಗಂಟೆಯ ಸುಮಾರಿಗೆ ಅಂಕೋಲಾದ ಬಸ್ ನಿಲ್ದಾಣದ ಹತ್ತಿರ ಇಬ್ಬರೂ ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣ ಅವರಿಗೆ ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಾರವಾರ ಜಿಲ್ಲಾಸ್ಪತ್ರೆಗೆ ಕಳುಹಿಅಇದ್ದು, ಅಲ್ಲಿಂದ ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ಸಾಗಿಸಲಾಗಿತ್ತು.
ಹುಬ್ಬಳ್ಳಿಯಲ್ಲಿಯೂ ತಂದೆ ಮಗನಿಗೆ ಚಿಕಿತ್ಸೆ ಫಲಕಾರಿಯಾಗದೆ ತಂದೆ ಡಿ.27ರಂದು ಮಗ ಡಿ 28 ರಂದು ಮೃತ ಪಟ್ಟಿದ್ದಾರೆ. ಮೃತನ ಸಹೋದರಿ ಆಚ್ಚಂಟ ಪದ್ಮಜಾ ಡಿ. 29ರಂದು ಅಂಕೋಲಾ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA