ಪಕ್ಷಾಂತರ ನಿಷೇಧ ಕಾಯ್ದೆ ಅಗತ್ಯ
Team Udayavani, May 30, 2020, 6:36 AM IST
ಶಿರಸಿ: ಪಕ್ಷಾಂತರ ನಿಷೇಧ ಕಾಯ್ದೆಯನ್ನು ಇನ್ನಷ್ಟು ಪ್ರಬಲವಾಗಿ ರೂಪಿಸಬೇಕು. ಯಾರೇ ಪಕ್ಷಾಂತರ ಮಾಡಿದರೂ ಎರಡು ಚುನಾವಣೆಗೆ ನಿಲ್ಲದಂತೆ ಆಗಬೇಕು ಎಂದು ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದರು.
ಪಕ್ಷದ ಪ್ರಮುಖರ ಸಭೆ ನಡೆಸಿದ ಬಳಿಕ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕರಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದರು. ಬಿಜೆಪಿ ಆಂತರಿಕ ಸಂಗತಿ ಅವರ ಪಕ್ಷದ್ದು. ಯಾವುದೇ ಕಾರಣಕ್ಕೂ ಬಿಜೆಪಿ ಸರಕಾರ ಅಸ್ತಿರವಾದರೂ ಕಾಂಗ್ರೆಸ್ ಮರಳಿ ಚುನಾವಣೆಗೆ ಹೋಗುತ್ತದೆಯೇ ಹೊರತು ಸರಕಾರ ರಚನೆ ಮಾಡುವುದಿಲ್ಲ. ಅಷ್ಟು ಹಣ ಕೂಡ ನಮ್ಮಲ್ಲಿ ಇಲ್ಲ ಎಂದು ಹೇಳಿದರು.
ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಇಚ್ಛಾಶಕ್ತಿ ಕೊರತೆಯಿದೆ. ಎಲ್ಲ ಪಕ್ಷದವರೂ ಕೂಡಿ ಹೋರಾಟ ಮಾಡಿದರೆ ಸರಕಾರಗಳ ಗಮನ ಸೆಳೆಯಲು ಸಾಧ್ಯ ಎಂದ ಅವರು, ಕೋವಿಡ್ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವನ್ನು ಸರಕಾರ ಘೋಷಿಸಿದೆ. ಅದನ್ನು ಕೂಡಲೇ ಜಮಾ ಮಾಡಬೇಕು ಎಂದು ಆಗ್ರಹಿಸಿದರು. ಗ್ರಾಪಂಗೆ ಸಮಿತಿ ರಚಿಸಲು ಸರಕಾರ ತಯಾರಿ ನಡೆಸಿದೆ. ಇಂತಹ ಕಾರ್ಯಕ್ಕೆ ಮುಂದಾದರೆ ಕಾನೂನು ಹೋರಾಟ ನಡೆಸುತ್ತೇವೆ ಎಂದೂ ಹೇಳಿದರು.
ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಸುಷ್ಮಾ ರಾಜಗೋಪಾಲರೆಡ್ಡಿ, ಸಂತೋಷ ಶೆಟ್ಟಿ, ಎಸ್.ಕೆ. ಭಾಗÌತ, ಜಗದೀಶ ಗೌಡ, ದೀಪಕ ದೊಡೂxರು ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ