ಅಂಕೋಲಾ ಸಂಜೀವ ಕೊಲೆ ಕೇಸ್‌:ಅಪ್ರಾಪ್ತ ವಯಸ್ಕ ಸೇರಿ ಇಬ್ಬರ ಬಂಧನ


Team Udayavani, Mar 23, 2018, 12:14 PM IST

2m.jpg

ಅಂಕೋಲಾ: ತಾಲೂಕಿನಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕೊಲೆ ಪ್ರಕರಣವೊಂದನ್ನು ಸ್ಥಳೀಯ ಪೊಲೀಸರು ಬೇಧಿಸಿದ್ದು ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಮಾ.16 ರಂದು ಸಂಜೀವ ದತ್ತಾ ಬಾನಾವಳಿಕರ (23) ಕೊಲೆಗೀಡಾದ ಯುವಕ. ಈತನನ್ನು ಹಾರವಾಡ ಗ್ರಾಮದ ವಿವೇಕ ದುರ್ಗಯ್ಯ ಖಾರ್ವಿ (23) ಹಾಗೂ ಬೇಲೆಕೇರಿಯ 17 ವರ್ಷದ ಯುವಕ ಕೊಲೆ ಆರೋಪಿಗಳು.

ಮಾ.15 ರಂದು ಬೇಲೆಕೇರಿ ನಿವಾಸಿ ಸಂಜೀವ ಬಾನಾವಳಿಕರ ಮನೆಯಿಂದ ಹೊದವನು ಮತ್ತೆ ಮರಳಿ ಬಂದಿರಲಿಲ್ಲ. ಆ ದಿನ ಪೂರ್ತಿ ಮನೆಯವರೆಲ್ಲ ಹುಡುಕಾಟ ನಡೆಸಿದ್ದಾರೆ. ಮಾ.16 ರಂದು ಸಂಜೆ ಸಂಜೀವನ ಮೃತದೇಹ ಹಾರವಾಡ ಸಮುದ್ರ ತೀರದಲ್ಲಿ ಪತ್ತೆಯಾಗಿತ್ತು. ಆಗ ಸಂಜೀವನ ಕುತ್ತಿಗೆ ಭಾಗದಲ್ಲಿ ಗಾಯದ ಕಲೆಗಳಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಆರೊಪಿಗಳ ಪತ್ತೆಗೆ ತಂಡ ರಚಿಸಿದ್ದರು.

ಅಣ್ಣನ ಸಾವಿನ ಸೇಡು
 ಡಿಸೆಂಬರ 14, 2016 ರಂದು ಬೇಲೆಕೇರಿಯಲ್ಲಿ ಗೌರೀಶ ಕುಡ್ತಲಕರ ಎನ್ನುವವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಈ ಸಾವು ಕೇವಲ ಸ್ವಾಭಾವಿಕವಾಗಿರದೇ ಐವರು ಸೇರಿ ಕೊಲೆ ಮಾಡಿದ್ದಾರೆ ಎಂದು ಗೌರೀಶ ಕುಡ್ತಲಕರ ಅವರ ಅಪ್ರಾಪ್ತ ವಯಸ್ಸಿನ ಸಹೋದರ ತಿಳಿದು, ಈ ಐವರನ್ನು ಸಹ ಹಂತ ಹಂತವಾಗಿ ಕೊಲೆ ಮಾಡಲು ತನ್ನ ಸ್ನೇಹಿತ ವಿವೇಕ ದುರ್ಗಯ್ಯ ಖಾರ್ವಿಗೆ ಸಹಾಯ ಪಡೆಯಲು ಮುಂದಾಗಿದ್ದ. ವಿವೇಕನಿಗೆ 5 ಸಾವಿರ ರೂ. ಹಣ ಹಾಗೂ 1 ಮೊಬೈಲ್‌ಗೆ ಸುಪಾರಿ ನೀಡಿ ಅಣ್ಣನ ಹತ್ಯೆಯ ಮೊದಲ ಪ್ರತೀಕಾರ ತೆಗೆದುಕೊಳ್ಳಲು ಸಂಚು ರೂಪಿಸಿ ಕೊಲೆ ಮಾಡಿದ ಆರೋಪವನ್ನು ಪೊಲೀಸರು ದಾಖಲಿಸಿದ್ದಾರೆ.

ಹತ್ಯೆಗೆ ಸಂಚು

ಮಾ.15 ರಂದು ಬೇಲೆಕೇರಿಯಿಂದ ಸಂಜೀವನನ್ನು ಬೈಕ್‌ ಮೇಲೆ ಕುರಿಸಿಕೊಂಡು ಹಾರವಾಡ ಸೇತುವೆ ಬಳಿಯ ಗದ್ದೆಯಲ್ಲಿ ಕರೆತಂದು ಕಂಠಪೂರ್ತಿ ಸಾರಾಯಿ ಕುಡಿಸಿ ನೈಲಾನ ಹಗ್ಗದಿಂದ ಕುತ್ತಿಗೆಗೆ ಬಿಗಿದು ಸಾಯಿಸಿದ್ದಾರೆ. ನಂತರ ಮೃತದೇಹವನ್ನು ಬೈಕ್‌ ಮೇಲೆ ಒಯ್ದು ಹಾರವಾಡ ಸಮುದ್ರಕ್ಕೆ ಎಸೆದು ಪರಾರಿಯಾಗಿದ್ದಾರೆ. ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಕಾಲ್‌ ಡಿಟೇಲ್ಸ್‌ ಪಡೆದು ಕಾರ್ಯಾಚರಣೆಗೆ ಮುಂದಾದಾಗ ಅಪ್ರಾಪ್ತ ವಯಸ್ಸಿನ ಬಾಲಕ ಕೊನೆಯ ಕರೆ ಮಾಡಿರುವುದು ಪತ್ತೆಯಾಗಿದೆ.

ಪೊಲೀಸರು ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿದಾಗ ವಿವೇಕ ಖಾರ್ವಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಕುರಿತು ಅನುಮಾನಕ್ಕೆ ಬಂದಿದ್ದರು. ಆದರೆ ವಿವೇಕ ಖಾರ್ವಿ ಊರಿನಲ್ಲಿ ಇರದೇ ಬೆಂಗಳೂರಿನತ್ತ ಹೊಗಿರುವುದು ಗಮನಕ್ಕೆ ಬಂದಿದೆ. ತಕ್ಷಣ ಕಾರ್ಯಾಚರಣೆ ನಡೆಸಿದ ಅಂಕೋಲಾ ಪೊಲೀಸರು ಮೊಬೈಲ್‌ ಟವರ ಲೊಕೇಶನ ಮೂಲಕ ಬೆಂಗಳೂರಿನ ಬಿಡದಿ ಬಳಿ ವಿವೇಕ ಖಾರ್ವಿಯನ್ನು ಬಂಧಿಸಿದ್ದಾರೆ.

ಆರೋಪಿಗಳಿಗೆ ಘೇರಾವ್‌
 ಕೊಲೆಗೈದ ಆರೋಗಳನ್ನು ಸ್ಥಳ ಪಂಚನಾಮೆಗಾಗಿ ಬೇಲೇಕೇರಿಗೆ ಪೊಲೀಸರು ಜೀಪನಲ್ಲಿ ಕರೆ ತಂದಾಗ ರೊಚ್ಚಿಗೆದ್ದ ಗ್ರಾಮಸ್ಥರು ಪೊಲೀಸ್‌ ವಾಹನ ತಡೆದು ಆರೋಪಿಯನ್ನು ತಮಗೆ ಒಪ್ಪಿಸುವಂತೆ ಹೇಳಿದರು. ಪರಿಸ್ಥಿತಿ ಕೈಮಿರುತ್ತದೆ ಎಂದರಿತ ಸಿಪಿಐ ಪ್ರಮೋದಕುಮಾರ ಬಿ. ವಾಹನ ಚಲಾಯಿಸಿಕೊಂಡು ಬಂದು ಬೇಲೇಕೇರಿ ಕರಾವಳಿ ಕಾವಲು ಪಡೆಯ ಠಾಣೆಯ ಒಳಕ್ಕೆ ಆರೋಪಿಗಳನ್ನು
ಹಾಕಿ ಪರಿಸ್ಥಿತಿಯನ್ನು ತಹಂಬದಿಗೆ ತರುವಲ್ಲಿ ಶ್ರಮಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.