ಆ್ಯಪ್‌ನಲ್ಲಿ ಅಡಕೆ ಬದಲು ಬಾಳೆ!

ಪಹಣಿಯಲ್ಲಿ ಎಡವಟ್ಟು: ಬೆಳೆಗಾರರಿಗೆ ದಿಗಿಲು,ಮುಖ್ಯ ಬೆಳೆ ಬದಲಾಯಿಸಿದ ಆ್ಯಪ್‌

Team Udayavani, Feb 24, 2021, 5:11 PM IST

ಆ್ಯಪ್‌ನಲ್ಲಿ ಅಡಕೆ ಬದಲು ಬಾಳೆ!1

ಶಿರಸಿ: ರೈತರ ಪಹಣಿಯಲ್ಲಿ ರೈತರೇ ಬೆಳೆ ನೋಂದಣಿ ಮಾಡಿಕೊಳ್ಳುವಂತೆ ಸಿದ್ಧಪಡಿಸಿಅನುಷ್ಠಾನಗೊಳಿಸಿದ ಆ್ಯಪ್‌ನಲ್ಲಿ ಮುಖ್ಯ ಬೆಳೆಯನ್ನೇ ಬದಲಾಯಿಸಿ ಎಡವಟ್ಟು ಮಾಡಿದ ಪ್ರಸಂಗ ನಡೆದಿದೆ.

ಇದರಿಂದ ಅನೇಕ ಬೆಳೆಗಾರರಿಗೆ ದಿಗಿಲು ಸೃಷ್ಟಿಸಿದ್ದು, ಕೆಳಸ್ಥರದ ಅಧಿಕಾರಿಗಳು ಸಾಫ್ಟ್ ವೇರ್‌ ಬೈಯ್ಯುವಂತಾಗಿದೆ. ಕಳೆದ ಜೂನ್‌, ಜುಲೈ, ಆಗಸ್ಟ್‌ನಲ್ಲಿಬೆಳೆಗಾರರ ಕೈಗೆ ಮೊಬೈಲ್‌ ಮೂಲಕ ಸಾಫ್ಟ್ ವೇರ್‌ ನೀಡಿ, ಕೆಲವೆಡೆ ಕೃಷಿ ಇಲಾಖೆಮೂಲಕ ಜನರನ್ನು ನೇಮಿಸಿ ಬೆಳೆ ಸರ್ವೇಮಾಡಲಾಗಿತ್ತು. ಅಂದು ಮಾಡಿದ ಬೆಳೆ ಸರ್ವೇ ಇದೀಗ ಪಹಣಿಯಲ್ಲೂದಾಖಲಾಗಿದ್ದು, ಮುಖ್ಯ ಬೆಳೆಯ ಕಾಲಂನಲ್ಲಿ ಇರಬೇಕಿದ್ದ ಅಡಕೆ ಬದಲಿಗೆ ಬಾಳೆ ಎಂದುಬರೆಯಲಾಗಿದೆ. ಅಡಕೆ ಬೆಳೆಗಾರರ ಭಾಗಾಯ್ತ ಕಾಲಂನಲ್ಲಿ ನಿಲ್‌ ಮಾಡಿದೆ. ಮುಖ್ಯವಾಗಿ ಒಂದೇ ಬೆಳೆ ದಾಖಲಿಸಿದ್ದಪಹಣಿಯಲ್ಲಿ ಈ ಎಡವಟ್ಟು ಆಗಿಲ್ಲ.ಬದಲಿಗೆ ಅಡಕೆಯಂತಹ ಮಿಶ್ರ ಬೆಳೆಯ ತೋಟದಲ್ಲಿ ಈ ಸಮಸ್ಯೆ ಉಂಟಾಗಿದೆ. ಬಹುವಾರ್ಷಿಕ ಅಡಕೆಯ ಬದಲಿಗೆ ಬಾಳೆ ಮುಖ್ಯ ಬೆಳೆಯಾದರೆ, ಅಡಕೆ, ಕಾಳು ಮೆಣಸು, ಏಲಕ್ಕಿಗಳು ಉಪ ಬೆಳೆಯಾಗಿ ಗುರುತಾಗಿದೆ.

ಇದು ರೈತರಿಗೆ ಏಪ್ರಿಲ್‌ನಲ್ಲಿ ಸಿಗಬೇಕಾದ ಬೆಳೆ ಸಾಲಕ್ಕೂ, ಬೆಳೆವಿಮೆಗೂ ಸಂಕಷ್ಟ ತಂದೊಡ್ಡಲಿದೆ.ಸರಕಾರದ ಈ ಆ್ಯಪ್‌ನಲ್ಲಿ ಮೊದಲೇ ಮುಖ್ಯ ಬೆಳೆ, ಅಂತರ ಬೆಳೆ ಪ್ರತ್ಯೇಕವಾಗಿ ದಾಖಲಿಸಲು ಅವಕಾಶ ನೀಡಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ. ಬದಲಿಗೆ ಎಲ್ಲವೂ ಮುಖ್ಯ ಹಾಗೂ ಅಂತರ ಬೆಳೆ ಎಂದು ದಾಖಲಿಸಲು ಅವಕಾಶ ಮಾಡಿತ್ತು. ಭಾಗಾಯ್ತದ ಪ್ರಸ್ತಾಪ ಕೂಡ ಇಲ್ಲವಾಗಿತ್ತು. ಈ ಕುರಿತು ಬೆಳೆ ಸರ್ವೇ ಆ್ಯಪ್‌ ಕುರಿತು “ಉದಯವಾಣಿ’ ಆಗಸ್ಟ್‌ 22 ರಂದೇ ವರದಿ ಮಾಡಿತ್ತು. ಕೃಷಿ ಸಚಿವ ಬಿ.ಸಿ. ಪಾಟೀಲರು ಶಿರಸೀಲಿ ಇದು ಗೊಂದಲ ಆಗದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

ಈಗ ಮುಖ್ಯ ಬೆಳೆ ಮಿಶ್ರ ಬೆಳೆ ಕಾಲಂಗೆ ಹೋಗಿದ್ದರಿಂದ ಬೆಳೆ ಸಾಲ ಹಾಗೂ ಬೆಳೆವಿಮೆ ಎರಡಕ್ಕೂ ಸಮಸ್ಯೆ ಆಗುವ ಸಾಧ್ಯತೆಇದೆ. ಅಡಕೆ ಬೆಳೆಗಾರರ ಭಾಗಾಯ್ತ ಕೂಡ ದಾಖಲಾಗಿಲ್ಲ. ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರ ಶಿಫಾರಸ್ಸು ಮೂಲಕ ಈ ಪಹಣಿಯ ದುರಸ್ತಿ ಮಾಡುವ ಅಧಿಕಾರ ಉಪ ತಹಶೀಲ್ದಾರರು ಅಥವಾ ತಹಶೀಲ್ದಾರರಿಗೆ ನೀಡಬೇಕು. ಆ್ಯಪ್‌ನಲ್ಲೂ ಮುಖ್ಯಬೆಳೆ, ಅಂತರ ಬೆಳೆ, ಬದುವಿನ ಬೆಳೆ ಎಂದು ಪ್ರತ್ಯೇಕವಾಗಿ ದಾಖಲಿಸಿ ಭೂಮಿ ಸಾಫ್ಟ್‌ವೇರ್‌ಗೆಕೊಡುವಂತಾಗಬೇಕು. ಹಾಗಾದಾಗ ಮಾತ್ರ ಈ ಗೊಂದಲಕ್ಕೆ ಶೀಘ್ರ ತೆರೆ ಎಳೆಯಬಹುದು. ಕೋವಿಡ್ ಸಂಕಷ್ಟದ ಬೆನ್ನಲ್ಲೇ ಪಹಣಿ ಸಂಕಷ್ಟ ರೈತರನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇದೆ.

ಬಹು ವಾರ್ಷಿಕ ಬೆಳೆ ಹಾಗೂ ಮಿಶ್ರ ಬೆಳೆ ಇದ್ದಲ್ಲಿ ಈ ಸಮಸ್ಯೆ ಆಗಿದ್ದು ಗಮನಕ್ಕೆ ಬಂದಿದೆ. ಪರಿಹಾರ ಕುರಿತು ಸಂಬಂಧಪಟ್ಟವರ ಜತೆಸಮಾಲೋಚಿಸಿ ರೈತರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. –ಎಚ್‌.ಕೆ. ಕೃಷ್ಣಮೂರ್ತಿ, ಅಪರ ಜಿಲ್ಲಾಧಿಕಾರಿ, ಉತ್ತರ ಕನ್ನಡ.

ಪಹಣಿಯಲ್ಲಿ ಅಡಕೆ ಪ್ರಧಾನ ಬೆಳೆ. ಆದರೆ, ಬಾಳೆ ಎಂದು ದಾಖಲಾಗಿದೆ. ಸರಕಾರವೇ ಇದನ್ನು ದುರಸ್ತಿ ಮಾಡಿ ರೈತರ ಅಲೆದಾಟ, ಆತಂಕ ತಪ್ಪಿಸಬೇಕು. – ಜಗದೀಶ ಬಾಳೇಹದ್ದ, ರೈತ. -ರಾಘವೇಂದ್ರ ಬೆಟ್ಟಕೊಪ್ಪ

 

-ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.