ಅಂಕೋಲಾ ಅಪರಾಧ ಸುದ್ದಿಗಳು : ಮಟ್ಕಾ ಅಡ್ಡೆ ಮೇಲೆ ದಾಳಿ
ಯುವಕ ಆತ್ಮಹತ್ಯೆ, ಅಡಿಕೆ ಕಳವು
Team Udayavani, Sep 19, 2022, 10:18 PM IST
ಅಂಕೋಲಾ : ತಾಲೂಕಿನ ಅವರ್ಸಾದ ಮೀನು ಮಾರುಕಟ್ಟೆಯ ಬಳಿ ಮಟ್ಕಾ ಆಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸಕಲಬೇಣದ ನಿವಾಸಿ ಚಂದ್ರಶೇಖರ ಸದಾನಂದ ನಾಯ್ಕ(39), ಹಾಗೂ ಅವರ್ಸಾ ಗ್ರಾ.ಪಂ.ಸದಸ್ಯ ರಾಜೇಶ ಈರಾ ನಾಯ್ಕ ಇವರೇ ಬಂಧಿತ ಆರೋಪಿಗಳು. ದಾಳಿಯ ವೇಳೆ ಬಂಧಿತರಿಂದ ಓಸಿ ಆಟಕ್ಕೆ ಬಳಸಿದ ಸಾಮಗ್ರಿ ಹಾಗೂ ರೂ.680 ನಗದು ಹಣವನ್ನು ವಶಪಡಿಸಿಕೊಂಡಿದ್ದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಮನೆಯಲ್ಲಿನ ತನ್ನ ಕೋಣೆಯಲ್ಲಿಯೇ 35ರ ಯುವಕನೋರ್ವ ನೇಣಿಗೆ ಶರಣಾದ ಘಟನೆ ತಾಲೂಕಿನ ಭಾಸಗೋಡ ಕೊಗ್ರೆಯಲ್ಲಿ ಸೋಮವಾರ ನಡೆದಿದೆ.
ನಿತ್ಯಾನಂದ ಮಾರುತಿ ಆಗೇರ (35) ಈತನೇ ಮೃತ ದುರ್ದೈವಿ. ಸೋಮವಾರ ಮನೆಯಲ್ಲಿಯೇ ತನ್ನ ಮಲಗುವ ಕೋಣೆಯಲ್ಲಿ ಬಾಗಿಲು ಹಾಕಿಕೊಂಡು ಮನೆಯ ಜಂತಿಗೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾನೆ.
ಗೌಂಡಿ ಕೆಲಸವನ್ನು ಮಾಡಿಕೊಂಡಿದ್ದ ಈತ ಅತಿಯಾಗಿ ಸಾರಾಯಿ ಕುಡಿತದ ಚಟದಿಂದಾಗಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದ್ದು ಯಾವುದೋ ವಿಷಯಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಂಗಳದಲ್ಲಿಟ್ಟ 120 ಕೆಜಿ ಅಡಿಕೆ ಕದ್ದೊಯ್ದ ಕಳ್ಳರು
ಮಾರಾಟ ಮಾಡುವ ಸಲುವಾಗಿ ಮನೆಯಂಗಳದಲ್ಲಿ ಇಟ್ಟ ಸುಮಾರು 120 ಕೆಜಿ ಅಡಿಕೆಯನ್ನು ಯಾರೋ ಕಳ್ಳರು ಕದ್ದೊಯ್ದ ಘಟನೆ ತಾಲೂಕಿನ ಡೋಂಗ್ರಿ ಪಂಚಾಯತ ವ್ಯಾಪ್ತಿಯ ಕನಕನಹಳ್ಳಿಯಲ್ಲಿ ನಡೆದಿದೆ.
ಈ ಕುರಿತು ಮಹಾಬಲೇಶ್ವರ ನರಸಿಂಹ ಭಟ್ ಕನಕನಹಳ್ಳಿ ಇವರು ದೂರು ನೀಡಿದ್ದು ಇವರ ಮನೆಯಂಗಳದಲ್ಲಿ ಅಡಿಕೆಯನ್ನು ಒಣಗಿಸಿ ಮಾರಾಟ ಮಾಡುವ ಸಲುವಾಗಿ ಚೀಲಗಳಲ್ಲಿ ತುಂಬಿಡಲಾಗಿತ್ತು. ಈ ಪೈಕಿ 60 ಕೆಜಿಯ ಎರಡು ಅಡಿಕೆ ಚೀಲಗಳನ್ನು ಬುಧವಾರ ರಾತ್ರಿ ವೇಳೆಯಲ್ಲಿ ಯಾರೋ ಕಳ್ಳರು ಕದ್ದೊಯ್ದಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕಳವಿನ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ