ಪಕ್ಷಾಂತರ ನಿಷೇಧ ಕಾಯ್ದೆ ಅಗತ್ಯ
Team Udayavani, May 30, 2020, 6:36 AM IST
ಶಿರಸಿ: ಪಕ್ಷಾಂತರ ನಿಷೇಧ ಕಾಯ್ದೆಯನ್ನು ಇನ್ನಷ್ಟು ಪ್ರಬಲವಾಗಿ ರೂಪಿಸಬೇಕು. ಯಾರೇ ಪಕ್ಷಾಂತರ ಮಾಡಿದರೂ ಎರಡು ಚುನಾವಣೆಗೆ ನಿಲ್ಲದಂತೆ ಆಗಬೇಕು ಎಂದು ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದರು.
ಪಕ್ಷದ ಪ್ರಮುಖರ ಸಭೆ ನಡೆಸಿದ ಬಳಿಕ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕರಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದರು. ಬಿಜೆಪಿ ಆಂತರಿಕ ಸಂಗತಿ ಅವರ ಪಕ್ಷದ್ದು. ಯಾವುದೇ ಕಾರಣಕ್ಕೂ ಬಿಜೆಪಿ ಸರಕಾರ ಅಸ್ತಿರವಾದರೂ ಕಾಂಗ್ರೆಸ್ ಮರಳಿ ಚುನಾವಣೆಗೆ ಹೋಗುತ್ತದೆಯೇ ಹೊರತು ಸರಕಾರ ರಚನೆ ಮಾಡುವುದಿಲ್ಲ. ಅಷ್ಟು ಹಣ ಕೂಡ ನಮ್ಮಲ್ಲಿ ಇಲ್ಲ ಎಂದು ಹೇಳಿದರು.
ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಇಚ್ಛಾಶಕ್ತಿ ಕೊರತೆಯಿದೆ. ಎಲ್ಲ ಪಕ್ಷದವರೂ ಕೂಡಿ ಹೋರಾಟ ಮಾಡಿದರೆ ಸರಕಾರಗಳ ಗಮನ ಸೆಳೆಯಲು ಸಾಧ್ಯ ಎಂದ ಅವರು, ಕೋವಿಡ್ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವನ್ನು ಸರಕಾರ ಘೋಷಿಸಿದೆ. ಅದನ್ನು ಕೂಡಲೇ ಜಮಾ ಮಾಡಬೇಕು ಎಂದು ಆಗ್ರಹಿಸಿದರು. ಗ್ರಾಪಂಗೆ ಸಮಿತಿ ರಚಿಸಲು ಸರಕಾರ ತಯಾರಿ ನಡೆಸಿದೆ. ಇಂತಹ ಕಾರ್ಯಕ್ಕೆ ಮುಂದಾದರೆ ಕಾನೂನು ಹೋರಾಟ ನಡೆಸುತ್ತೇವೆ ಎಂದೂ ಹೇಳಿದರು.
ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಸುಷ್ಮಾ ರಾಜಗೋಪಾಲರೆಡ್ಡಿ, ಸಂತೋಷ ಶೆಟ್ಟಿ, ಎಸ್.ಕೆ. ಭಾಗÌತ, ಜಗದೀಶ ಗೌಡ, ದೀಪಕ ದೊಡೂxರು ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ