ಎಪಿಎಂಸಿ ಮುಖ್ಯ ದ್ವಾರ ಪರಿಶೀಲನೆ


Team Udayavani, May 31, 2020, 6:57 AM IST

ಎಪಿಎಂಸಿ ಮುಖ್ಯ ದ್ವಾರ ಪರಿಶೀಲನೆ

ಶಿರಸಿ: ಕೋವಿಡ್‌ 19 ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ರೈತರ ಹಿತದೃಷ್ಟಿಯಿಂದ ಎಪಿಎಂಸಿ ಆವಾರದೊಳಗೆ ಸಾರ್ವಜನಿಕ ವಾಹನಗಳ ಅನಗತ್ಯ ಪ್ರವೇಶಕ್ಕೆ ಕಡಿವಾಣ ಹಾಕಲು ನಿರ್ಧರಿಸಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ವಿಶ್ವನಾಥ ಹೆಗಡೆ ಶೀಗೆಹಳ್ಳಿ ತಿಳಿಸಿದ್ದಾರೆ.

ಎಪಿಎಂಸಿ ಆವಾರದೊಳಗೆ ಹೆಚ್ಚಿನ ಬಂದೋಬಸ್ತ್ ಒದಗಿಸುವ ನಿಟ್ಟಿನಲ್ಲಿ ಮೂರು ಮುಖ್ಯ ದ್ವಾರಗಳಿಗೆ ಪ್ರತ್ಯೇಕ ಗೇಟ್‌ ವ್ಯವಸ್ಥೆ ಮಾಡಲಾಗುತ್ತಿದೆ. ಟಿಆರ್‌ಸಿ ಬ್ಯಾಂಕ್‌ ಹಿಂಭಾಗ ಹಾಗೂ ಟಿಎಸ್‌ಎಸ್‌ ಪಕ್ಕದಲ್ಲಿ ಗೇಟ್‌ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದ್ದು, ಟಿಎಂಎಸ್‌ ಪಕ್ಕದಲ್ಲಿ ಗೇಟ್‌ ಅಳವಡಿಕೆ ಇನ್ನೊಂದು ವಾರದೊಳಗೆ ಅಂತ್ಯಗೊಳ್ಳಲಿದೆ.

ಎಪಿಎಂಸಿ ಆವಾರದಲ್ಲಿ ರಾತ್ರಿ ವೇಳೆ ಹೊರ ಭಾಗಗಳಿಂದ ಆಗಮಿಸಿದ ಹಾಗೂ ಖಾಸಗಿ ವಾಹನಗಳು ನಿತ್ಯ ಪಾರ್ಕಿಂಗ್‌ ಮಾಡುತ್ತಿರುವುದು ಕಂಡುಬಂದಿತ್ತು. ಖಾಸಗಿ ವಾಹನಗಳ ಮಾಲೀಕರಿಗೆ ಈಗಾಗಲೆ ನೋಟಿಸ್‌ ನೀಡಿ ಎಚ್ಚರಿಕೆ ಕೂಡ ನೀಡಲಾಗಿದೆ. ಸರ್ಕಾರದ ಆದೇಶದಂತೆ ಮೂರು ಗೇಟುಗಳ ಪೈಕಿ ಟಿಆರ್‌ಸಿ ಬ್ಯಾಂಕ್‌ ಹಿಂಬದಿಯಲ್ಲಿನ ಗೇಟ್‌ನ್ನು ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಬಂದ್‌ ಮಾಡಲಾಗಿದೆ. ಸಾರ್ವಜನಿಕರು ಮಾರುಕಟ್ಟೆಯ ಹೊರ ವಲಯದ ರಸ್ತೆ ಬಳಸಬೇಕೆಂದು ಮನವಿ ಮಾಡಿದ್ದಾರೆ.

ಮಾರುಕಟ್ಟೆಯೊಳಗೆ ಆಗಮಿಸುವ ಹೊರ ರಾಜ್ಯಗಳ ವಾಹನಗಳು ಟಿಎಸ್‌ಎಸ್‌ ಪಕ್ಕದ ಗೇಟ್‌ ಮೂಲಕ ಆಗಮಿಸಿ ಟಿಎಮ್‌ಎಸ್‌ ಪಕ್ಕದ ಗೇಟ್‌ ಮೂಲಕ ನಿರ್ಗಮಿಸಬೇಕು. ಹೊರ ಭಾಗಗಳಿಗಂದ ಆಗಮಿಸುವ ವಾಹನ ಚಾಲಕರು, ಕ್ಲೀನರ್‌ಗಳ ಸಂಪೂರ್ಣ ವಿವರ, ವಾಹನದ ಆಗಮನ ಹಾಗೂ ನಿರ್ಗಮನ ವೇಳೆಯನ್ನು ಗೇಟ್‌ ಬಳಿಯಲ್ಲಿರುವ ಅಧಿಕಾರಿಗಳು ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ತಹಶೀಲ್ದಾರ್‌ ಎಂ.ಆರ್‌ ಕುಲಕರ್ಣಿ, ಮಾರ್ಕೆಟ್‌ ಯಾರ್ಡ್‌ ಪಿಎಸ್‌ಐ ನಾಗಪ್ಪ ಬಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಪಿಎಂಸಿ ಮುಖ್ಯ ಕಾರ್ಯನಿರ್ವಾಹಕಿ ವಿಜಯಲಕ್ಷ್ಮೀ ಸೇರಿದಂತೆ ಎಪಿಎಂಸಿ ಸದಸ್ಯರು, ಅಧಿ ಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.