ಅಡಿಕೆಗೆ ಎಲೆಚುಕ್ಕೆ ಮತ್ತು ಪರ್ಯಾಯ ಮುಂದೇನು? ಶಿರಸಿಯಲ್ಲಿ ಸಮಾಲೋಚನೆ!


Team Udayavani, Mar 14, 2023, 8:55 PM IST

ಅಡಿಕೆಗೆ ಎಲೆಚುಕ್ಕೆ ರೋಗ ಮತ್ತು ಪರ್ಯಾಯ ಮುಂದೇನು? ಶಿರಸಿಯಲ್ಲಿ ಸಮಾಲೋಚನೆ!

ಶಿರಸಿ: ಅಡಿಕೆಗೆ ಕಳೆದ ನಾಲ್ಕೈದು ವರ್ಷಗಳಿಂದ ತಗುಲಿರುವ ಎಲೆ ಚುಕ್ಕೆ ರೋಗ ಭಾರೀ ಹಾನಿ ಮಾಡುತ್ತಿದ್ದು, ಇದರ ಕುರಿತು ಹಾಗೂ ಪರ‍್ಯಾಯ ವ್ಯವಸ್ಥೆಯ ಕುರಿತು ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ತಜ್ಞ ಡಾ.ವೆಂಕಟ್ರಮಣ ಹೆಗಡೆ ತಿಳಿಸಿದ್ದಾರೆ.

ಈಗಾಗಲೇ ಕಳಸ, ಶೃಂಗೇರಿ, ತೀರ್ಥಹಳ್ಳಿ ಭಾಗಗಳಲ್ಲಿ ಈಗಾಗಲೇ ಶೇ. 25ರಿಂದ 95 ರಷ್ಟು ಫಸಲು ನಷ್ಟ ಆಗುತ್ತಿದೆ. ಕೊಲೆಟೊಟ್ರೈಕಂ ಗ್ಲಿಯೋಸ್ಪೊರೈಡ್ಸ ಮತ್ತಿತರೆ ಶಿಲೀಂಧ್ರಗಳ ಸಂಯೋಜಿತ ಧಾಳಿಯಿಂದ ಬರುವ ಈ ರೋಗ ನಿಧಾನವಾಗಿ ಇತರೆ ಸಾಂಪ್ರದಾಯಿಕ ಅಡಿಕೆ ಬೆಳೆ

ಪ್ರದೇಶಗಳಿಗೆ ಹಬ್ಬುತ್ತಿದೆ. ಶಿರಸಿಯ ಭಾಗಕ್ಕೆ ಇದೇ ಸಪ್ಟೆಂಬರಿನಲ್ಲಿ ಕಾಲಿಟ್ಟಿದೆಯಾದರೂ ಈಗಾಗಲೇ ನೇರ್ಲದ್ದ, ಗೋಳಿ, ಜಾನ್ಮನೆ, ಬಾಳೇಸರ ಮುಂತಾದ ಭಾಗಗಳಲ್ಲಿ ಸಾಕಷ್ಟು ಹಾನಿ ಮಾಡಿದೆ.

ಈ ಶಿಲೀಂಧ್ರಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಔಷಧಗಳು ಇವೆಯಾದರೂ ಸಪ್ಟೆಂಬರ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪರಿಣಾಮಕಾರೀ ಸಾಮೂಹಿಕ ಸಿಂಪಡಣೆ ಸಾಧ್ಯವಾಗದಿರುವುದು ಮುಂತಾದ ಕಾರಣಗಳಿಂದ ಕ್ಷೇತ್ರ ಮಟ್ಟದಲ್ಲಿ ರೋಗ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಹಳದಿ ಎಲೆ ರೋಗದಂತೆ ಈ ಎಲೆಚುಕ್ಕೆ ರೋಗ ಕೂಡ ಖಾಯಂ ಆಗುವ ಅಪಾಯ ಕಂಡುಬರುತ್ತಿದೆ. ಹಾಗಾಗಿ ರೈತರು ಸಾಧ್ಯವಿರುವ ಎಲ್ಲ ಉಪಬೆಳೆ ಅಂತರ ಬೆಳೆಗಳನ್ನು ಈ ಕೂಡಲೆ ಆರಂಭಿಸಿ ಅಡಿಕೆ ಫಸಲಿನಲ್ಲಾಗಬಹುದಾದ ನಷ್ಟವನ್ನು ಸರಿದೂಗಿಸಲು ಮುಂದಾಗಬೇಕಿದೆ.

ಆದರೆ, ಬಹುತೇಕ ಬೆಳೆಗಾರರು ಅವೈಜ್ಞಾನಿಕ ಸುದ್ದಿಗಳನ್ನು ನಂಬಿ ನಮ್ಮ ಅಡಿಕೆಗೆ ಏನೂ ಆಗಲಿಕ್ಕಿಲ್ಲ ಎಂಬ ಭ್ರಮೆಯಲ್ಲಿ ರೋಗ ಪ್ರಸಾರ ನೋಡಿಯೂ ದಿನ ದೂಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಬೆಳೆಗಾರರನ್ನು ಎಚ್ಚರಿಸಿ, ಪರ್ಯಾಯ ಬೆಳೆಗಳ ಕುರಿತು ಮಾರ್ಗದರ್ಶನ ಮಾಡಲು ನಗರದಲ್ಲಿ ಮಾ೧೮ರಂದು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಫಾರ್ಮ್‌ಟಿವಿ, ಟಿ.ಎಸ್.ಎಸ್. ಹಾಗೂ ಟಿ.ಎಂ.ಎಸ್.ಗಳ ಸಹಯೋಗದಲ್ಲಿ ಎ.ಪಿ.ಎಂ.ಸಿ. ಮಾರುಕಟ್ಟೆ ಪ್ರಾಂಗಣದ ಟಿ.ಆರ್.ಸಿ. ಬ್ಯಾಂಕಿನ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದೆ. ಉತ್ತರ ಕನ್ನಡ ಜಿಲ್ಲೆಯ ರೈತರಲ್ಲದೇ ಯಾವುದೇ ಭಾಗದ ಅಡಿಕೆ ಬೆಳೆಗಾರರು ಉಚಿತವಾಗಿ ಭಾಗವಹಿಸಬಹುದು. ಹಿರಿಯ ವಿಜ್ಞಾನಿ ಡಾ. ವೇಣುಗೋಪಾಲ ಹಾಗೂ ಅನುಭವಿ ಬೆಳೆಗಾರರು ಮಾರ್ಗದರ್ಶನ ಮಾಡಲಿದ್ದಾರೆ. ಮುಂಜಾನೆ ರೋಗದ ತೀವೃತೆ ಚರ್ಚೆಯಾದರೆ, ಮದ್ಯಾಹ್ನ ಪರ್ಯಾಯಗಳ ವಿಮರ್ಶೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 9980534320 ಸಂಪರ್ಕಿಸಬಹುದು ಎಂದು ಡಾ.ಹೆಗಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದ್ರಾಕ್ಷಿ-ವೈನ್ ಬೋರ್ಡ್ ಅಧ್ಯಕ್ಷರಾಗಿ ರುದ್ರಗೌಡರ ಅಧಿಕಾರ ಸ್ವೀಕಾರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.